AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಸಾಗರ್ ಖಂಡ್ರೆ ಮನೆ ವಿದ್ಯುತ್ ಸಂಪರ್ಕ ಕಡಿತ ಮಾಡಿದ ವ್ಯಕ್ತಿ ಮೇಲೆ FIR

ಸಂಸದ ಸಾಗರ್ ಖಂಡ್ರೆ ಅವರ ಬೆಂಗಳೂರಿನ ಮನೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ಕೃಷ್ಣ ಅಪಾರ್ಟಮೆಂಟ್‌ನ ಮ್ಯಾನೇಜರ್ ಚಂದ್ರಕುಮಾರ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮನೆ ನವೀಕರಣ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿದ್ಯುತ್ ಕಡಿತಗೊಳಿಸಿದವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಲಾಗಿದೆ.

ಸಂಸದ ಸಾಗರ್ ಖಂಡ್ರೆ ಮನೆ ವಿದ್ಯುತ್ ಸಂಪರ್ಕ ಕಡಿತ ಮಾಡಿದ ವ್ಯಕ್ತಿ ಮೇಲೆ FIR
ಸಂಸದ ಸಾಗರೆ ಖಂಡ್ರೆ
ವಿವೇಕ ಬಿರಾದಾರ
|

Updated on: Apr 06, 2025 | 6:00 PM

Share

ಬೆಂಗಳೂರು, ಏಪ್ರಿಲ್​ 06: ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ (Eshwar Khandre) ಪುತ್ರ ಸಂಸದ ಸಾಗರ್ ಖಂಡ್ರೆ (Sagar Khandre) ಅವರ ಮನೆಯ ವಿದ್ಯುತ್ ಕಡಿತಗೊಳಿಸಿದ ವ್ಯಕ್ತಿಗಳ ವಿರುದ್ಧ ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ (Vidhan Soudha Police Station) ಎಫ್​ಐಆರ್​ ದಾಖಲಾಗಿದೆ. ಸದ್ಯ ವಿಧಾನಸೌಧ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಶ್ರೀ ಕೃಷ್ಣ ಅರ್ಪಾಟಮೆಂಟ್ (KAOWA) ನ ನಂ-103, ಬ್ಲ್ಯಾಕ್-01ನಲ್ಲಿ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಪುತ್ರ ಹಾಗೂ ಸಂಸದ ಸಾಗರ ಖಂಡ್ರೆ ವಾಸವಾಗಿದ್ದಾರೆ. ಪ್ರಸ್ತುತ ಈ ಮನೆಯನ್ನು ಕೃಷ್ಣ ಅರ್ಪಾಟಮೆಂಟ್ಸೊ ಸೈಟಿಯಿಂದ ಪೂರ್ವಾನುಮತಿಯನ್ನು ಪಡೆದುಕೊಂಡು ನವೀಕರಣಮಾಡಲಾಗುತ್ತಿದೆ. ನವೀಕರಣದ ವೇಳೆ ಮೆಟ್ಟಿಲುಗಳಿಗೆ ಬೆಳಕಿನ ವ್ಯವಸ್ಥೆ ಮಾಡಲು ವೈರ್​ನ್ನು ಎಳೆಯಲಾಗಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಏಪ್ರಿಲ್​ 2 ರಂದು ಮಧ್ಯಾಹ್ನ ಸುಮಾರು 04:30 ಗಂಟೆ ಸಮಯದಲ್ಲಿ ಅಪಾರ್ಟಮೆಂಟ್​ನ ಮ್ಯಾನೇಜರ್ ಚಂದ್ರಕುಮಾರ ಎಂಬುವರು ನವೀಕರಣ ಕಾಮಗಾರಿ ಮಾಡುತ್ತಿರುವ ಕಾರ್ಮಿಕರನ್ನು ಅಡ್ಡಗಟ್ಟಿ, ಕಾರ್ಮಿಕರಿಗೆ ಮನಬಂದಂತೆ ಅವಾಚ್ಯ ಶಬ್ದಗಳಿಂದ ಬೈದಿದಿದ್ದಾರೆ.

ಈ ಬಗ್ಗೆ ಮನೆಯ ಮಾಲೀಕ ಸಾಗರ ಖಂಡ್ರೆ ಅಥವಾ ಈಶ್ವರ ಖಂಡ್ರೆ ಅಥವಾ ಅವರ ಕುಟುಂಬ ಸದಸ್ಯರಿಗಾಗಲಿ ಅಥವಾ ಸಚಿವರ ಆಪ್ತ ಸಹಾಯಕರಿಗೆ ಮಾಹಿತಿ ನೀಡದೆ ಏಕಾಏಕಿ ಮನೆಯ ವಿದ್ಯುತ್ ಸಂಪರ್ಕವನ್ನು ಖಡಿತಗೊಳಿಸಲಾಗಿದೆ. ಈ ವಿಚಾರವಾಗಿ ಮ್ಯಾನೇಜರ್​ಗೆ ಅದೇ ದಿನ ಸಂಜೆ 04:40 ಸುಮಾರಿಗೆ ಕರೆ ಮಾಡಿ ಸಚಿವರ ಆಪ್ತ ಸಹಾಯಕ ವಿಚಾರಿಸಿದಾಗ, ಕೃಷ್ಣ ಅಪಾರ್ಟಮೆಂಟ್ ಸೆಕ್ರೆಟರಿ ಆದೇಶದಂತೆ ವಿದ್ಯತ್ ಖಡಿತಗೊಳಿಸಿದ್ದೇನೆ ಎಂದು ಹೇಳಿ ಫೋನ್​ನ್ನು ಸ್ವಿಚ್ ಆಫ್ ಮಾಡಿದ್ದಾರೆ.

ಇದನ್ನೂ ಓದಿ
Image
BBMPಯಿಂದ ಶಾಕ್: ಮನೆ ಕಾಂಪೌಂಡ್​ ಒಳಗಿನ ಪಾರ್ಕಿಂಗ್​ಗೆ ಕಟ್ಟಬೇಕು​ ಶುಲ್ಕ
Image
ಈ ಸೈಟ್​ನಲ್ಲಿ ಅರ್ಜಿ ಸಲ್ಲಿಸಿದ್ರೆ ಎರಡೇ ದಿನಗಳಲ್ಲಿ ಸಿಗುತ್ತೆ ಇ ಖಾತಾ!
Image
BBMP Budget 2025: ಬ್ರ್ಯಾಂಡ್ ಬೆಂಗಳೂರಿಗೆ ಒತ್ತು ನೀಡಿದ ಬಿಬಿಎಂಪಿ ಬಜೆಟ್
Image
BBMP ಆಸ್ತಿ ತೆರಿಗೆ ಮಾರ್ಚ್​ 31 ಗಡುವು: 390 ಕೋಟಿ ರೂ ಆಸ್ತಿ ತೆರಿಗೆ ಬಾಕಿ

ಇದನ್ನೂ ಓದಿ: ಅನಧಿಕೃತವಾಗಿ ಕಟ್ಟಡ ನಿರ್ಮಿಸಿದವರಿಗೆ ಶಾಕ್ ಕೊಟ್ಟ ಬಿಬಿಎಂಪಿ

ವಿನಾಕಾರಣ ತಗಾದೆ ತೆಗೆದು ಪದೆ ಪದೆ ತೊಂದರೆ ನೀಡುತ್ತಿರುವ ಕೃಷ್ಣ ಅಪಾರ್ಟಮೆಂಟ್ ಮ್ಯಾನೆಜರ್ ಹಾಗೂ ವಿದ್ಯತ್ ಸಂಪರ್ಕ ಕಡಿತಗೊಳಿಸಲು ಹೇಳಿದವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ದಾಖಲಸಿದ್ದಾರೆ.

ವರದಿ: ಪ್ರದೀಪ್​ ಚಿಕ್ಕಾಟಿ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ