Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕ ರಹಿತ ಮೆಟ್ರೋ ರೈಲು ಸಂಚಾರ​ ಪರಿಶೀಲಿಸಿದ ಸಂಸದ ತೇಜಸ್ವಿ ಸೂರ್ಯ

ಒಟ್ಟು 18.82 ಕಿ.ಮೀ ಇರುವ ಹಳದಿ ಮಾರ್ಗದಲ್ಲಿ ಬಿಎಂಆರ್​ಸಿಎಲ್​ನ ಬಹು ನಿರೀಕ್ಷಿತ ಚಾಲಕ ರಹಿತ ಮೆಟ್ರೋ ಸಂಚರಿಸಲಿದ್ದು, ಇದರ ಪ್ರಯೋಗಾರ್ಥ ಸಂಚಾರ ಆರಂಭಗೊಂಡಿದೆ. ಈ ಹಿನ್ನಲೆ ಇಂದು(ಮಾ.08) ಚಾಲಕ ರಹಿತ ಮೆಟ್ರೋ ಟ್ರಯಲ್​ನ್ನು ಪರಿಶೀಲಿಸಿದ ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರು, ಮೆಟ್ರೋ ಟ್ರೈನ್​ನಲ್ಲಿ ಕುಳಿತು ಸಂಚಾರ ಮಾಡಿದರು. ನಂತರ ತಾಂತ್ರಿಕ ಹಾಗೂ ಸುರಕ್ಷತೆಯ ಬಗ್ಗೆ ಮೆಟ್ರೋ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಚಾಲಕ ರಹಿತ ಮೆಟ್ರೋ ರೈಲು ಸಂಚಾರ​ ಪರಿಶೀಲಿಸಿದ ಸಂಸದ ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ
Follow us
ರಾಮು, ಆನೇಕಲ್​
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 08, 2024 | 8:14 PM

ಬೆಂಗಳೂರು, ಮಾ.08: ಬಿಎಂಆರ್​ಸಿಎಲ್​ನ(BMRCL) ಬಹು ನಿರೀಕ್ಷಿತ ಚಾಲಕ ರಹಿತ ಮೆಟ್ರೋ (Bengaluru Driverless Metro) ರೈಲಿನ ಪ್ರಾಯೋಗಾರ್ಥ ಸಂಚಾರ ಗುರುವಾರ(ಮಾ.07) ಸಂಜೆಯಿಂದ ಹಳದಿ ಮಾರ್ಗದಲ್ಲಿ ಆರಂಭಗೊಂಡಿದೆ. ಈ ಹಿನ್ನಲೆ ಇಂದು(ಮಾ.08) ಚಾಲಕ ರಹಿತ ಮೆಟ್ರೋ ಟ್ರಯಲ್​ನ್ನು ಪರಿಶೀಲಿಸಿದ ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರು, ಮೆಟ್ರೋ ಟ್ರೈನ್​ನಲ್ಲಿ ಕುಳಿತು ಸಂಚಾರ ಮಾಡಿದರು. ನಂತರ ತಾಂತ್ರಿಕ ಹಾಗೂ ಸುರಕ್ಷತೆಯ ಬಗ್ಗೆ ಮೆಟ್ರೋ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇನ್ನು ಪರಿಶೀಲನೆ ಬಳಿಕ ಮಾತನಾಡಿ, ‘ಬೆಂಗಳೂರಿನ ಅದರಲ್ಲೂ ಐಟಿ ಹಬ್ ಟ್ರಾಫಿಕ್ ಸಮಸ್ಯೆಗೆ ಹಳದಿ ಲೈನ್ ಮೆಟ್ರೋ ಪರಿಹಾರವಾಗಿದೆ. ಆರ್​ವಿ ರಸ್ತೆಯಿಂದ ಬೊಮ್ಮಸಂದ್ರವರೆಗೆ ಸುಮಾರು ಹದಿನೆಂಟುವರೆ ಕಿ.ಮಿ ಅಂತರದ ಯೆಲ್ಲೋ ಲೈನ್ ಇದಾಗಿದೆ. ಈ ಮಾರ್ಗ ಆರಂಭವಾದರೆ 5 ಲಕ್ಷ ಮಂದಿ ನಿತ್ಯ ಸಂಚಾರ ಮಾಡಲಿದ್ದಾರೆ. ಇನ್ನು ಚೀನಾದ ಇಂಜಿನಿಯರ್ಸ್​ಗಳಿಗೆ ವೀಸಾ ಸಿಗದ ಹಿನ್ನೆಲೆ ಟೆಸ್ಟಿಂಗ್ ತಡವಾಗಿತ್ತು. ಸಿವಿಲ್ ಕೆಲಸ ಮುಗಿದರೂ ಕೂಡ ಮೆಟ್ರೋ ಟ್ರಯಲ್ ರನ್ ಆಗಿರಲಿಲ್ಲ.

ಇದನ್ನೂ ಓದಿ:Driverless Metro: ಬೆಂಗಳೂರಿನಲ್ಲಿ ಚಾಲಕ ರಹಿತ ಮೆಟ್ರೋ ರೈಲು ಟ್ರಯಲ್ ರನ್ ಆರಂಭ

ಟೆಸ್ಟಿಂಗ್ ಮಾಡ್ತಿರುವ 15 ಮಂದಿ ಚೀನಾ ಇಂಜಿನಿಯರ್ಸ್

ಈ ಹಿನ್ನಲೆ ಕೇಂದ್ರ ಗೃಹ ಸಚಿವರ ನೆರವಿನಿಂದ ಚೀನಾ ಇಂಜಿನಿಯರ್ಸ್​ಗಳಿಗೆ ವೀಸಾ ಮಂಜೂರು ಮಾಡಲಾಯಿತು. ಸದ್ಯ 15 ಮಂದಿ ಚೀನಾ ಇಂಜಿನಿಯರ್ಸ್ ಟೆಸ್ಟಿಂಗ್ ಮಾಡುತ್ತಿದ್ದಾರೆ. ರೈಲ್ ಸೇಫ್ಟಿ ಮತ್ತು ಡಿಸೈನ್ ಆರ್ಗನೈಸೇಶನ್ ಅನುಮತಿ ಬೇಕಿದೆ. ಇದರಿಂದ ಲೋಕೊ ಪೈಲಟ್ ಲೆಸ್ ಮೆಟ್ರೋ ಚಾಲನೆಗೆ ಇನ್ನೂ ನಾಲ್ಕು ತಿಂಗಳು ತಡವಾಗಲಿದೆ. ಪ್ರಯಾಣಿಕರ ಸುರಕ್ಷತಾ ಕ್ರಮಗಳು, ತಾಂತ್ರಿಕ ಕಾರ್ಯಕ್ಷಮತೆ ಪರೀಕ್ಷೆ ಮಾಡಿ, ಬಳಿಕ ಪ್ರಯಾಣಿಕರಿಗೆ ಪ್ರಯಾಣಕ್ಕೆ ಅವಕಾಶ ಮಾಡಲಾಗುತ್ತದೆ ಎಂದು ಲೋಕೋ ಫೈಲಟ್ ಲೆಸ್ ಮೆಟ್ರೋ ಪರಿಶೀಲನೆ ಬಳಿಕ ಸಂಸದ ತೇಜಸ್ವಿ ಸೂರ್ಯ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ