Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ತೇಜಸ್ವಿ ಸೂರ್ಯ ಸುದ್ದಿಗೋಷ್ಠಿ ಬೆನ್ನಲ್ಲೆ ನಮ್ಮ ಮೆಟ್ರೋಗೆ ನೂತನ ಸಾರಥಿ ನೇಮಕ

ನಮ್ಮ ಮೆಟ್ರೋ ನೂತನ ನಿರ್ದೇಶಕರಾಗಿ ಮಹೇಶ್ವರ್ ರಾವ್​ರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚಿಗೆ ಸಂಸದ ತೇಜಸ್ವಿ ಸುದ್ದಿಗೋಷ್ಠಿ ಮಾಡಿ ಮೆಟ್ರೋಗೆ ಪೂರ್ಣಾವಧಿ ಎಂಡಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದೆಲ್ಲದರ ಬೆನ್ನಲ್ಲೇ ಇದೀಗ ಬಿಎಂಆರ್​ಸಿಎಲ್​ ನೂತನ ಎಂಡಿ ಆಗಿ ಮಹೇಶ್ವರ್ ರಾವ್​ರನ್ನು ನೇಮಕ ಮಾಡಲಾಗಿದೆ.

ಸಂಸದ ತೇಜಸ್ವಿ ಸೂರ್ಯ ಸುದ್ದಿಗೋಷ್ಠಿ ಬೆನ್ನಲ್ಲೆ ನಮ್ಮ ಮೆಟ್ರೋಗೆ ನೂತನ ಸಾರಥಿ ನೇಮಕ
ನಮ್ಮ ಮೆಟ್ರೋ
Follow us
Kiran Surya
| Updated By: ಗಂಗಾಧರ​ ಬ. ಸಾಬೋಜಿ

Updated on:Jan 11, 2024 | 3:50 PM

ಬೆಂಗಳೂರು, ಜನವರಿ 11: ನಮ್ಮ ಮೆಟ್ರೋ ನೂತನ ನಿರ್ದೇಶಕರಾಗಿ ಮಹೇಶ್ವರ್ ರಾವ್​ರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚಿಗೆ ಸಂಸದ ತೇಜಸ್ವಿ (Tejasvi Surya) ಸುದ್ದಿಗೋಷ್ಠಿ ಮಾಡಿ ಮೆಟ್ರೋಗೆ ಪೂರ್ಣಾವಧಿ ಎಂಡಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪುರಿ ಅವರನ್ನು ಭೇಟಿ ಮಾಡಿದ್ದರು. ಇದೆಲ್ಲದರ ಬೆನ್ನಲ್ಲೇ ಇದೀಗ ಬಿಎಂಆರ್​ಸಿಎಲ್​ ನೂತನ ಎಂಡಿ ಆಗಿ ಮಹೇಶ್ವರ್ ರಾವ್​ರನ್ನು ನೇಮಕ ಮಾಡಲಾಗಿದೆ.

ನಮ್ಮ ಮೆಟ್ರೋದ ಫೇಸ್-2 ಕಾಮಗಾರಿ ತುಂಬಾ ವಿಳಂಬ ಆಗುತ್ತಿದೆ. ಇದೆಕ್ಕೆಲ್ಲ BMRCL​ನಲ್ಲಿ ಪೂರ್ಣಾವಧಿ ಎಂಡಿ ಇಲ್ಲ ಎಂದು ಆರೋಪ ಕೇಳಿಬಂದಿತ್ತು. ರಾಜ್ಯ ಸರ್ಕಾರದಿಂದ ಸೂಕ್ತ ವ್ಯಕ್ತಿಯ ಶಿಫಾರಸು ಮಾಡುವಂತೆ ಸಂಸದ ತೇಜಸ್ವಿ ಸೂರ್ಯ ಕೇಳಿದ್ದರು.

ಇದನ್ನೂ ಓದಿ: ಹರ್ದೀಪ್ ಸಿಂಗ್ ಪುರಿ ಭೇಟಿ ಮಾಡಿದ ತೇಜಸ್ವಿ ಸೂರ್ಯ: ನಮ್ಮ ಮೆಟ್ರೋಗೆ ಪೂರ್ಣಾವಧಿ ಎಂಡಿ ವಿಚಾರದಲ್ಲಿ ಮಧ್ಯಸ್ಥಿಕೆಗೆ ಮನವಿ

ಕೇಂದ್ರದಿಂದ ಅನುಮತಿ ಕೊಡಿಸೋದಾಗಿ ಕೂಡ ಹೇಳಿದ್ದರು. ಹೀಗಾಗಿ ಪೂರ್ಣಾವಧಿ ಮೆಟ್ರೋ ಎಂಡಿ ನೇಮಕಕ್ಕೆ ಆಗ್ರಹಿಸಿದ್ದರು. ಸದ್ಯ ಅಂಜುಂ ಫರ್ವೇಜ್ ಜಾಗಕ್ಕೆ ಮಹೇಶ್ವರ್ ರಾವ್​ರನ್ನು ನೇಮಿಸಿ ಕೇಂದ್ರ ಸರ್ಕಾರದಿಂದ ಆದೇಶ ಹೊರಡಿಸಿದೆ.

ಸಂಸದ ತೇಜಸ್ವಿ ಸೂರ್ಯ ಟ್ವೀಟ್

ಈ ವಿಚಾರವನ್ನು ಸಂಸದ ತೇಜಸ್ವಿ ಸೂರ್ಯ ಟ್ವೀಟ್​ ಮಾಡಿದ್ದು, ಕೊನೆಗೂ ನಮ್ಮ ಮೆಟ್ರೋಗೆ ಪೂರ್ಣ ಪ್ರಮಾಣದ ಎಂಡಿಯನ್ನು ಪಡೆಯಲಾಗಿದೆ. ನಗರದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು  ತ್ವರಿತವಾಗಿ ನೇಮಕ ಮಾಡಿದಕ್ಕಾಗಿ ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪುರಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಪೂರ್ಣ ಸಮಯದ ನಿರ್ದೇಶಕರ ನೇಮಕದೊಂದಿಗೆ, ನಮ್ಮ ನಗರದ ಉನ್ನತ ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳು ಅವರ ಗಮನಕ್ಕೆ ಬರುತ್ತವೆಂದು ನಾವು ಭಾವಿಸುತ್ತೇವೆ ಎಂದು ಸಂಸದ ತೇಜಸ್ವಿ ಸೂರ್ಯ ಬರೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:12 pm, Thu, 11 January 24

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ