AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರು ರಾಘವೇಂದ್ರ ಬ್ಯಾಂಕ್‌ನಲ್ಲಿ ಅವ್ಯವಹಾರ ಪ್ರಕರಣ: ಠೇವಣಿದಾರರಿಗೆ 5 ಲಕ್ಷದವರೆಗೆ ಹಣ ಸಂದಾಯ

ಸೋಮವಾರ ಒಂದೇ ದಿನದಲ್ಲಿ, 12,014 ಠೇವಣಿದಾರರಿಗೆ, ಠೇವಣಿ ಖಾತರಿ ಮತ್ತು ಸಾಲ ಖಾತರಿ ನಿಗಮ (ತಿದ್ದುಪಡಿ) ಮಸೂದೆ -2021ರ ಅನ್ವಯ 401 ಕೋಟಿ ರೂ. ಗಳಷ್ಟು ಮೊತ್ತ ಠೇವಣಿದಾರರ ಖಾತೆಗಳಿಗೆ ಠೇವಣಿ ವಿಮಾ ಮೊತ್ತ ಸಂದಾಯವಾಗಿದೆ. ಉಳಿದ ಠೇವಣಿದಾರರಿಗೆ ಈ ವಾರದಲ್ಲಿ ಮೊತ್ತ ಸಂದಾಯವಾಗಲಿದೆ.

ಗುರು ರಾಘವೇಂದ್ರ ಬ್ಯಾಂಕ್‌ನಲ್ಲಿ ಅವ್ಯವಹಾರ ಪ್ರಕರಣ: ಠೇವಣಿದಾರರಿಗೆ 5 ಲಕ್ಷದವರೆಗೆ ಹಣ ಸಂದಾಯ
ಗುರು ರಾಘವೇಂದ್ರ ಬ್ಯಾಂಕ್‌
TV9 Web
| Edited By: |

Updated on: Nov 29, 2021 | 5:17 PM

Share

ದೆಹಲಿ: ಬೆಂಗಳೂರಿನ ಶ್ರೀ ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್​ನ ಠೇವಣಿದಾರರಿಗೆ, ನರೇಂದ್ರ ಮೋದಿ ಸರ್ಕಾರ ಸಿಹಿಸುದ್ದಿಯನ್ನು ನೀಡಿದೆ. 5 ಲಕ್ಷ ರೂ. ವರೆಗಿನ ಠೇವಣಿ ವಿಮೆ ಮೊತ್ತವನ್ನು ಮರುಪಾವತಿ ಮಾಡುವ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಸಾವಿರಾರು ಕುಟುಂಬಗಳ ನೆರವಿಗೆ ತ್ವರಿತವಾಗಿ ಸ್ಪಂದಿಸಿದೆ. ಈ ವಿಚಾರ ಶ್ಲಾಘನೀಯ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವೀ ಸೂರ್ಯ ತಿಳಿಸಿದ್ದಾರೆ.

ಸೋಮವಾರ ಒಂದೇ ದಿನದಲ್ಲಿ, 12,014 ಠೇವಣಿದಾರರಿಗೆ, ಠೇವಣಿ ಖಾತರಿ ಮತ್ತು ಸಾಲ ಖಾತರಿ ನಿಗಮ (ತಿದ್ದುಪಡಿ) ಮಸೂದೆ -2021ರ ಅನ್ವಯ 401 ಕೋಟಿ ರೂ. ಗಳಷ್ಟು ಮೊತ್ತ ಠೇವಣಿದಾರರ ಖಾತೆಗಳಿಗೆ ಠೇವಣಿ ವಿಮಾ ಮೊತ್ತ ಸಂದಾಯವಾಗಿದೆ. ಉಳಿದ ಠೇವಣಿದಾರರಿಗೆ ಈ ವಾರದಲ್ಲಿ ಮೊತ್ತ ಸಂದಾಯವಾಗಲಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಸಂಸದ ತೇಜಸ್ವೀ ಸೂರ್ಯ ಮಾತನಾಡಿದ್ದಾರೆ. ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಠೇವಣಿದಾರರ ಸಂಕಷ್ಟಕ್ಕೆ ಆರಂಭದಿಂದಲೇ ತುರ್ತಾಗಿ ಸ್ಪಂದಿಸಿದ ನರೇಂದ್ರ ಮೋದಿ ಸರ್ಕಾರ ಹಾಗೂ ಕೇಂದ್ರದ ಹಣಕಾಸು ಸಚಿವರು, ಬಡ, ಮಧ್ಯಮ ವರ್ಗದ ಠೇವಣಿದಾರರ ಹಿತಾಸಕ್ತಿಗೆ ಪೂರಕವಾದ ಕ್ರಮಗಳನ್ನು ತೆಗೆದುಕೊಂಡು, ಕೋ ಆಪರೇಟಿವ್ ಬ್ಯಾಂಕ್​ಗಳನ್ನು ಇನ್ನಷ್ಟು ಪಾರದರ್ಶಕತೆ ಹಾಗೂ ವೃತ್ತಿಪರತೆ ತರುವ ನಿಟ್ಟಿನಲ್ಲಿ ತ್ವರಿತಗತಿಯಲ್ಲಿ ಶ್ರಮಿಸಿದ್ದು ಗಮನಾರ್ಹ ಎಂದು ಹೇಳಿದ್ದಾರೆ.

2020 ರಲ್ಲಿ ಠೇವಣಿದಾರರ ವಿಮೆ ಮೊತ್ತವನ್ನು 1 ಲಕ್ಷ ರೂ. ಗಳಿಂದ 5 ಲಕ್ಷಕ್ಕೆ ಏರಿಸಿ, ಅದೇ ವರ್ಷದಲ್ಲಿ (ಸೆಪ್ಟೆಂಬರ್ 17, 2020) 1949 ರ ಬ್ಯಾಂಕಿಂಗ್ ರೆಗ್ಯುಲೇಶನ್ ಆಕ್ಟ್ ಗೆ ತಿದ್ದುಪಡಿ ತಂದು, ಎಲ್ಲಾ ಕೋ ಆಪರೇಟಿವ್ ಬ್ಯಾಂಕ್​ಗಳನ್ನು ರಿಸರ್ವ್ ಬ್ಯಾಂಕ್​ನ ನಿಬಂಧನೆಗಳು ಹಾಗೂ ನಿಯಮಾವಳಿಗಳ ಅಡಿಗೆ ತಂದಿದ್ದು ಕೇಂದ್ರ ಸರ್ಕಾರದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ನೆರವಿಗೆ ನಿಂತಿದ್ದು ಗಣನೀಯ ಸಾಧನೆ ಎಂದು ತಿಳಿಸಿದ್ದಾರೆ.

ಈ ವರ್ಷದ ಆಗಸ್ಟ್ ನಲ್ಲಿ ಕೇಂದ್ರ ಸರಕಾರವು, 1961 ರ ಠೇವಣಿ ಖಾತರಿ ಮತ್ತು ಸಾಲ ಖಾತರಿ ನಿಗಮ ಮಸೂದೆಗೆ ತಿದ್ದುಪಡಿ ತಂದು, ಬ್ಯಾಂಕ್ ಗಳು ದಿವಾಳಿ ಹೊಂದಿದ 90 ದಿನಗಳ ಒಳಗಾಗಿ, ಠೇವಣಿದಾರರಿಗೆ 5 ಲಕ್ಷ ರೂ, ಗಳ ಠೇವಣಿ ವಿಮಾ ಮೊತ್ತ ಸಂದಾಯಗೊಳಿಸುವ ಕಾಯ್ದೆಯನ್ನು ಜಾರಿಗೆ ತಂದಿರುವುದರಿಂದ ಅಮೂಲಾಗ್ರ ಬದಲಾವಣೆಗೆ ಕಾರಣವಾಗಿದ್ದು, ಇದರಿಂದ ಶೇ 98.3 ರಷ್ಟು ಠೇವಣಿದಾರರಿಗೆ ಅನುಕೂಲವಾಗಲಿದ್ದು, ಶೇ 50.9 ರಷ್ಟು ಠೇವಣಿ ಮೊತ್ತಕ್ಕೆ ಸುರಕ್ಷತೆ ದೊರಕಲಿದೆ ಎಂದು ತೇಜಸ್ವೀ ಸೂರ್ಯ ಇದೇ ಸಂದರ್ಭದಲ್ಲಿ ವಿವರಿಸಿದ್ದಾರೆ.

ಶ್ರೀ ಗುರು ರಾಘವೇಂದ್ರ ಬ್ಯಾಂಕ್ ನಲ್ಲಿನ ಹಲವು ಅಕ್ರಮಗಳನ್ನು ಗಮನಿಸಿ ಆರ್​ಬಿಐ, ಜನವರಿ 10 2020 ರಂದು ನಿಬಂಧನಗಳಿಗೆ ಒಳಪಡಿಸಿ ನಿರ್ಬಂಧಗಳನ್ನು ಹೇರಿತ್ತು. ಈ ಬ್ಯಾಂಕ್ ನಲ್ಲಿ ಒಟ್ಟು 43,619 ಠೇವಣಿದಾರರಿದ್ದು, ಇದರಲ್ಲಿ 33,390 ರಷ್ಟು ಜನರು 5 ಲಕ್ಷ ರೂಪಾತಿವರೆಗೆ ಠೇವಣಿ ಮಾಡಿರುತ್ತಾರೆ. ಬ್ಯಾಂಕ್ ನ ಒಟ್ಟು ಠೇವಣಿ 2403.21 ಕೋಟಿ ರೂ, ಗಳಷ್ಟು ಇದ್ದರೆ, ನೀಡಿರುವ ಸಾಲದ ಮೊತ್ತವು 1438,00 ಕೋಟಿ ರೂ, ಗಳಷ್ಟಿದೆ. ನಿವ್ವಳ ಕಾರ್ಯನಿರ್ವಹಿಸದ ಸ್ವತ್ತು (NPA) ಗಳ ಮೊತ್ತವು, 31ನೇ ಮಾರ್ಚ್ 2020 ರ ವರೆಗೆ 1438.00 ಕೋಟಿ ರೂ, ಗಳಷ್ಟು ಇದ್ದು, ಕೇವಲ 27 ಸಾಲಗಾರರಿಂದ 927 ಕೋಟಿ ರೂ, ಗಳಷ್ಟು ಮೊತ್ತ ಹಂಚಿಕೆಯಿಂದ ಬ್ಯಾಂಕ್ ಗೆ ಶೇ.70 ರಷ್ಟು ಕಾರ್ಯನಿರ್ವಹಿಸದ ಸ್ವತ್ತು ಆಗಿ ಪರಿವರ್ತನೆಯಾಗಿದ್ದು ದುರಂತ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ದೇಶದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಅತ್ಯಂತ ಕಡಿಮೆ ಅವಧಿಯಲ್ಲಿ ದಿವಾಳಿಯಾಗಿರುವ ಕೋ ಆಪರೇಟಿವ್ ಬ್ಯಾಂಕ್ ಗಳಿಂದ ತ್ವರಿತಗತಿಯಲ್ಲಿ ಠೇವಣಿದಾರರು, ಠೇವಣಿ ವಿಮೆಯನ್ನು ಪಡೆದಿದ್ದು ಗಮನಾರ್ಹ. ದೇಶದ ಇಂತಹ 16 ಬ್ಯಾಂಕ್ ಗಳ ದೊಡ್ಡ ಹಂತದ ಠೇವಣಿ ವಿಮೆಯ ಮರುಪಾವತಿ ಕಾರ್ಯ ಸೋಮವಾರ ಆರಂಭವಾಗಿದ್ದು, ಉಳಿದ ಠೇವಣಿದಾರರ ವಿಮೆ ಮೊತ್ತವನ್ನು ಶೀಘ್ರದಲ್ಲಿಯೇ ಪಾವತಿ ಮಾಡಲಾಗುತ್ತಿದೆ. 2ನೇ ಹಂತದ ದಾಖಲಾತಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 10 ಆಗಿದ್ದು, ಮರುಪಾವತಿಯನ್ನು ಡಿಸೆಂಬರ್ 31,2021 ರಂದು ಮಾಡಲಾಗುವುದು ಎಂದು ಸಂಸದರು ತಿಳಿಸಿದ್ದಾರೆ.

ಇದನ್ನೂ ಓದಿ: TV9 Facebook Live: ಗುರು ರಾಘವೇಂದ್ರ ಬ್ಯಾಂಕ್​ ಠೇವಣಿದಾರರು ಇನ್​ಕಮ್​ ಟ್ಯಾಕ್ಸ್​ ಸಮಸ್ಯೆ ಹೀಗೆ ಬಗೆಹರಿಸಿಕೊಳ್ಳಿ

ಇದನ್ನೂ ಓದಿ: ಗುರು ರಾಘವೇಂದ್ರ ಬ್ಯಾಂಕ್​ನಲ್ಲಿ 5 ಲಕ್ಷಕ್ಕೂ ಹೆಚ್ಚಿನ ಠೇವಣಿ ಇರುವ ಆ 10 ಸಾವಿರ ಮಂದಿಯ ಗತಿ ಏನು?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?