ಹೊಸಕೋಟೆ ಪಟ್ಟಣಕ್ಕೆ ಮೆಟ್ರೋ ರೈಲು ಸಂಚಾರ ವಿಸ್ತರಿಸಲು ಸಚಿವ ಎಂಟಿಬಿ ನಾಗರಾಜ್ ಮನವಿ

ಹೊಸಕೋಟೆ ಪಟ್ಟಣ ಬೆಂಗಳೂರು ಹೊರವಲಯದಲ್ಲಿ ಅಂದರೆ ಬಿಬಿಎಂಪಿ ವ್ಯಾಪ್ತಿಯಿಂದ 10 ಕಿಲೋಮೀಟರ್ ದೂರದಲ್ಲಿದೆ ಅಷ್ಟೇ. ಭಾರತದ ಸಿಲಿಕಾನ್ ವ್ಯಾಲಿ ವೈಟ್ ಫೀಲ್ಡ್ ಐಟಿ ಪಾರ್ಕ್​ಗೆ ಹೊಸಕೋಟೆ ಪಟ್ಟಣ ತೀರ ಹತ್ತಿರದಲ್ಲಿದೆ.

ಹೊಸಕೋಟೆ ಪಟ್ಟಣಕ್ಕೆ ಮೆಟ್ರೋ ರೈಲು ಸಂಚಾರ ವಿಸ್ತರಿಸಲು ಸಚಿವ ಎಂಟಿಬಿ ನಾಗರಾಜ್ ಮನವಿ
ಬಸವರಾಜ ಬೊಮ್ಮಾಯಿ ಮುಖಾಂತರ ಮನವಿ ಸಲ್ಲಿಸಿದ ಸಚಿವ ಎಂಟಿಬಿ ನಾಗರಾಜ್
Follow us
| Updated By: sandhya thejappa

Updated on: Aug 29, 2021 | 2:36 PM

ಬೆಂಗಳೂರು: ಹೊಸಕೋಟೆ ಪಟ್ಟಣಕ್ಕೆ ಮೆಟ್ರೋ ರೈಲು ಸಂಚಾರ ವಿಸ್ತರಿಸುವಂತೆ ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಇಂದು (ಆಗಸ್ಟ್ 29) ನಡೆದ ಮೈಸೂರು-ಕೆಂಗೇರಿ ವಿಸ್ತರಿತ ಮಾರ್ಗದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮುಖ್ಯಮಂತ್ರಿಗಳ ಮೂಲಕ ಸಚಿವ ಎಂಟಿಬಿ ನಾಗರಾಜ್ ಮನವಿ ಸಲ್ಲಿಸಿದ್ದಾರೆ.

ಹೊಸಕೋಟೆ ಪಟ್ಟಣ ಬೆಂಗಳೂರು ಹೊರವಲಯದಲ್ಲಿ ಅಂದರೆ ಬಿಬಿಎಂಪಿ ವ್ಯಾಪ್ತಿಯಿಂದ 10 ಕಿಲೋಮೀಟರ್ ದೂರದಲ್ಲಿದೆ ಅಷ್ಟೇ. ಭಾರತದ ಸಿಲಿಕಾನ್ ವ್ಯಾಲಿ ವೈಟ್ ಫೀಲ್ಡ್ ಐಟಿ ಪಾರ್ಕ್​ಗೆ ಹೊಸಕೋಟೆ ಪಟ್ಟಣ ತೀರ ಹತ್ತಿರದಲ್ಲಿದೆ. ವೈಟ್ ಫೀಲ್ಡ್ ಸುತ್ತಮುತ್ತ ನೂರಾರು ಐಟಿ ಕಂಪನಿಗಳು ಬೀಡು ಬಿಟ್ಟಿವೆ. ವಾಣಿಜ್ಯ ಕಟ್ಟಡಗಳು, ಬೃಹತ್ ಕಟ್ಟಡಗಳಿದ್ದು, ಲಕ್ಷಾಂತರ ಅಪಾರ್ಟ್​ಮೆಂಟ್​ಗಳು ಇವೆ. ಪರಿಣಾಮ ಹೊಸಕೋಟೆ ಪಟ್ಟಣದ ಸುತ್ತಮುತ್ತ ತೀವ್ರ ಸಂಚಾರದ ಒತ್ತಡ ನಿರ್ಮಾಣವಾಗಿದೆ.

ಅಲ್ಲದೆ, ಹೊಸಕೋಟೆ ಪಟ್ಟಣವು ಮಾಲೂರು, ನಂದಗುಡಿ ಮತ್ತು ಕೋಲಾರ ಕೈಗಾರಿಕಾ ಪ್ರದೇಶಗಳ ಹೆಬ್ಬಾಗಿಲು. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬದಲಿ ರಸ್ತೆಯು ಹೊಸಕೋಟೆ ತಾಲೂಕಿನ ಮೂಲಕ ಹಾದು ಹೋಗುತ್ತದೆ. ಹೊಸಕೋಟೆ ಪಟ್ಟಣದಲ್ಲಿನ ಜೀವನ ಮಟ್ಟ ಬೆಂಗಳೂರು ನಗರಕ್ಕಿಂತ ಕಡಿಮೆ ಇರುವುದರಿಂದ ಬೆಂಗಳೂರಿನ ಉದ್ಯೋಗಿಗಳು ಬೆಂಗಳೂರು ಹೊರವಲಯ ಹಾಗೂ ಹೊಸಕೋಟೆ ಪಟ್ಟಣದಲ್ಲಿ ಭಾರೀ ಸಂಖ್ಯೆಯಲ್ಲಿ ವಾಸವಾಗಿದ್ದಾರೆ. ಅವರು ಬೆಂಗಳೂರಿಗೆ ತೆರಳಲು ಮೆಟ್ರೋ ರೈಲು ಸಂಚಾರ ಕಲ್ಪಿಸಿದರೆ ರಸ್ತೆ ಮಾರ್ಗದ ಮೇಲೆ ಇರುವ ಅತೀ ದೊಡ್ಡ ಒತ್ತಡವನ್ನು ತಪ್ಪಿಸಬಹುದು. ಹೀಗಾಗಿ ಮೆಟ್ರೊ ರೈಲು ಮಾರ್ಗವನ್ನು ಹೊಸಕೋಟೆ ಪಟ್ಟಣದವರೆಗೆ ವಿಸ್ತರಿಸುವಂತೆ ಮನವಿ ಮಾಡುತ್ತೇನೆ ಎಂದು ಸಚಿವ ಎಂಟಿಬಿ ನಾಗರಾಜ್ ತಮ್ಮ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ

ರಾಮನಗರ, ರಾಜಾನುಕುಂಟೆ, ಮಾಗಡಿವರೆಗೆ ಮೆಟ್ರೋ ವಿಸ್ತರಿಸುವ ಚಿಂತನೆ ಇದೆ; ಸಿಎಂ ಬಸವರಾಜ ಬೊಮ್ಮಾಯಿ

Namma Metro: ಮೆಟ್ರೋ ವಿಸ್ತರಿತ ಮಾರ್ಗಕ್ಕೆ ಹಸಿರು ನಿಶಾನೆ; ಮಹಿಳಾ ಲೋಕೋಪೈಲಟ್​​ ಮೂಲಕ ನೂತನ ಮಾರ್ಗಕ್ಕೆ ಚಾಲನೆ

(MTB Nagaraj has appealed for the expansion of Metro rail to Hosakote)

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು