AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಪ್ರಕರಣ: ಕೋರ್ಟ್ ಆದೇಶದ ಬೆನ್ನಲ್ಲೇ ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗೆ ಬಿಜೆಪಿ ಕರೆ

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್​ ಅರ್ಜಿಯನ್ನು ಇದೀಗ ಹೈಕೋರ್ಟ್ ವಜಾಗೊಳಿಸಿದೆ. ಈ ಹಿನ್ನಲೆ ಸಿಎಂ ರಾಜೀನಾಮೆಗೆ ಆಗ್ರಹಿಸಿ ಇಂದು(ಮಂಗಳವಾರ) ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಬಿಜೆಪಿ(BJP) ಕರೆ ನೀಡಿದೆ.

ಮುಡಾ ಪ್ರಕರಣ: ಕೋರ್ಟ್ ಆದೇಶದ ಬೆನ್ನಲ್ಲೇ ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗೆ ಬಿಜೆಪಿ ಕರೆ
ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗೆ ಬಿಜೆಪಿ ಕರೆ
Sunil MH
| Edited By: ಕಿರಣ್ ಹನುಮಂತ್​ ಮಾದಾರ್|

Updated on:Sep 24, 2024 | 3:10 PM

Share

ಬೆಂಗಳೂರು, ಸೆ.24: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ(Siddaramaiah) ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದರು. ಅದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್​ ಅರ್ಜಿಯನ್ನು ಇದೀಗ ಹೈಕೋರ್ಟ್ ವಜಾಗೊಳಿಸಿದ್ದು, ರಾಜ್ಯಪಾಲರ ಆದೇಶವನ್ನು ಕೋರ್ಟ್ ಎತ್ತಿ ಹಿಡಿದಿದೆ. ಈ ಹಿನ್ನಲೆ ಸಿಎಂ ರಾಜೀನಾಮೆಗೆ ಆಗ್ರಹಿಸಿ ಇಂದು(ಮಂಗಳವಾರ) ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಬಿಜೆಪಿ(BJP) ಕರೆ ನೀಡಿದೆ.

ರಾಜ್ಯದ ಹಲವೆಡೆ ಪ್ರತಿಭಟನೆ

ಬೆಂಗಳೂರು, ಹುಬ್ಬಳ್ಳಿಯಲ್ಲಿ ಪ್ರತಿಭಟನೆಗೆ ಸಿದ್ದತೆ

ಅದರಂತೆ ಬೆಂಗಳೂರಿನ ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿ ಎದುರು ಸಂಜೆ 4.30ಕ್ಕೆ ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಇತ್ತ ಹುಬ್ಬಳ್ಳಿಯ ಅರವಿಂದ ನಗರ ಬಳಿ ಇರುವ ಬಿಜೆಪಿ ಕಚೇರಿ ಬಳಿ ಬಿಜೆಪಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ:ಕಪ್ಪು ಚುಕ್ಕೆಯಿಂದ ಬೆತ್ತಲಾದ ವೈಟ್ನರ್ ರಾಮಯ್ಯ: ಹೈಕೋರ್ಟ್ ತೀರ್ಪಿನ ಬಳಿಕ ಸಿದ್ದರಾಮಯ್ಯ ಬಗ್ಗೆ ಜೆಡಿಎಸ್ ವ್ಯಂಗ್ಯ

ಮೈಸೂರು: ತನಿಖೆಗೆ ಹೈಕೋರ್ಟ್ ಅಸ್ತು ಹಿನ್ನೆಲೆ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಮೈಸೂರು ಬಿಜೆಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಮಾಡುತ್ತಿದೆ. ಈ ವೇಳೆ ಮಾತನಾಡಿದ ನಾರಾಯಣಸ್ವಾಮಿ, ‘ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು. ಕೋರ್ಟ್‌ಗೆ ಹೋಗಿ ನಿರ್ದೋಷಿ ಎಂದು ತೀರ್ಪು ಬಂದ ಮೇಲೆ ಮತ್ತೆ ಅಧಿಕಾರಕ್ಕೆ ಬನ್ನಿ. ಮೊದಲು ನ್ಯಾಯಾಲಯದ ತೀರ್ಪು ಎತ್ತಿ ಹಿಡಿಯುವ ಕೆಲಸ ಮಾಡಿ ಎಂದಿದ್ದಾರೆ. ಇನ್ನು ಪ್ರತಿಭಟನೆಯಲ್ಲಿ ಶಾಸಕ ಶ್ರೀವತ್ಸ, ಜಿಲ್ಲಾಧ್ಯಕ್ಷರಾದ ಎಲ್.ನಾಗೇಂದ್ರ ಹಾಗೂ ಎಲ್‌ಆರ್.ಮಹದೇವಸ್ವಾಮಿ, ಮಾಜಿ ಸಚಿವ ಎನ್.ಮಹೇಶ್, ಮಾಜಿ ಶಾಸಕ ನಿರಂಜನ್ ಸೇರಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Tue, 24 September 24

Follow Us
ಮಳೆ ಕೊರತೆ: ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ
ಮಳೆ ಕೊರತೆ: ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ