AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಕೇಸ್: ಸಿಎಂ ಆಪ್ತರ ನಿವಾಸ, ಕಚೇರಿ ಮೇಲೆ ಇಡಿ ದಾಳಿ ಸಾಧ್ಯತೆ, ಜಮೀನಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತೆರೆಮರೆಯಲ್ಲಿ ಕಾರ್ಯಾಚರಣೆ ನಡೆಸಿರುವ ಇಡಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯನವರ ಆಪ್ತರ ಚಲನವಲನ ಮೇಲೂ ನಿಗಾ ಇಟ್ಟಿದ್ದಾರೆ. ಶೀಘ್ರದಲ್ಲೇ ಇಡಿ ಅಧಿಕಾರಿಗಳು ಸಿಎಂ ಆಪ್ತರ ನಿವಾಸ ಅಥವಾ ಕಚೇರಿಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ.

ಮುಡಾ ಕೇಸ್: ಸಿಎಂ ಆಪ್ತರ ನಿವಾಸ, ಕಚೇರಿ ಮೇಲೆ ಇಡಿ ದಾಳಿ ಸಾಧ್ಯತೆ, ಜಮೀನಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ
ಸಿದ್ದರಾಮಯ್ಯ, ಇಡಿ
TV9 Web
| Edited By: |

Updated on: Oct 01, 2024 | 10:19 AM

Share

ಬೆಂಗಳೂರು, ಅ.01: ಮುಡಾ ಸೈಟು ಹಂಚಿಕೆ ಅವ್ಯವಹಾರ ಆರೋಪದ ಮೇಲೆ ಲೋಕಾಯುಕ್ತ ಸಂಸ್ಥೆ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಎಫ್ಐಆರ್ ದಾಖಲಿಸುತ್ತಿದ್ದಂತೆ ಇಡಿ ಅಲರ್ಟ್ ಆಗಿದೆ. ಮುಡಾದ ಹಣದ ಬೇರೆ ಕ್ಷೇತ್ರಕ್ಕೆ ಬಳಸಿದ ಪ್ರಕರಣದ ಬಗ್ಗೆ ಇಡಿ (Enforcement Directorate) ಇಸಿಐಆರ್ ದಾಖಲಿಸಿ ತನಿಖೆಗೆ ಮುಂದಾಗಿದೆ. ಇಡಿ ಅಧಿಕಾರಿಗಳು ಸಿದ್ದರಾಮಯ್ಯ ಅವರಿಗೆ ಯಾವುದೇ ಕ್ಷಣದಲ್ಲಿ ನೋಟಿಸ್ ಕೊಟ್ಟು ವಿಚಾರಣೆ ನಡೆಸಬಹುದಾಗಿದೆ. ಶೀಘ್ರದಲ್ಲೇ ಇಡಿ ಅಧಿಕಾರಿಗಳು ಸಿಎಂ ಆಪ್ತರ ನಿವಾಸ ಅಥವಾ ಕಚೇರಿಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ.

ಈಗಾಗಲೇ ತೆರೆಮರೆಯಲ್ಲಿ ಕಾರ್ಯಾಚರಣೆ ನಡೆಸಿರುವ ಇಡಿ ಅಧಿಕಾರಿಗಳು ಸಿಎಂ ಆಪ್ತರ ಚಲನವಲನ ಮೇಲೂ ನಿಗಾ ಇಟ್ಟಿದ್ದಾರೆ. ಹಾಘೂ ಸಿಎಂ ಆಪ್ತರ ಮನೆ, ಸಂಬಂಧಿಕರ ಮಾಹಿತಿ ಕಲೆ ಹಾಕಿದ್ದಾರೆ. ರಾಜ್ಯಾದ್ಯಂತ ಸಿಎಂ ಆಪ್ತರ ನಿವಾಸ ಅಥವಾ ಕಚೇರಿ ಮೇಲೆ ಇಡಿ ದಾಳಿ ಮಾಡುವ ಸಾಧ್ಯತೆ ಇದೆ. ಶೀಘ್ರದಲ್ಲೇ ದಾಳಿ ನಡೆಸಿ ಮತ್ತಷ್ಟು ಮಾಹಿತಿ ಸಂಗ್ರಹಿಸಲು ತಯಾರಿ ನಡೆಯುತ್ತಿದೆ. ಜಾರ್ಖಂಡ್ ಮಾದರಿ ಇಡಿ ಅಧಿಕಾರಿಗಳು ದಾಳಿ ಮಾಡುವ ಸಾಧ್ಯತೆ ಇದೆ. ಇಡಿ ತಂಡ ಕೆಲ ಮಹತ್ವದ ಕಡತ ಬಗ್ಗೆಯೂ ಮಾಹಿತಿ ಕಲೆ ಹಾಕಿದೆ. ಮುಖ್ಯಮಂತ್ರಿ ಆಪ್ತರ ದೂರವಾಣಿ, ಬ್ಯಾಂಕ್ ಖಾತೆ ಸೇರಿದಂತೆ ಮಹತ್ವದ ಮಾಹಿತಿ ಕಲೆ ಹಾಕಲಾಗಿದೆ.

ಇದನ್ನೂ ಓದಿ: ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ

ಜಮೀನಿಗೆ ಭೇಟಿ ಕೊಟ್ಟ ಲೋಕಾಯುಕ್ತ ಟೀಂ

ಇನ್ನು ಲೋಕಾಯುಕ್ತ ಮುಡಾ ಅಕ್ರಮ ಪ್ರಕರಣದ ತನಿಖೆ ಚುರುಕುಗೊಳಿಸಿದೆ. ಕೆಸರೆ ಸರ್ವೆ ನಂ.464ರ 3.16 ಎಕರೆ ಜಮೀನಿಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ದೂರುದಾರ ಸ್ನೇಹಮಯಿ‌ ಕೃಷ್ಣ ಜೊತೆ ಲೋಕಾಯುಕ್ತ ಟೀಂ ಭೇಟಿ ನೀಡಿದೆ. ಲೋಕಾಯುಕ್ತ ಎಸ್​ಪಿ ಟಿ.ಜೆ ಉದೇಶ್ ನೇತೃತ್ವದ ತಂಡ ಪರಿಶೀಲನೆ ನಡೆಸುತ್ತಿದೆ. ಅಧಿಕಾರಿಗಳು ಸ್ಥಳದಿಂದಲೇ ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್