AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣದ ನೋಟಿಸ್: ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತ ವಾಟಾಳ್ ನಾಗರಾಜ್ ಹೇಳಿದ್ದಿಷ್ಟು

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೋಟಿಸ್ ಜಾರಿ ಮಾಡಿದ್ದಾರೆ. ಅದಕ್ಕೆ ಸಚಿವ ಸಂಪುಟದಲ್ಲಿ ತೀರ್ಮಾನಿಸಿ ನೋಟಿಸ್​ ಹಿಂಪಡೆಯುವಂತೆ ಒತ್ತಾಯಿಸಲಾಗಿದೆ. ಈ ಕುರಿತು ಮಾತನಾಡಿದ ಹೋರಾಟಗಾರ ವಾಟಾಳ್ ನಾಗರಾಜ್, ‘ರಾಜ್ಯಪಾಲರ ಬಗ್ಗೆ ನನಗೆ ವೈಯಕ್ತಿಕವಾಗಿ ಗೌರವ ಇದೆ. ನೋಟಿಸ್ ಕೊಟ್ಟಿದ್ದು ಅಕ್ಷಮ್ಯ ಅಪರಾಧ ಎಂದಿದ್ದಾರೆ.

ಮುಡಾ ಹಗರಣದ ನೋಟಿಸ್: ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತ ವಾಟಾಳ್ ನಾಗರಾಜ್ ಹೇಳಿದ್ದಿಷ್ಟು
ವಾಟಾಳ್ ನಾಗರಾಜ್
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 01, 2024 | 4:33 PM

Share

ಬೆಂಗಳೂರು, ಆ.01: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಪಾತ್ರವಿದೆ ಎಂದು ಕೇಳಿಬಂದ ಹಿನ್ನಲೆ ರಾಜ್ಯಪಾಲರು ನೋಟಿಸ್​ ಜಾರಿ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಹೋರಾಟಗಾರ ವಾಟಾಳ್ ನಾಗರಾಜ್(Vatal Nagaraj),  ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜಕೀಯ ಮಾಡಲ್ಲ ಅಂದುಕೊಂಡಿದ್ದೆ. ನಾನು ರಾಜ್ಯಪಾಲರ ಬಗ್ಗೆ ಪ್ರಶಂಸೆ ಮಾಡಿದ್ದೆ. ಅಂದು ರಾಜ್ಯಪಾಲರ ಭಾಷಣ ಕನ್ನಡದಲ್ಲೇ ಇರಲಿ ಎಂದು ಮಾತನಾಡಿದ್ದೆ. ನಮ್ಮ ಮನವಿಯನ್ನು ರಾಜ್ಯಪಾಲರು ಪ್ರೀತಿಯಿಂದ ಸ್ವಾಗತಿಸಿದ್ದರು. ಮಹಾರಾಷ್ಟ್ರ, ತಮಿಳುನಾಡಿನಲ್ಲಿ ರಾಜ್ಯಪಾಲರ ಗಲಾಟೆ ನಡೀತಿತ್ತು. ಆದ್ರೆ, ಕರ್ನಾಟಕದಲ್ಲಿ ಶಾಂತವಾಗಿತ್ತು. ಈಗ ಇದ್ದಕ್ಕಿದ್ದಂತೆ ರಾಜ್ಯಪಾಲರು ಇವತ್ತು ರಾಜಕೀಯ ಪಾಲು ಆಗಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇದು ರಾಜ್ಯಪಾಲರ ಸ್ವಂತ ಅನಿಸಿಕೆ ಅಲ್ಲ, ರಾಜಕೀಯ ಅನಿಸಿಕೆ

ನಮ್ಮಲ್ಲಿ ಇನ್ನೂ ಪ್ರಜಾಪ್ರಭುತ್ವ ಉಳಿದಿದೆ. ಮತದಾರನ ಮೂಲಕ ಸರ್ಕಾರದ ಅಳಿವು ಉಳಿವು ಇರುತ್ತದೆ. ನೀವು ನೋಟಿಸ್ ಕೊಟ್ಟಿದ್ದು ಪ್ರಜಾಪ್ರಭುತ್ವದ ಅಪರಾಧ. ಇದು ರಾಜ್ಯಪಾಲರ ಸ್ವಂತ ಅನಿಸಿಕೆ ಅಲ್ಲ, ರಾಜಕೀಯ ಅನಿಸಿಕೆ. ಇದು ನಿಜವಾಗಿಯೂ ದಂಡಿನ‌ ಆಳ್ವಿಕೆ ಆಗುತ್ತದೆ. ರಾಜ್ಯಪಾಲರು ಸಂವಿಧಾನದ ಮುಖ್ಯಸ್ಥರು. ಸಿದ್ದರಾಮಯ್ಯ ನಂತರ ಯಾರು?. ವಿಶೇಷ ಅಧಿವೇಶನ ಕರೆದು ಮುಡಾ ಹಗರಣದ ಚರ್ಚೆ ಮಾಡಿ ಎಂದು ಹೇಳಬೇಕಿತ್ತು. ಆದ್ರೆ, ಇದು ಒಂದು ರೀತಿ ಪಿತೂರಿ ರಾಜಕಾರಣ, ನೀವು ಸರ್ಕಾರವನ್ನ ಅಲುಗಾಡಿಸಬಾರದು. ಇದ್ರಿಂದ ಆಡಳಿತ ಮಂಕಾಗಲಿದೆ.

ಇದನ್ನೂ ಓದಿ:ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟ ಮುಡಾ ಹಗರಣ: ಮತ್ತೆ ವರದಿ ಕೇಳಿದ ರಾಜ್ಯಪಾಲ

ಹೀಗಾಗಿ ರಾಜ್ಯಪಾಲರ ಬಗ್ಗೆ ನನಗೆ ವೈಯಕ್ತಿಕವಾಗಿ ಗೌರವ ಇದೆ. ನೋಟಿಸ್ ಕೊಟ್ಟಿದ್ದು ಅಕ್ಷಮ್ಯ ಅಪರಾಧ. ಅವರಿಗೆ ಬೇರೆ ಕಡೆಯಿಂದ ಒತ್ತಡ ಇರಬಹುದು. ಆದರೆ ಇದು ಆಗಬಾರದು. ವಿಧಾನಮಂಡಲ ಅಧಿವೇಶನದ ವೇಳೆ ವಿಪಕ್ಷ ಮಲಗಿದ್ದು, ಪ್ರತಿಭಟಿಸಿದ್ದು ಸರಿಯಲ್ಲ. ಸದನದಲ್ಲಿ ಅಹೋರಾತ್ರಿ ಪ್ರತಿಭಟನೆ ಮಾಡಿದ್ದರಿಂದ ನೋವಾಗುತ್ತದೆ ಎನ್ನುವ ಮೂಲಕ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ವಾಟಾಳ್ ನಾಗರಾಜ್ ನಿಂತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ