AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಅಪಾರ್ಟ್‌ಮೆಂಟ್​ವೊಂದರಲ್ಲಿ​ ಕೆಸರು ನೀರು: ನಮಗೆ ಕಾವೇರಿ ನೀರು ಕೊಡಿ ಎಂದ ನಿವಾಸಿಗಳು

ಬೆಂಗಳೂರಿನ ಕನಕಪುರ ತಲಘಟ್ಟಪುರದ ನ್ಯಾಯಾಂಗ ಬಡಾವಣೆಯ ಶೋಭಾ ಅರೆನಾ ಅಪಾರ್ಟ್‌ಮೆಂಟ್​ನಲ್ಲಿ ಕಲುಷಿತ ಕೆಸರು ಮಿಶ್ರಿತ ನೀರು ಬಂರುತ್ತಿದೆ ಎಂದು ಅಪಾರ್ಟ್‌ಮೆಂಟ್ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಧನಂಜಯ್ ಪದ್ಮನಾಭಾಚಾರ ಎಂಬ ನಿವಾಸಿಯೊಬ್ಬರು ಟ್ವಿಟರ್​ನಲ್ಲಿ ವಿಡಿಯೋ ಶೇರ್ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​​ಗೆ ಟ್ಯಾಗ್​ ಮಾಡಿದ್ದಾರೆ. ನಮಗೆ ಕಾವೇರಿ ನೀರು ಕೊಡಿ ಎಂದು ಆಗ್ರಹಿಸಿದ್ದಾರೆ.

ಬೆಂಗಳೂರಿನ ಅಪಾರ್ಟ್‌ಮೆಂಟ್​ವೊಂದರಲ್ಲಿ​ ಕೆಸರು ನೀರು: ನಮಗೆ ಕಾವೇರಿ ನೀರು ಕೊಡಿ ಎಂದ ನಿವಾಸಿಗಳು
ಕೆಸರು ನೀರು
Shivaraj
| Edited By: |

Updated on: Feb 08, 2024 | 5:02 PM

Share

ಬೆಂಗಳೂರು, ಫೆಬ್ರವರಿ 8: ನಗರದ ತಲಘಟ್ಟಪುರದ ಅಪಾರ್ಟ್‌ಮೆಂಟ್ ಒಂದರಲ್ಲಿ ಅಡುಗೆ ಕೋಣೆಯಲ್ಲಿ ಕುಡಿಯುವ ನೀರಿನ (water) ನಲ್ಲಿಯಲ್ಲಿ ಕೆಸರು ನೀರು ಬಂದಿರುವಂತಹ ಘಟನೆ ನಡೆದಿದ್ದು, ಈ ಕುರಿತು ನಿವಾಸಿಗಳು ಟ್ವಿಟರ್​​ನಲ್ಲಿ ವಿಡಿಯೋ, ಫೋಟೋ ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ. ಅಪಾರ್ಟ್‌ಮೆಂಟ್ ನಿವಾಸಿ ಧನಂಜಯ್ ಪದ್ಮನಾಭಾಚಾರ ವಿಡಿಯೋ ಶೇರ್ ಮಾಡಲಾಗಿದೆ. ಕನಕಪುರ ತಲಘಟ್ಟಪುರದ ನ್ಯಾಯಾಂಗ ಬಡಾವಣೆಯ ಶೋಭಾ ಅರೆನಾ ಅಪಾರ್ಟ್‌ಮೆಂಟ್​ನಲ್ಲಿ ಕಲುಷಿತ ಕೆಸರು ಮಿಶ್ರಿತ ನೀರು ಬಂದಿದೆ. ಅಪಾರ್ಮೆಂಟ್​​ನ‌ ಇತರೆ ನಿವಾಸಿಗಳ ಮನೆಯಲ್ಲಿಯೂ ಕೆಸರು ನೀರು ಬಂದಿದೆ. ಹೀಗಾಗಿ ನಿವಾಸಿಗಳು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಬೆಂಗಳೂರು ಪೊಲೀಸರು ಸೇರಿ ಹಲವರಿಗೆ ಟ್ಯಾಗ್​ ಮಾಡಿ ವಿಡಿಯೋ ಹಂಚಿಕೊಂಡಿದ್ದಾರೆ. ದಯವಿಟ್ಟು ನಮಗೆ ಕಾವೇರಿ ನೀರು ಕೊಡಿ ಎಂದು ನಿವಾಸಿಗಳು ಆಗ್ರಹಿಸಿದ್ದಾರೆ. ನಿನ್ನೆ ಶೇರ್ ಮಾಡಿರುವ ವಿಡಿಯೋವನ್ನು ಸುಮಾರು 2 ಲಕ್ಷದ 51 ಸಾವಿರ ಜನರು ವಿಕ್ಷಣೆ ಮಾಡಿದ್ದಾರೆ.

ನಲ್ಲಿಯಲ್ಲಿ ಕೆಸರು ನೀರು

‘ಶೋಭಾ ಅರೆನಾ ಅಪಾರ್ಟ್ಮೆಂಟ್​​ನಲ್ಲಿ ಕುಡಿಯಲು ನಾವು ಪಡೆಯುತ್ತಿರುವ ನೀರಿನ ಗುಣಮಟ್ಟವನ್ನು ದಯವಿಟ್ಟು ನೋಡಿ. ದಯವಿಟ್ಟು ನ್ಯಾಯಾಂಗ ಬಡಾವಣೆ, ತಲಘಟ್ಟಪುರ, ಕನಕಪುರ ಮುಖ್ಯರಸ್ತೆಗಳಲ್ಲಿ ನಮಗೆ ಕಾವೇರಿ ನೀರು ಕೊಡಿ’ ಎಂದು ಅಪಾರ್ಮೆಂಟ್ ನಿವಾಸಿ ಧನಂಜಯ್ ಪದ್ಮನಾಭಾಚಾರ ಟ್ವೀಟ್ ಮಾಡಿದ್ದಾರೆ.

ಧನಂಜಯ್ ಪದ್ಮನಾಭಾಚಾರ ಟ್ವೀಟ್

ಬೇಸಿಗೆಗೂ ಮುನ್ನ ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಕುಸಿಯುತ್ತಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ಕೆಲ ಕಡೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ.

24 ಗಂಟೆಗಳ ಕಾಲ ನೀರು ಪೂರೈಕೆ ಸ್ಥಗಿತ

ವಿಜಯಪುರ: ನಗರದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆಧಿಕಾರಿಗಳ ಪ್ರಕಾರ ನಗರದ 35 ವಾರ್ಡ್ ಗಳ ಪೈಕಿ 12 ವಾರ್ಡ್ ಗಳಲ್ಲಿ ನಿತ್ಯ 24 ಗಂಟೆ ನೀರು ಪೂರೈಕೆ ಮಾಡಲಾಗಿತ್ತು. ಅದಕ್ಕಾಗಿ ಶುಲ್ಕವನ್ನೂ ಸಹ ಪಡೆಯಲಾಗಿತ್ತು. ಆದರೆ ನಗರದಲ್ಲಿ ಹೆಸರಿಗಷ್ಟೇ 24 ಗಂಟೆ ನೀರು ಪೂರೈಕೆ ಯೋಜನೆಯಾಗಿದೆ. ಇಷ್ಟೇ ಅಲ್ಲಾ ಇನ್ನುಳಿದ 23 ವಾರ್ಡ್ ಗಳಲ್ಲಿ ನಿತ್ಯ 2 ಗಂಟೆ ನೀರು ಬಿಡಲಾಗುತ್ತಿತ್ತು.

ಇದನ್ನೂ ಓದಿ: ಅಂತರ್ಜಲ ಮಟ್ಟ ಕುಸಿತ: ಬೆಂಗಳೂರಿನ ಈ ಪ್ರದೇಶಗಳಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಬೀಗ

ಇದೀಗ ಅದಕ್ಕೂ ಸಹ ಕೊಕ್ಕೆ ಬಿದ್ದಿದೆ. ನಿತ್ಯ 24 ಗಂಟೆಗಳ ಕಾಲ ನೀರು ಪೂರೈಕೆ ಮಾಡುವ ವಾರ್ಡ್ ಗಳಲ್ಲಿ ಹಾಗೂ ನಿತ್ಯ 2 ಗಂಟೆಗಳ ಕಾಲ ನೀರು ಪೂರೈಕೆ ಮಾಡುವ ವಾರ್ಡ್ ಗಳಲ್ಲಿ ಇದೀಗ ಬರೋಬ್ಬರಿ 10 ರಿಂದ 15 ದಿನಕ್ಕೊಮ್ಮೆ ಮಾತ್ರ ನೀರು ಬಿಡಲಾಗುತ್ತಿದೆ. ಇದು ನಗರ ವಾಸಿಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್