AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MP Kumaraswamy: ಶಾಸಕ ಕುಮಾರಸ್ವಾಮಿ ಏಕಾಂಗಿ ಪ್ರತಿಭಟನೆ ಫಲ: ಕಡೆಗೂ‌ ಮೂಡಿಗೆರೆ ನೆರೆ ಪೀಡಿತ ಪ್ರದೇಶದ ಪಟ್ಟಿಗೆ ಸೇರ್ಪಡೆ

ಏಕಾಂಗಿಯಾಗಿ ಪ್ರತಿಭಟನೆ ಮಾಡಿದ್ದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ನೆರೆ ಪರಿಹಾರದಲ್ಲಿ ತಾರತಮ್ಯ ಎಂದು ಆರೋಪ ಮಾಡಿದ್ದರು. ಈ ವೇಳೆ ರಾಜ್ಯ ಸರ್ಕಾರ ಪರಿಹಾರ ನೀಡುವ ಭರವಸೆ ನೀಡಿತ್ತು. ಸದ್ಯ ಕಡೆಗೂ‌ ಮೂಡಿಗೆರೆಯನ್ನ ನೆರೆ ಪೀಡಿತ ಪ್ರದೇಶದ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.

MP Kumaraswamy: ಶಾಸಕ ಕುಮಾರಸ್ವಾಮಿ ಏಕಾಂಗಿ ಪ್ರತಿಭಟನೆ ಫಲ: ಕಡೆಗೂ‌ ಮೂಡಿಗೆರೆ ನೆರೆ ಪೀಡಿತ ಪ್ರದೇಶದ ಪಟ್ಟಿಗೆ ಸೇರ್ಪಡೆ
ವಿಧಾನಸೌಧ ಮೆಟ್ಟಿಲಿನ ಮೇಲೆ ಧರಣಿ ಕುಳಿತ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ!
TV9 Web
| Edited By: |

Updated on: Aug 17, 2021 | 1:38 PM

Share

ಬೆಂಗಳೂರು: ನೆರೆಪೀಡಿತ ಪ್ರದೇಶದ ಪಟ್ಟಿಗೆ ಮೂಡಿಗೆರೆ ಸೇರ್ಪಡೆಗೆ ಎಂ.ಪಿ.ಕುಮಾರಸ್ವಾಮಿ ಮಾಡಿದ ಪ್ರತಿಭಟನೆಗೆ ಫಲ ಸಿಕ್ಕಿದೆ. ವಿಧಾನಸೌಧದ ಬಳಿ ಏಕಾಂಗಿಯಾಗಿ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾಡಿದ ಪ್ರತಿಭಟನೆಗೆ ಮಣಿದ ಸರ್ಕಾರ ಮೂಡಿಗೆರೆ ನೆರೆ ಪೀಡಿತ ಪ್ರದೇಶದ ಪಟ್ಟಿಗೆ ಸೇರ್ಪಡೆ ಮಾಡಿದೆ.

ಏಕಾಂಗಿಯಾಗಿ ಪ್ರತಿಭಟನೆ ಮಾಡಿದ್ದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ನೆರೆ ಪರಿಹಾರದಲ್ಲಿ ತಾರತಮ್ಯ ಎಂದು ಆರೋಪ ಮಾಡಿದ್ದರು. ಈ ವೇಳೆ ರಾಜ್ಯ ಸರ್ಕಾರ ಪರಿಹಾರ ನೀಡುವ ಭರವಸೆ ನೀಡಿತ್ತು. ಸದ್ಯ ಕಡೆಗೂ‌ ಮೂಡಿಗೆರೆಯನ್ನ ನೆರೆ ಪೀಡಿತ ಪ್ರದೇಶದ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.

ಈ ಬಗ್ಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, 61 ತಾಲೂಕುಗಳು ಪ್ರವಾಹ ಪೀಡಿತವೆಂದು ಘೋಷಣೆ ಮಾಡಿದ್ದೆವು. ಮಳೆ‌ ಹೆಚ್ಚಾಗಿ ಮತ್ತೆ ಹಾನಿಯಾಗಿದೆ. ಹೊಸದಾಗಿ 22 ತಾಲೂಕು ಪ್ರವಾಹ ಪೀಡಿತವೆಂದು ಘೋಷಣೆ ಮಾಡಿದ್ದೇವೆ. ಬೆಳಗಾವಿ, ಚಿಕ್ಕಮಗಳೂರು, ಕಡೂರು, ತರಿಕೆರೆ, ಸೂಪ ಬಬಲೇಶ್ವರ, ಕೋಲಾರ, ಮುದ್ದೆಬಿಹಾಳ, ಮೂಡಿಗೆರೆ, ಹೊಸನಗರಗಳನ್ನ ಪ್ರವಾಹ ಪೀಡಿತವೆಂದು ಘೋಷಿಸಿದ್ದೇವೆ.

ಬೆಂಗಳೂರಿನಲ್ಲೂ 50ಕ್ಕೂ ಹೆಚ್ಚು ರಸ್ತೆಗಳಲ್ಲಿ ನೀರು ನಿಲ್ಲುತ್ತಿದೆ. ಅಧಿಕಾರಿಗಳಿಗೆ ಇದರ ಬಗ್ಗೆ ಸೂಚಿಸಿದ್ದೇನೆ. ಜೊತೆಗೆ ಸಮಸ್ಯೆ ಪರಿಹಾರಕ್ಕೂ ಸೂಚಿಸಿದ್ದೇನೆ. ತುರ್ತು ಕಾಮಗಾರಿ ಮುಗಿಸುವ ಬಗ್ಗೆ ತಿಳಿಸಿದ್ದೇನೆ ಎಂದರು.

ನಮ್ಮ ಧ್ವನಿಗೆ ನಮ್ಮ ಸರ್ಕಾರದಲ್ಲೇ ಯಾಕೋ ಬೆಲೆ ಸಿಗ್ತಿಲ್ಲ. ಮೀಸಲು (ರಿಸರ್ವ್) ಕ್ಷೇತ್ರವೆಂಬ ಕಾರಣಕ್ಕೋ ಏನೋ ಕಡೆಗಣಿಸ್ತಿದ್ದಾರೆ ಎಂದು ವಿಧಾನಸೌಧದ ಎದುರು ಮೆಟ್ಟಿಲಿನ ಮೇಲೆ ಏಕಾಂಗಿಯಾಗಿ ಧರಣಿ ಕುಳಿತಿರುವ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ನೊಂದುಕೊಂಡು ಹೇಳಿದ್ರು. ನಮ್ಮದೇ ಸರ್ಕಾರ ಈ ರೀತಿ ತಾರತಮ್ಯ ಮಾಡಬಾರದು. ನಮ್ಮದು ಆದಷ್ಟು ಬೇಗ ಜನರಲ್ ಕ್ಷೇತ್ರ ಆಗಲಿ ಅನಿಸುತ್ತಿದೆ. ಸಚಿವ ಆರ್.ಅಶೋಕ್ ಈ ರೀತಿ ಮಾಡಿದ್ದಾರೆ ಅನಿಸುತ್ತಿಲ್ಲ. ಎಲ್ಲ ಉಸ್ತುವಾರಿ ಸಚಿವರು ಭೇಟಿ ನೀಡ್ತಾರೆ, ಏನೂ ಮಾಡಲ್ಲ. ಇವರಿಗೆ ಮಾತಲ್ಲಿ ಹೇಳಿದ್ರೆ ಅರ್ಥ ಆಗಲ್ಲ, ಹೀಗಾಗಿ ಧರಣಿ ಕುಳಿತಿರುವೆ ಎಂದು ವಿಧಾನಸೌಧದಲ್ಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: MP Kumaraswamy: ವಿಧಾನಸೌಧ ಎದುರು ಧರಣಿ ಕುಳಿತ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ! ಡಿಮ್ಯಾಂಡ್​​ ಏನು?

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?