AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MP Kumaraswamy: ಶಾಸಕ ಕುಮಾರಸ್ವಾಮಿ ಏಕಾಂಗಿ ಪ್ರತಿಭಟನೆ ಫಲ: ಕಡೆಗೂ‌ ಮೂಡಿಗೆರೆ ನೆರೆ ಪೀಡಿತ ಪ್ರದೇಶದ ಪಟ್ಟಿಗೆ ಸೇರ್ಪಡೆ

ಏಕಾಂಗಿಯಾಗಿ ಪ್ರತಿಭಟನೆ ಮಾಡಿದ್ದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ನೆರೆ ಪರಿಹಾರದಲ್ಲಿ ತಾರತಮ್ಯ ಎಂದು ಆರೋಪ ಮಾಡಿದ್ದರು. ಈ ವೇಳೆ ರಾಜ್ಯ ಸರ್ಕಾರ ಪರಿಹಾರ ನೀಡುವ ಭರವಸೆ ನೀಡಿತ್ತು. ಸದ್ಯ ಕಡೆಗೂ‌ ಮೂಡಿಗೆರೆಯನ್ನ ನೆರೆ ಪೀಡಿತ ಪ್ರದೇಶದ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.

MP Kumaraswamy: ಶಾಸಕ ಕುಮಾರಸ್ವಾಮಿ ಏಕಾಂಗಿ ಪ್ರತಿಭಟನೆ ಫಲ: ಕಡೆಗೂ‌ ಮೂಡಿಗೆರೆ ನೆರೆ ಪೀಡಿತ ಪ್ರದೇಶದ ಪಟ್ಟಿಗೆ ಸೇರ್ಪಡೆ
ವಿಧಾನಸೌಧ ಮೆಟ್ಟಿಲಿನ ಮೇಲೆ ಧರಣಿ ಕುಳಿತ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ!
TV9 Web
| Edited By: |

Updated on: Aug 17, 2021 | 1:38 PM

Share

ಬೆಂಗಳೂರು: ನೆರೆಪೀಡಿತ ಪ್ರದೇಶದ ಪಟ್ಟಿಗೆ ಮೂಡಿಗೆರೆ ಸೇರ್ಪಡೆಗೆ ಎಂ.ಪಿ.ಕುಮಾರಸ್ವಾಮಿ ಮಾಡಿದ ಪ್ರತಿಭಟನೆಗೆ ಫಲ ಸಿಕ್ಕಿದೆ. ವಿಧಾನಸೌಧದ ಬಳಿ ಏಕಾಂಗಿಯಾಗಿ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾಡಿದ ಪ್ರತಿಭಟನೆಗೆ ಮಣಿದ ಸರ್ಕಾರ ಮೂಡಿಗೆರೆ ನೆರೆ ಪೀಡಿತ ಪ್ರದೇಶದ ಪಟ್ಟಿಗೆ ಸೇರ್ಪಡೆ ಮಾಡಿದೆ.

ಏಕಾಂಗಿಯಾಗಿ ಪ್ರತಿಭಟನೆ ಮಾಡಿದ್ದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ನೆರೆ ಪರಿಹಾರದಲ್ಲಿ ತಾರತಮ್ಯ ಎಂದು ಆರೋಪ ಮಾಡಿದ್ದರು. ಈ ವೇಳೆ ರಾಜ್ಯ ಸರ್ಕಾರ ಪರಿಹಾರ ನೀಡುವ ಭರವಸೆ ನೀಡಿತ್ತು. ಸದ್ಯ ಕಡೆಗೂ‌ ಮೂಡಿಗೆರೆಯನ್ನ ನೆರೆ ಪೀಡಿತ ಪ್ರದೇಶದ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.

ಈ ಬಗ್ಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, 61 ತಾಲೂಕುಗಳು ಪ್ರವಾಹ ಪೀಡಿತವೆಂದು ಘೋಷಣೆ ಮಾಡಿದ್ದೆವು. ಮಳೆ‌ ಹೆಚ್ಚಾಗಿ ಮತ್ತೆ ಹಾನಿಯಾಗಿದೆ. ಹೊಸದಾಗಿ 22 ತಾಲೂಕು ಪ್ರವಾಹ ಪೀಡಿತವೆಂದು ಘೋಷಣೆ ಮಾಡಿದ್ದೇವೆ. ಬೆಳಗಾವಿ, ಚಿಕ್ಕಮಗಳೂರು, ಕಡೂರು, ತರಿಕೆರೆ, ಸೂಪ ಬಬಲೇಶ್ವರ, ಕೋಲಾರ, ಮುದ್ದೆಬಿಹಾಳ, ಮೂಡಿಗೆರೆ, ಹೊಸನಗರಗಳನ್ನ ಪ್ರವಾಹ ಪೀಡಿತವೆಂದು ಘೋಷಿಸಿದ್ದೇವೆ.

ಬೆಂಗಳೂರಿನಲ್ಲೂ 50ಕ್ಕೂ ಹೆಚ್ಚು ರಸ್ತೆಗಳಲ್ಲಿ ನೀರು ನಿಲ್ಲುತ್ತಿದೆ. ಅಧಿಕಾರಿಗಳಿಗೆ ಇದರ ಬಗ್ಗೆ ಸೂಚಿಸಿದ್ದೇನೆ. ಜೊತೆಗೆ ಸಮಸ್ಯೆ ಪರಿಹಾರಕ್ಕೂ ಸೂಚಿಸಿದ್ದೇನೆ. ತುರ್ತು ಕಾಮಗಾರಿ ಮುಗಿಸುವ ಬಗ್ಗೆ ತಿಳಿಸಿದ್ದೇನೆ ಎಂದರು.

ನಮ್ಮ ಧ್ವನಿಗೆ ನಮ್ಮ ಸರ್ಕಾರದಲ್ಲೇ ಯಾಕೋ ಬೆಲೆ ಸಿಗ್ತಿಲ್ಲ. ಮೀಸಲು (ರಿಸರ್ವ್) ಕ್ಷೇತ್ರವೆಂಬ ಕಾರಣಕ್ಕೋ ಏನೋ ಕಡೆಗಣಿಸ್ತಿದ್ದಾರೆ ಎಂದು ವಿಧಾನಸೌಧದ ಎದುರು ಮೆಟ್ಟಿಲಿನ ಮೇಲೆ ಏಕಾಂಗಿಯಾಗಿ ಧರಣಿ ಕುಳಿತಿರುವ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ನೊಂದುಕೊಂಡು ಹೇಳಿದ್ರು. ನಮ್ಮದೇ ಸರ್ಕಾರ ಈ ರೀತಿ ತಾರತಮ್ಯ ಮಾಡಬಾರದು. ನಮ್ಮದು ಆದಷ್ಟು ಬೇಗ ಜನರಲ್ ಕ್ಷೇತ್ರ ಆಗಲಿ ಅನಿಸುತ್ತಿದೆ. ಸಚಿವ ಆರ್.ಅಶೋಕ್ ಈ ರೀತಿ ಮಾಡಿದ್ದಾರೆ ಅನಿಸುತ್ತಿಲ್ಲ. ಎಲ್ಲ ಉಸ್ತುವಾರಿ ಸಚಿವರು ಭೇಟಿ ನೀಡ್ತಾರೆ, ಏನೂ ಮಾಡಲ್ಲ. ಇವರಿಗೆ ಮಾತಲ್ಲಿ ಹೇಳಿದ್ರೆ ಅರ್ಥ ಆಗಲ್ಲ, ಹೀಗಾಗಿ ಧರಣಿ ಕುಳಿತಿರುವೆ ಎಂದು ವಿಧಾನಸೌಧದಲ್ಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: MP Kumaraswamy: ವಿಧಾನಸೌಧ ಎದುರು ಧರಣಿ ಕುಳಿತ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ! ಡಿಮ್ಯಾಂಡ್​​ ಏನು?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?