AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ: ಚೆಕ್ ಬೌನ್ಸ್ ಪ್ರಕರಣದಲ್ಲಿ ವಿಶೇಷ ಕೋರ್ಟ್​ನಿಂದ ಶಿಕ್ಷೆ

ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಶಿಕ್ಷೆ ವಿಧಿಸಲಾಗಿದೆ.

ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ: ಚೆಕ್ ಬೌನ್ಸ್ ಪ್ರಕರಣದಲ್ಲಿ ವಿಶೇಷ ಕೋರ್ಟ್​ನಿಂದ ಶಿಕ್ಷೆ
ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿImage Credit source: publictv.in
TV9 Web
| Edited By: |

Updated on:Feb 13, 2023 | 4:32 PM

Share

ಬೆಂಗಳೂರು: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ (MP Kumaraswamy) ಗೆ ಸಂಕಷ್ಟ ಎದುರಾಗಿದ್ದು, ಚೆಕ್ ಬೌನ್ಸ್ ಪ್ರಕರಣದಲ್ಲಿ (cheque bounce case) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಶಿಕ್ಷೆ ವಿಧಿಸಲಾಗಿದೆ. ಒಟ್ಟು 8 ಕೇಸ್​ಗಳಲ್ಲಿ 1.38 ಕೋಟಿ ಹಣ ಪಾವತಿಸಬೇಕು. ಇಲ್ಲವಾದರೆ ತಲಾ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು 42ನೇ ಎಸಿಎಂಎಂ ಕೋರ್ಟ್ ಜಡ್ಜ್ ಜೆ. ಪ್ರೀತ್​ ಆದೇಶ ಹೊರಡಿಸಿದ್ದಾರೆ.

ದಾಸರಹಳ್ಳಿ ಕ್ಷೇತ್ರದ ಕಾಮಗಾರಿಯಲ್ಲಿ ಅಕ್ರಮ ಆರೋಪ

ಬೆಂಗಳೂರು: ನಗರದ ದಾಸರಹಳ್ಳಿ ಕ್ಷೇತ್ರದ ಕಾಮಗಾರಿಯಲ್ಲಿ ಅಕ್ರಮ ಆರೋಪ ಕೇಳಿಬಂದಿತ್ತು. ಈ ಕುರಿತಾಗಿ ಮಾಜಿ ಶಾಸಕ ಎಸ್​. ಮುನಿರಾಜ್​ ನಿನ್ನೆ ಆರೋಪಿಸಿದ್ದರು. ಸದ್ಯ ಈ ವಿಚಾರವಾಗಿ ತಮ್ಮ ವಿರುದ್ಧದ ಆರೋಪಕ್ಕೆ ಬೆಂಗಳೂರಿನ ದಾಸರಹಳ್ಳಿ ಕ್ಷೇತ್ರದ ಜೆಡಿಎಸ್‌ ಶಾಸಕ R.ಮಂಜುನಾಥ್‌ (R Manjunath) ಸ್ಪಷ್ಟನೆ ನೀಡಿದ್ದಾರೆ. ಇಂದು (ಫೆ. 12) ಸುದ್ದಿಗೊಷ್ಠಿಯಲ್ಲಿ ಮಾತನಾಡಿ, ದಾಸರಹಳ್ಳಿ ಕ್ಷೇತ್ರದಲ್ಲಿ ಅಷ್ಟು ದೊಡ್ಡ ಮೊತ್ತದ ಕಾಮಗಾರಿಗಳೇ ನಡೆದಿಲ್ಲ. ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ. ದಾಸರಹಳ್ಳಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಕ್ಷೇತ್ರದ ಕಾಮಗಾರಿ ಸಂಬಂಧ ಬಾಕಿ ಹಣವನ್ನೇ ಸರ್ಕಾರ ರಿಲೀಸ್ ಮಾಡ್ತಿಲ್ಲ ಎಂದು ಹೇಳಿದರು.

ಇದನ್ನೂ ಓದಿ: HDK ಸಿಎಂ ಆಗಿದ್ದಾಗ ದಾಸರಹಳ್ಳಿಗೆ 30 ಕೋಟಿ ರೂ. ಅನುದಾನ, ಶಾಸಕರು ಪರ್ಸೆಂಟೇಜ್​ ತೆಗೆದುಕೊಂಡು ಬಿಲ್‌ ಮಾಡಿರುವ ಆರೋಪ

ಅನುದಾನ ಬಿಡುಗಡೆ ಆಗದಂತೆ ತಡೆ

ದಾಸರಹಳ್ಳಿ ಕ್ಷೇತ್ರಕ್ಕೆ ಇನ್ನೂ 90 ಕೋಟಿ ಅನುದಾನ ಬಿಡುಗಡೆ ಆಗಬೇಕಿದೆ. ಕ್ಷೇತ್ರಕ್ಕೆ ಬಾಕಿ ಅನುದಾನ ಬಿಡುಗಡೆ ಆಗದಂತೆ ಸಚಿವ ಅಶೋಕ್‌ ತಡೆದಿದ್ದಾರೆ. ಇದಕ್ಕೆ ದಾಸರಹಳ್ಳಿ ಕ್ಷೇತ್ರದ ಮಾಜಿ ಶಾಸಕರ ಕೈವಾಡ ಇದೆ ಎಂದು ಮಾಜಿ ಶಾಸಕ ಮುನಿರಾಜು ಹೆಸರು ಹೇಳದೆ ಪರೋಕ್ಷವಾಗಿ ಆರೋಪಿಸಿದರು.

ಲೇಔಟ್​ ಸೈಟ್ ಹಂಚಿಕೆಯಲ್ಲಿ ಪಾಲುದಾರರಿಗೆ ವಂಚನೆ ಆರೋಪ

ಬೆಂಗಳೂರು: ಲೇಔಟ್​ ಸೈಟ್ ಹಂಚಿಕೆಯಲ್ಲಿ ಪಾಲುದಾರರಿಗೆ ವಂಚನೆ ಆರೋಪದಡಿ ಬಿಜೆಪಿ MLC ಆರ್.ಶಂಕರ್ ಪತ್ನಿ ಮತ್ತು ಪುತ್ರನ ವಿರುದ್ಧ ಇಂದಿರಾನಗರ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಕಂಪನಿ ಪಾರ್ಟನರ್ ಆಗಿರುವ ಪ್ರಭಾವತಿ ಎಂಬುವವರಿಂದ ದೂರು ನೀಡಲಾಗಿದೆ. ಪಾರ್ಟನರ್​​ಗೆ ವಂಚಿಸಿ ಅಕ್ರಮವಾಗಿ 23 ಸೈಟ್​ ಮಾರಾಟ ಆರೋಪ ಕೇಳಿಬಂದಿದೆ.  ಆರ್.ಶಂಕರ್ ಪುತ್ರ, ಪತ್ನಿ ಸೇರಿ ಒಟ್ಟು ನಾಲ್ವರು ಕಂಪನಿ ಆರಂಭಿಸಿದ್ದು, ಕಂಪನಿ ಹೆಸರಿನಲ್ಲಿ ಬೊಮ್ಮನಹಳ್ಳಿಯಲ್ಲಿ ಲೇಔಟ್ ನಿರ್ಮಿಸಿದ್ದರು.

ಲೇಔಟ್ ನಿರ್ಮಾಣದ ವೇಳೆ ನಾಲ್ವರೂ ಪಾರ್ಟನರ್​ಗಳು ಒಪ್ಪಂದ ಮಾಡಿಕೊಂಡಿದ್ದು, ಸೈಟ್ ಹಂಚಿಕೆ ವೇಳೆ ಎಲ್ಲರ ಸಹಿ ಕಡ್ಡಾಯವೆಂದು ಅಗ್ರಿಮೆಂಟ್ ಮಾಡಲಾಗಿದೆ. ಆದರೆ ಇದೀಗ ಪ್ರಭಾವತಿ ಕೈಬಿಟ್ಟು ಮೂವರಿಂದ ಸೈಟ್ ಮಾರಾಟ ಮಾಡಿದ್ದು, ಅಕ್ರಮವಾಗಿ ಬ್ಯಾಂಕ್​ನಲ್ಲಿ ಖಾತೆ ತೆಗೆದು ವಂಚಿಸಿರುವುದಾಗಿ ಎಫ್​ಐಆರ್​ನಲ್ಲಿ ಉಲ್ಲೇಖಿಸಲಾಗಿದೆ. ಮೂವರ ಮೇಲೆ ಕೇಸ್ ದಾಖಲಿಸದ ಇಂದಿರಾನಗರ ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:32 pm, Mon, 13 February 23

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?