AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಭವನಕ್ಕೆ ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿದ್ಯಾರು? ಅಷ್ಟಕ್ಕೂ ಬಾಂಬ್ ಬೆದರಿಕೆ ಹಾಕಿದ್ಯಾಕೆ? ಇಲ್ಲಿದೆ ಕಾರಣ

Raj Bhavan Bomb Threat: ಬೆಂಗಳೂರಿನ ರಾಜಭವನಕ್ಕೆ ಬಾಂಬ್ ಇಟ್ಟಿರುವುದಾಗಿ​ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಗಾದ್ರೆ, ಹುಸಿ ಬಾಂಬ್ ಬೆದರಿಕೆ ಹಾಕಿದ್ದ ಆ ವ್ಯಕ್ತಿ ಯಾರು? ಯಾಕಾಗಿ ಬಾಂಬ್​ ಬೆದರಿಕೆ ಮಾಡಿದ್ದ? ಎನ್ನುವ ವಿವರ ಈ ಕೆಳಗಿನಂತಿದೆ.

ರಾಜಭವನಕ್ಕೆ ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿದ್ಯಾರು? ಅಷ್ಟಕ್ಕೂ ಬಾಂಬ್ ಬೆದರಿಕೆ ಹಾಕಿದ್ಯಾಕೆ? ಇಲ್ಲಿದೆ ಕಾರಣ
TV9 Web
| Edited By: |

Updated on: Dec 12, 2023 | 11:04 PM

Share

ಬೆಂಗಳೂರು, (ಡಿಸೆಂಬರ್​ 12): ರಾಜಭವನಕ್ಕೆ (Raj Bhavan) ಬಾಂಬ್ ಇಟ್ಟಿರುವುದಾಗಿ​ ಬೆದರಿಕೆ ಕರೆ (hoax Bomb threat ) ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಮುಳಬಾಗಿಲು ಬಳಿಯ ವಡ್ಡಳ್ಳಿ ನಿವಾಸಿ ಭಾಸ್ಕರ್ ಎನ್ನುವಾತನನ್ನು ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆದ್ರೆ, ಆರೋಪಿ ಬಾಂಬ್ ಬೆದರಿಕೆ ಕರೆ ಹಾಕಿರುವ ಹಿಂದಿನ ಕಾರಣ ಕೇಳಿ ಪೊಲೀಸರಿಗೆ ನಗಬೇಕೋ ಏನು ಮಾಡಬೇಕು ಎನ್ನುವುದು ತಿಳಿಯದಂತಾಗಿದೆ.

ಸೋಮವಾರ ರಾತ್ರಿ ಬೆಂಗಳೂರಿಗೆ ಬಂದಾಗ ಎನ್​ಐಎ ನಂಬರ್ ಸರ್ಚ್ ಮಾಡಿ ಬಾಂಬ್ ಬೆದರಿಕೆ ಕರೆ ಮಾಡಿರುವುದಾಗಿ ಆರೋಪಿ ಭಾಸ್ಕರ್ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಸುಮ್ಮನೆ ಹೋಗುತ್ತಿದ್ದಾಗ ರಾಜಭವನ ನೋಡಿದ್ದನಂತೆ. ಬಳಿಕ ಬಾಂಬ್ ಇಟ್ಟಿದ್ದೀನಿ ಎಂದು ಕರೆ ಮಾಡಬೇಕು ಅನ್ನಿಸ್ತಂತೆ. ಹೀಗಾಗಿ ಕೂಡಲೇ ನೆಟ್​ನಲ್ಲಿ ಎನ್​ಐಎ ನಂಬರ್ ಸರ್ಚ್ ಮಾಡಿ ಕಾಲ್ ಮಾಡಿದ್ನಂತೆ. ಬಾಂಬ್ ಇಟ್ಟಿದ್ದೀನಿ ಅಂತಾ ಸುಮ್ಮನೆ ಕರೆ ಮಾಡಬೇಕು. ಅನಿಸ್ತು ಅದಕ್ಕೆ ಮಾಡಿದೆ ಎಂದು ಪೊಲೀಸರ ಮುಂದೆ ಹೇಳಿದ್ದಾನೆ. ಆರೋಪಿ ಭಾಸ್ಕರ್ ಹೇಳಿದ ವಿಷಯ ಕೇಳಿ ಪೊಲೀಸರರು ತಲೆ ಮೇಲೆ ಕೈ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: Raj Bhavan Bomb Threat: ಬೆಂಗಳೂರು ಶಾಲೆ ಬೆನ್ನಲ್ಲೇ ಈಗ ರಾಜ ಭವನಕ್ಕೆ ಬಾಂಬ್ ​ಬೆದರಿಕೆ ಕರೆ

ಸೋಮವಾರ (ಡಿ.11)ರ ರಾತ್ರಿ 11.30ರ ಸುಮಾರಿಗೆ ರಾಜ ಭವನದಲ್ಲಿ ಬಾಂಬ್​ ಇರಿಸಲಾಗಿದೆ ಎಂದು ಬಂಧಿತ ಭಾಸ್ಕರ್ ಅಕರೆ ಮಾಡಿದ್ದ. ಇದರಿಂದ ರಾಜ ಭವನ ಭದ್ರತಾ ಅಧಿಕಾರಿಗಳು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಸಿಕ್ಕ ಕೂಡಲೇ ಪೊಲೀಸರು ಹಾಗೂ ಬಾಂಬ್​ ಸ್ಕ್ವಾಡ್​ ಸ್ಥಳಕ್ಕೆ ಧಾವಿಸಿ ರಾಜಭವನದ ಒಳಗೆ ಮತ್ತು ಹೊರಗೆ ಒಂದು ಇಂಚೂ ಬಿಡದೇ ಪರಿಶೀಲನೆ ಮಾಡಿದ್ದರು. ಬಳಿಕ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದಾಗ ನಿಟ್ಟುಸಿರುಬಿಟ್ಟಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು