AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೋಟ್ಯಂತರ ರೂ ಮೌಲ್ಯದ ಬಿಡಿಎ ಸೈಟ್ ಕಬಳಿಕೆ ಪ್ರಕರಣ ಬೆಳಕಿಗೆ: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ಬೆಂಗಳೂರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಭೂಗಳ್ಳತನ ಪ್ರಕರಣ ಒಂದು ಬೆಳಕಿಗೆ ಬಂದಿದೆ. ಕೋಟ್ಯಂತರ ರೂ ಮೌಲ್ಯದ ಬಿಡಿಎ ಆಸ್ತಿಗಳನ್ನು ನಕಲಿ ದಾಖಲೆ ಮೂಲಕ ಕಬಳಿಸಲು ಯತ್ನಿಸಿದ ವ್ಯಕ್ತಿಯನ್ನು ತಡರಾತ್ರಿ ಪೊಲೀಸರು ಬಂಧಿಸಿದ್ದು, ಈ ಬಗ್ಗೆ ಶೇಷಾದ್ರಿಪುರಂ ಪೊಲೀಸ್​​ ಠಾಣೆಯಲ್ಲಿ ಎಫ್​​ಐಆರ್​​ ದಾಖಲಾಗಿದೆ.

ಬೆಂಗಳೂರಿನಲ್ಲಿ ಕೋಟ್ಯಂತರ ರೂ ಮೌಲ್ಯದ ಬಿಡಿಎ ಸೈಟ್ ಕಬಳಿಕೆ ಪ್ರಕರಣ ಬೆಳಕಿಗೆ: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು
ಬಿಡಿಎImage Credit source: tv9 kannada
ಶಿವಪ್ರಸಾದ್​ ಬಿ.
| Edited By: |

Updated on: May 29, 2026 | 5:47 PM

Share

ಬೆಂಗಳೂರು, ಮೇ 29: ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಕಬಳಿಸಲು ಯತ್ನಿಸಿದ ಬೃಹತ್ ಭೂಗಳ್ಳತನ (Land)  ಹಗರಣವೊಂದು ಬೆಳಕಿಗೆ ಬಂದಿದೆ. ಈ ಸಂಬಂಧ ವಂಚಕ ಶಾಲೂಮ್ ಕುಮಾರ್ ಎಂಬಾತನನ್ನು ಪೊಲೀಸರು ತಡರಾತ್ರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಸದ್ಯ ಶೇಷಾದ್ರಿಪುರಂ ಠಾಣೆಯಲ್ಲಿ ಈ ಕುರಿತು ಎಫ್​​ಐಆರ್​ ದಾಖಲಾಗಿದೆ.

ಮುಖ್ಯಾಂಶಗಳು

  • ಕೋಟ್ಯಂತರ ರೂಪಾಯಿ ಮೌಲ್ಯದ ಭೂಗಳ್ಳತನ ಪ್ರಕರಣ ರಿವೀಲ್​​
  • ನಕಲಿ ದಾಖಲೆ ಸೃಷ್ಟಿಸಿ ಬಿಡಿಎ ಆಸ್ತಿ ಕಬಳಿಸಲು ಯತ್ನ
  • ಶೇಷಾದ್ರಿಪುರಂ ಠಾಣೆ ಪೊಲೀಸರಿಂದ ಆರೋಪಿ ಬಂಧನ

ಎಫ್‌ಐಆರ್ ದಾಖಲು

ಬಿಡಿಎ ವಿಜಿಲೆನ್ಸ್ ವಿಭಾಗದ ಅಧಿಕಾರಿ ಗೋವಿಂದರಾಜು ದೂರಿನ ಆಧಾರದ ಮೇಲೆ ಶೇಷಾದ್ರಿಪುರಂ ಪೊಲೀಸರು ಆರೋಪಿ ಶಾಲೂಮ್ ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 471, 419, 465, 420, 120B, 468 ಹಾಗೂ 34ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ತದನಂತರ ತಡರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಹೆಡೆಮುರಿಕಟ್ಟಿದ್ದಾರೆ.

ನಕಲಿ ಜಿಪಿಎ ದಂಧೆ: ಸಾರ್ವಜನಿಕರಿಂದ ದೂರು

ಬಂಧಿತ ಆರೋಪಿ ಶಾಲೂಮ್ ಕುಮಾರ್ ಗ್ರೇಟರ್ ಬೆಂಗಳೂರು ಅಥಾರಿಟಿ ಹೆಸರಿನಲ್ಲಿ ನಕಲಿ ದಾಖಲೆ ಹಾಗೂ ನಕಲಿ ಜಿಪಿಎ ಪತ್ರಗಳನ್ನು ಸೃಷ್ಟಿಸುತ್ತಿದ್ದ. ಈ ನಕಲಿ ದಾಖಲೆಗಳ ಮೂಲಕ ಅರ್ಕಾವತಿ ಲೇಔಟ್ ಹಾಗೂ ಒಎಂಬಿಆರ್ ಲೇಔಟ್‌ಗಳಲ್ಲಿರುವ ಬಿಡಿಎಗೆ ಸೇರಿದ ಕೋಟ್ಯಂತರ ರೂ. ಮೌಲ್ಯದ ಸೈಟ್‌ಗಳನ್ನು ಕಬಳಿಸಲು ಸಂಚು ರೂಪಿಸಿದ್ದ. ಈ ಅಕ್ರಮ ದಂಧೆ ಬಗ್ಗೆ ತಿಳಿದ ಸಾರ್ವಜನಿಕರು ಬಿಡಿಎ ವಿಜಿಲೆನ್ಸ್ ವಿಭಾಗಕ್ಕೆ ದೂರು ನೀಡಿದ್ದರು.

ಇದನ್ನೂ ಓದಿ: ಕಾರಾಗೃಹ ಇಲಾಖೆಯ ಕೋಟ್ಯಂತರ ರೂ ಮೌಲ್ಯದ ಕಟ್ಟಡವನ್ನೇ ಕಬ್ಜ ಮಾಡಿದ ಭಲೇ ಕಿಲಾಡಿಗಳು

ಸಾರ್ವಜನಿಕರ ದೂರು ಬೆನ್ನಲ್ಲೇ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಬಿಡಿಎ ವಿಜಿಲೆನ್ಸ್ ವಿಭಾಗದ ಎಸ್‌ಪಿ ನಾಗರಾಜ್, ಪ್ರಕರಣದ ಸಮಗ್ರ ತನಿಖೆಗೆ ಆದೇಶಿಸಿದ್ದರು. ತನಿಖೆ ಪೂರ್ಣಗೊಳಿಸಿದ ಎಸ್‌ಪಿ ನಾಗರಾಜ್, ಅಕ್ರಮ ನಡೆದಿರುವುದನ್ನು ದೃಢಪಡಿಸಿ, ಬಿಡಿಎ ಆಯುಕ್ತರಾದ ಮೇಜರ್ ಮಣಿವಣ್ಣನ್ ಅವರಿಗೆ ವರದಿ ಸಲ್ಲಿಸಿದ್ದರು. ವಿಜಿಲೆನ್ಸ್ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಿದ ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್, ವಂಚಕನ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು.

ಇತರರ ಬಂಧನಕ್ಕಾಗಿ ವಿಶೇಷ ತಂಡ ರಚನೆ

ಇನ್ನು ಈ ಕೋಟ್ಯಂತರ ರೂ ಮೌಲ್ಯದ ಭೂಕಬಳಿಕೆ ದಂಧೆಯಲ್ಲಿ ಕೇವಲ ಶಾಲೂಮ್ ಕುಮಾರ್ ಮಾತ್ರವಲ್ಲದೆ, ಬಿಡಿಎ ಒಳಗಿನ ಸಿಬ್ಬಂದಿ ಅಥವಾ ಇತರ ಪ್ರಭಾವಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ, ಪ್ರಕರಣದಲ್ಲಿ ಶಾಮೀಲಾಗಿರುವ ಉಳಿದ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲು ಶೇಷಾದ್ರಿಪುರಂ ಠಾಣೆ ಪೊಲೀಸರು ಈಗಾಗಲೇ ವಿಶೇಷ ಅಧಿಕಾರ ತಂಡವನ್ನು ರಚಿಸಲಾಗಿದ್ದು, ಶೋಧ ಕಾರ್ಯ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ