AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಮುನಾವರ್ ಫಾರುಕಿ ಶೋಗೆ ವಿರೋಧ: ಕಾರ್ಯಕ್ರಮ ರದ್ದುಗೊಳಿಸುವಂತೆ ಪೊಲೀಸ್​​ ಆಯುಕ್ತರಿಗೆ ಮನವಿ

ಬೆಂಗಳೂರಿನಲ್ಲಿ ನಡೆಯಲಿರುವ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗಿದೆ. ಹಿಂದಿನ ವಿವಾದಗಳು ಮತ್ತು ಕಾನೂನು ಸುವ್ಯವಸ್ಥೆ ಸಮಸ್ಯೆಗಳ ಆತಂಕದಿಂದ ಶೋ ರದ್ದುಪಡಿಸುವಂತೆ ಪೊಲೀಸ್ ಆಯುಕ್ತರಿಗೆ ಹಿಂದೂ ಜನಜಾಗೃತಿ ಸಮಿತಿ ಮನವಿ ಸಲ್ಲಿಸಿದೆ. ಕಾರ್ಯಕ್ರಮಕ್ಕೆ ಅನುಮತಿ ನೀಡಿದರೆ ಪ್ರತಿಭಟನೆಗಳು ಹಾಗೂ ಶಾಂತಿ ಭಂಗ ಉಂಟಾಗುವ ಸಾಧ್ಯತೆ ಇದೆ ಎಂದು ಸಮಿತಿ ತಿಳಿಸಿದೆ.

ಬೆಂಗಳೂರಲ್ಲಿ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಮುನಾವರ್ ಫಾರುಕಿ ಶೋಗೆ ವಿರೋಧ: ಕಾರ್ಯಕ್ರಮ ರದ್ದುಗೊಳಿಸುವಂತೆ ಪೊಲೀಸ್​​ ಆಯುಕ್ತರಿಗೆ ಮನವಿ
ಮುನಾವರ್ ಫಾರೂಕಿ
ಪ್ರಸನ್ನ ಹೆಗಡೆ
|

Updated on:Apr 17, 2026 | 4:45 PM

Share

ಬೆಂಗಳೂರು, ಏಪ್ರಿಲ್​​ 17: ನಗರದಲ್ಲಿ ಶನಿವಾರ (ನಾಳೆ) ನಡೆಯಲಿರುವ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಮುನಾವರ್ ಫಾರುಕಿ ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಗಳಿಂದ ಆಕ್ಷೇಪ ಕೇಳಿಬಂದಿದೆ. ಶೋ ರದ್ದು ಪಡಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್​​ ಅವರಿಗೆ ಹಿಂದೂ ಜನಜಾಗೃತಿ ಸಮಿತಿ ಮನವಿ ಸಲ್ಲಿಸಿದೆ. ಮುನಾವರ್ ಫಾರುಕಿ ಹಳೆಯ ವಿವಾದಗಳು ಮತ್ತು ಕಾನೂನು ಸುವ್ಯವಸ್ಥೆ ಸಮಸ್ಯೆಗಳ ಆತಂಕವನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

2021ರಲ್ಲಿ ಇಂದೋರ್‌ನಲ್ಲಿ ಫಾರುಕಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನೂ ಹಿಂದೂ ಜನಜಾಗೃತಿ ಸಮಿತಿ ಉಲ್ಲೇಖಿಸಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಸೇರಿದಂತೆ ವಿವಿಧ ಐಪಿಸಿ ಸೆಕ್ಷನ್‌ಗಳಡಿ ಅವರ ಮೇಲೆ ಪ್ರಕರಣ ದಾಖಲಾಗಿತ್ತು ಎಂದು ತಿಳಿಸಿದೆ. ಆ ಪ್ರಕರಣ ಸಂಬಂಧ ಫಾರುಕಿ ಬಂಧನಕ್ಕೊಳಗಾಗಿ ಒಂದು ತಿಂಗಳಿಗಿಂತ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ನಂತರ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆಯಾದರೂ, ಆ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ಬಾಕಿಯಿದೆ ಎಂದು ಸಮಿತಿ  ಹೇಳಿದೆ.

ಇದನ್ನೂ ಓದಿ: ಕುಡಿದವನಿಗೆ ಟೆಸ್ಟ್ ಡ್ರೈವ್​ಗೆ ಕಾರು ನೀಡಿದ ಶೋರೂಂ ಸಿಬ್ಬಂದಿ, ನಾಲ್ಕು ವಾಹನಗಳು ಜಖಂ, ಓರ್ವನ ಕಾಲು ಮುರಿತ!

ಪ್ರಯಾಗರಾಜ್ ಮತ್ತು ಮುಂಬೈ ಸೇರಿದಂತೆ ವಿವಿಧ ನಗರಗಳಲ್ಲಿ ಅವರ ಕಾರ್ಯಕ್ರಮಗಳ ವಿಷಯಕ್ಕೆ ಸಂಬಂಧಿಸಿದಂತೆ ವಿವಾದಗಳು ಮತ್ತು ಆಕ್ಷೇಪಣೆಗಳು ಬಂದಿದ್ದವು. ಮುಂಬೈ, ದೆಹಲಿ, ಪುಣೆ, ಹೈದರಾಬಾದ್, ಗೋವಾ, ರಾಯ್ಪುರ್ ಮತ್ತು ಗುರುಗ್ರಾಂ ಸೇರಿದಂತೆ ಬೆಂಗಳೂರಲ್ಲೂ ಅವರ ಶೋಗಳು ಈ ಹಿಂದೆ ಕಾನೂನು ಸುವ್ಯವಸ್ಥೆ ಆತಂಕದಿಂದ ರದ್ದಾಗಿದ್ದವು ಅಥವಾ ಅನುಮತಿ ನಿರಾಕರಿಸಲಾಗಿತ್ತು. ಹೀಗಾಗಿ ಬೆಂಗಳೂರಿನಲ್ಲಿ ಈ ಕಾರ್ಯಕ್ರಮಕ್ಕೆ ಅನುಮತಿ ನೀಡಿದರೆ ಸಾರ್ವಜನಿಕ ಭಾವನೆಗಳಿಗೆ ಧಕ್ಕೆ ಉಂಟಾಗಿ, ಪ್ರತಿಭಟನೆಗಳು, ಅಶಾಂತಿ ಮತ್ತು ಶಾಂತಿ ಭಂಗ ಸಂಭವಿಸುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಸಮಾಜದಲ್ಲಿ ಸೌಹಾರ್ದತೆ ಉಳಿಸಿಕೊಳ್ಳುವ ದೃಷ್ಟಿಯಿಂದ ಮಾತ್ರ ಈ ಮನವಿ ಮಾಡಿರೋದಾಗಿ ಸಮಿತಿ ಸ್ಪಷ್ಟಪಡಿಸಿರುವ ಬಗ್ಗೆ ವರದಿಯಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:43 pm, Fri, 17 April 26

Follow Us
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ