AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರದಲ್ಲಿ ಕೊಲೆ ಆರೋಪಿಯ ಭರ್ಜರಿ ಹುಟ್ಟಹಬ್ಬ ಆಚರಣೆ: ಜೈಲಾಧಿಕಾರಿಗಳು ಗಪ್​ ಚುಪ್​

ಅಗ್ರಹಾರ ಜೈಲಿನಲ್ಲಿ ಕೊಲೆಗಾರನೊಬ್ಬ ಭರ್ಜರಿ ಬರ್ತ್‌ಡೇ ಸೆಲೆಬ್ರೇಶನ್ ಮಾಡಿಕೊಂಡಿದ್ದಾನೆ. ಹೊರಗಿನಿಂದ ಬಂದ ಸ್ನೇಹಿತರು ಜೈಲಿನಲ್ಲಿ ಕೊಲೆಗಾರನಿಗೆ ಹೂವಿನ ಹಾರ ಹಾಕಿ ಕೇಕ್ ಕತ್ತರಿಸಿ ಭರ್ಜರಿಯಾಗಿ ಹುಟ್ಟುಹಬ್ಬ ಆಚರಿಸಿದ್ದಾರೆ. ಪೊಲೀಸರ ಸಹಕಾರವಿಲ್ಲದೆ ಹುಟ್ಟಹಬ್ಬ ಆಚರಿಸಲು ಸಾಧ್ಯವಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಪರಪ್ಪನ ಅಗ್ರಹಾರದಲ್ಲಿ ಕೊಲೆ ಆರೋಪಿಯ ಭರ್ಜರಿ ಹುಟ್ಟಹಬ್ಬ ಆಚರಣೆ: ಜೈಲಾಧಿಕಾರಿಗಳು ಗಪ್​ ಚುಪ್​
ಪರಪ್ಪನ ಅಗ್ರಹಾರದಲ್ಲಿ ಕೊಲೆ ಆರೋಪಿಯ ಭರ್ಜರಿ ಹುಟ್ಟಹಬ್ಬ ಆಚರಣೆ
ರಾಮು, ಆನೇಕಲ್​
| Edited By: |

Updated on: Nov 24, 2023 | 11:54 AM

Share

ಬೆಂಗಳೂರು, ನ.24: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ದುಡ್ಡು ಕೊಟ್ಟರೆ ಏನು ಬೇಕಾದ್ರು ಸಿಗುತ್ತೆ, ಎಂತಹ ಐಷಾರಾಮಿ ಜೀವನವನ್ನು ಬೇಕಾದ್ರು ನಡೆಸಬಹುದು ಎಂಬುವುದನ್ನು ಸಾಬೀತು ಮಾಡಲು ಈಗಾಗಲೇ ಅನೇಕ ವಿಡಿಯೋಗಳು ಸಿಕ್ಕಿವೆ. ಇದರ ಜೊತೆಗೆ ಈಗ ಮತ್ತೊಂದು ಸಾಕ್ಷ್ಯ ದೊರೆತಿದ್ದು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆಗಾರನೊಬ್ಬ ಭರ್ಜರಿ ಬರ್ತ್‌ಡೇ ಸೆಲೆಬ್ರೇಶನ್ ಮಾಡಿಕೊಂಡಿದ್ದಾನೆ (Birthday Celebration in Jail). ಹೊರಗಿನಿಂದ ಬಂದವರು ಜೈಲಿನಲ್ಲಿ ಕೊಲೆಗಾರನಿಗೆ ಹೂವಿನ ಹಾರ ಹಾಕಿ ಕೇಕ್ ಕತ್ತರಿಸಿ ಭರ್ಜರಿಯಾಗಿ ಹುಟ್ಟುಹಬ್ಬ ಆಚರಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಆಗುತ್ತಿರುವ ಅಕ್ರಮಗಳಿಗೆ ಇನ್ನೂ ಕಡಿವಾಣ ಹಾಕಲಾಗಿಲ್ಲ. ಪರಪ್ಪನ ಅಗ್ರಹಾರ ಜೈಲಿನೊಳಗಡೆ ರೌಡಿಗಳಿಗೆ ಹೈಫೈ ಸೌಲಭ್ಯ ನೀಡಲಾಗುತ್ತಿದೆ. ರೌಡಿಗಳು ಹೊರಗಿದ್ರು ಅಬ್ಬರವೇ ಜೈಲಿನಲ್ಲಿದ್ದರೂ ಅಬ್ಬರವೇ ಎಂಬಂತಾಗಿದೆ. ಹೊರಗಡೆಯಿಂದ ಬಂದ ಗೆಳೆಯರು ತಮ್ಮ ಕೊಲೆಗಾರ ಸ್ನೇಹಿತನಿಗೆ ಹಾರ, ಕೇಕ್ ತೆಗೆದುಕೊಂಡು ಹೋಗಿ ಬರ್ತ್ ಡೇ ಆಚರಿಸಿದ್ದಾರೆ. ವಿಚಾರಣಾಧೀನ ಖೈದಿಯಾಗಿ ಜೈಲಿನಲ್ಲಿರುವ ಉಮೇಶ್‌, ಅದ್ಧೂರಿಯಾಗಿ ಬರ್ತ್‌ಡೇ ಆಚರಿಸಿಕೊಂಡಿದ್ದಾನೆ. ಕೇಕ್ ತಿಂದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ. ಅಲ್ಲದೆ ಜೈಲು ಅಧಿಕಾರಿಗಳು ಬರ್ತ್‌ಡೇಗೆ ಜೈಲನ್ನೇ ಫೈವ್‌ಸ್ಟಾರ್ ಹೋಟೆಲ್ ರೀತಿಯಲ್ಲಿ ವೇದಿಕೆ ಸಜ್ಜು ಮಾಡಿ ಕೊಟ್ಟಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.

ಇದನ್ನೂ ಓದಿ: ಎಂಎಲ್​ಎ ಟಿಕೆಟ್ ವಂಚನೆ ಕೇಸ್​ನಲ್ಲಿ ಪರಪ್ಪನ ಅಗ್ರಹಾರ ಸೇರಿದ್ದ ಹಾಲಶ್ರೀ ಬಿಡುಗಡೆ,​ ಕೇಸರಿ ಶಾಲು ಹಾಕಿ ಸ್ವಾಗತಿಸಿದ ಪ್ರಮೋದ್ ಮುತಾಲಿಕ್

ಈ ಹಿಂದೆ ಹಲವು ಬಾರಿ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಮೇಲಧಿಕಾರಿಗಳು ದಾಳಿ ನಡೆಸಿ ತಪಾಸಣೆ ಮಾಡಿದಾಗ ಕೈದಿಗಳ ಬಳಿ ಮೊಬೈಲ್‌ ಫೋನ್‌, ಗಾಂಜಾ ಮತ್ತಿತರ ವಸ್ತುಗಳು ಪತ್ತೆಯಾಗಿದ್ದವು. ಅದಾದ ಬಳಿಕ ಅಲ್ಲಿನ ನಿಯಮಗಳನ್ನು ಬಿಗಿ ಮಾಡಲಾಗಿತ್ತು. ಆದರೂ ಈಗ ಇದೇ ರೀತಿಯ ಘಟನೆಗಳು ಮರುಕಳಿಸುತ್ತಿವೆ. ಮನಪರಿವರ್ತನೆಗೆಂದು ಜೈಲಿಗೆ ಕಳುಹಿಸಿದ್ರೆ, ಅಲ್ಲಿಯೂ ರೌಡಿಗಳು, ಕೊಲೆಗಟುಕರು ಹೈಫೈ ಜೀವನ ನಡೆಸಿ ಯಾವುದೇ ಪರಿವರ್ತನೆ ಮಾಡಿಕೊಳ್ಳದೆ ಜೈಲಿನಿಂದ ಬಂದು ಅದೇ ಕೆಲಸಗಳನ್ನು ಮಾಡುತ್ತಾರೆ. ಹೀಗಾಗಿ ಆದಷ್ಟು ಬೇಗ ಸಂಬಂಧ ಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಬಿಗಿ ನಿಯಮಗಳನ್ನು ಮಾಡಬೇಕು ಎಂದು ಕೆಲವರು ಆಗ್ರಹಿಸಿದ್ದಾರೆ. ಇನ್ನು ಪೀಣ್ಯ ಠಾಣಾ ವ್ಯಾಪ್ತಿಯಲ್ಲಿ ಆನಂದ್ ಎಂಬುವವನನ್ನು ಕೊಲೆ ಉಮೇಶ್‌ ಜೈಲು ಸೇರಿದ್ದ. ಇಂಥವನು ಪರಪ್ಪನ ಅಗ್ರಹಾರ ಜೈಲಿನಲ್ಲೇ ಬೆಂಬಲಿಗರೊಂದಿಗೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ