AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮ್​ ಆದ್ಮಿ ಪಕ್ಷದ ಯುವ ಘಟಕ ಉಪಾಧ್ಯಕ್ಷನ ಹತ್ಯೆಗೆ ಯತ್ನ, ಅಮೃತಹಳ್ಳಿ ಠಾಣೆಯಲ್ಲಿ ದೂರು ದಾಖಲು

ಆಮ್​ ಆದ್ಮಿ ಪಕ್ಷದ ಯುವ ಘಟಕ ಉಪಾಧ್ಯಕ್ಷ ಗಿರೀಶ್​ ಕುಮಾರ್ ತಮ್ಮ ಮೇಲೆ ಹತ್ಯೆಗೆ ಯತ್ನ ನಡೆದಿದೆ ಎಂದು ಬೆಂಗಳೂರಿನ ಅಮೃತಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೆಲ ಕಿಡಿಗೇಡಿಗಳ ಗುಂಪು ತನ್ನ ಮೇಲೆ ಹಲ್ಲೆ ನಡೆಸಲು ಮನೆ ಮುಂದೆ ಕಾಯುತ್ತಿದ್ದರು. ಹಾಗೂ ನನ್ನನ್ನು ಫಾಲೋ ಮಾಡಿ ಮನೆ ಬಳಿ ಬಂದಿದ್ದರು ಎಂದು ಗಿರೀಶ್ ಆತಂಕ ಹೊರ ಹಾಕಿದ್ದಾರೆ. ಎಎಪಿ ಯುವ ಘಟಕದ ಗಿರೀಶ್ ಕುಮಾರ್ ಪ್ರಭಾವಿ ವ್ಯಕ್ತಿಗಳು, ರಾಜಕಾರಣಿಗಳ ವಿರುದ್ಧ ದೂರು ನೀಡಿದ್ದಾರೆ. ಅನೇಕ ಅಕ್ರಮಗಳನ್ನು ಬಯಲು ಮಾಡಿದ್ದಾರೆ.

ಆಮ್​ ಆದ್ಮಿ ಪಕ್ಷದ ಯುವ ಘಟಕ ಉಪಾಧ್ಯಕ್ಷನ ಹತ್ಯೆಗೆ ಯತ್ನ, ಅಮೃತಹಳ್ಳಿ ಠಾಣೆಯಲ್ಲಿ ದೂರು ದಾಖಲು
ಎಎಪಿ ಯುವ ಘಟಕದ ಗಿರೀಶ್ ಕುಮಾರ್ ಮನೆ ಬಳಿ ಹಲ್ಲೆಗೆ ಕಾಯುತ್ತಿರುವ ಕಿಡಿಗೇಡಿಗಳು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Aug 29, 2023 | 7:17 AM

Share

ಬೆಂಗಳೂರು, ಆ.29: ಆಮ್​ ಆದ್ಮಿ ಪಕ್ಷದ(Aam Aadmi Party) ಯುವ ಘಟಕ ಉಪಾಧ್ಯಕ್ಷ ಗಿರೀಶ್​ ಕುಮಾರ್ ಹತ್ಯೆಗೆ ಯತ್ನ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ಬಗ್ಗೆ ಬೆಂಗಳೂರಿನ ಅಮೃತಹಳ್ಳಿ ಠಾಣೆಯಲ್ಲಿ(Amruthahalli Police Station) ದೂರು ದಾಖಲಾಗಿದೆ. ಎಎಪಿ ಯುವ ಘಟಕದ ಗಿರೀಶ್ ಕುಮಾರ್ ಪ್ರಭಾವಿ ವ್ಯಕ್ತಿಗಳು, ರಾಜಕಾರಣಿಗಳ ವಿರುದ್ಧ ದೂರು ನೀಡಿದ್ದಾರೆ. ಅನೇಕ ಅಕ್ರಮಗಳನ್ನು ಬಯಲು ಮಾಡಿದ್ದಾರೆ. ಹೀಗಾಗಿ ಅವರಿಗೆ ಜೀವ ಬೆದರಿಕೆ ಕರೆಗಳು ಹಾಗೂ ಗುಂಪು ಗುಂಪಾಗಿ ಕಿಡಿಗೇಡಿಗಳು ಹತ್ಯೆಗೆ ಸಂಚು ರೂಪಿಸುತ್ತಿದ್ದಾರೆ ಎಂದು ಗಿರೀಶ್ ತಿಳಿಸಿದ್ದಾರೆ.

ಆ.27ರ ತಡರಾತ್ರಿ 10ಕ್ಕೂ ಹೆಚ್ಚು ಅಪರಿಚಿತರು ಮನೆ ಬಳಿ ಬಂದಿದ್ದರು. ಮೊದಲು ಇಬ್ಬರು ಬೈಕ್​ನಲ್ಲಿ ನನ್ನನ್ನು ಫಾಲೋ ಮಾಡಿದ್ದರು. ನಂತರ ಮಿನಿ ಬಸ್​​ನಲ್ಲಿ 13ಕ್ಕೂ ಹೆಚ್ಚು ಜನ ಬಂದು ಕಾಯುತ್ತಿದ್ದರು. ಕೂಡಲೇ ಅಮೃತಹಳ್ಳಿ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದೆ ಎಂದು ಎಎಪಿ ಯುವ ಘಟಕದ ಉಪಾಧ್ಯಕ್ಷ ಗಿರೀಶ್ ಮಾಹಿತಿ ನೀಡಿದ್ದಾರೆ.

ಸೆಟ್​​ ಬ್ಯಾಕ್​​ ಬಿಡದೆ ಖಾಸಗಿ ಅಪಾರ್ಟ್​ಮೆಂಟ್​​​​ ನಿರ್ಮಾಣ ಮಾಡಿದ್ದಾರೆಂದು ಬಿಬಿಎಂಪಿ ಅಧಿಕಾರಿಗಳಿಗೆ ಎಎಪಿ ಯುವ ಘಟಕದ ಉಪಾಧ್ಯಕ್ಷ ಗಿರೀಶ್ ದೂರು ನೀಡಿದ್ದರು. ಬಿಬಿಎಂಪಿ ಅಧಿಕಾರಿಗಳು ದೂರು ಪಡೆದು ಪರಿಶೀಲನೆಗೆ ಕ್ರಮ ಕೈಗೊಳ್ಳುತ್ತಿದ್ದಂತೆಯೇ ಹಲ್ಲೆಗೆ ಸಂಚು ರೂಪಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಇನ್ನು ಬೆಂಗಳೂರಿನ ಹಲವೆಡೆ ಪಬ್​​, ಬಾರ್​ಗಳ ವಿರುದ್ಧವೂ ಗಿರೀಶ್ ದೂರು ನೀಡಿದ್ದರು. ಕಳೆದ ಎರಡು ದಿನಗಳ ಹಿಂದಷ್ಟೇ ನಗರದಾದ್ಯಂತ ಪಬ್ ಬಾರ್​ಗಳ ಮೇಲೆ ದಾಳಿ ಆಗಿದಕ್ಕೆ ತಾನು ದೂರು ನೀಡಿದ್ದೇ ಕಾರಣ ಎಂದು ಗಿರೀಶ್ ಹೇಳಿಕೊಂಡಿದ್ದರು. ಹೀಗಾಗಿ ದಾಳಿಯಾಗ್ತಿದ್ದಂತೆ ಗಿರೀಶ್ ಕುಮಾರ್​ಗೆ ಜೀವಬೆದರಿಕೆ ಕರೆಗಳು ಸಹ ಬಂದಿದ್ದವು. ಅಪರಿಚಿತರು ಹಿಂಬಾಲಿಸುತ್ತಾರೆ. ತಡರಾತ್ರಿ ಮನೆ ಬಳಿ ಗುಂಪುಗುಂಪಾಗಿ ಬಂದು ಭಯಪಡಿಸ್ತಿದ್ದಾರೆಂದು ಗಿರೀಶ್ ಅಮೃತಹಳ್ಳಿ ಪೊಲೀಸ್ ಠಾಣೆಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಲಾಯ ತಸ್ಮೈ ನಮಃ ATM ಕಾರ್ಡ್ ಗಾತ್ರದಲ್ಲಿ Wedding ಕಾರ್ಡ್!

ಇನ್ನು ಮತ್ತೊಂದೆಡೆ ಸರ್ಕಾರಿ ಅಧಿಕಾರಿಗಳು, ರಾಜಕಾರಣಿಗಳು, ಉದ್ಯಮಿಗಳ ವಿರುದ್ಧ ಕೂಡ ಗಿರೀಶ್ ದೂರು ದಾಖಲಿಸಿದ್ದರು. ಬಿಬಿಎಂಪಿ, ಬಿಡಿಎ, ಲೋಕಾಯುಕ್ತ, ವಿವಿಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಒಟ್ಟು 483 FIR ದಾಖಲಿಸಿರೋದಾಗಿ ಗಿರೀಶ್ ಕುಮಾರ್ ಹೇಳಿಕೊಂಡಿದ್ದಾರೆ. ಬಿಬಿಎಂಪಿ, ಬಿಡಿಎ, ಪೊಲೀಸರು ಇದರ ಬಗ್ಗೆ ಕ್ರಮಕ್ಕೆ ಮುಂದಾಗಿದ್ದಾರೆ. ನೀಡಿರುವ ದೂರಿನ ಪೈಕಿ ಯಾವುದನ್ನು ಹಿಂಪಡೆದಿಲ್ಲ, ಎಲ್ಲವೂ ತನಿಖೆ ಹಂತದಲ್ಲಿದೆ. ಹೀಗಾಗಿ ನನಗೆ ಅಪರಿಚಿತರಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಮನೆ ಬಳಿ ಗುಂಪುಗುಂಪಾಗಿ ಬಂದು ಭಯಪಡಿಸ್ತಿದ್ದಾರೆಂದು ದೂರು ನೀಡಿದ್ದಾರೆ. ಗಿರೀಶ್​​ ದೂರಿನ ಮೇರೆಗೆ ಪೊಲೀಸರು ಎನ್​ಸಿಆರ್​ ದಾಖಲಿಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:12 am, Tue, 29 August 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?