AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಬೈಕ್ ಡಿಕ್ಕಿ ಹೊಡೆದಿದ್ದಕ್ಕೆ ಕೆಳಗೆ ಬಿತ್ತು ಹೆಣ!; ಸಿನಿಮೀಯವಾಗಿ ಬಯಲಾಯ್ತು ಬೆಂಗಳೂರು ಯುವತಿಯ ಕೊಲೆ ರಹಸ್ಯ

Shocking News: ಬೈಕ್ ವೇಗವಾಗಿ ಬಂದು ಸ್ಪೀಡ್ ಬ್ರೇಕರ್​ಗೆ ಡಿಕ್ಕಿ ಹೊಡೆದಿದ್ದರಿಂದ ಆ ಬೈಕ್​ನಲ್ಲಿ ಯುವತಿಯ ಶವ ಇರುವುದು ಬೆಳಕಿಗೆ ಬಂದಿದೆ. ಹೀಗೆ ತಾವೇ ಮಾಡಿದ ಪ್ಲಾನ್​ನಲ್ಲಿ ತಾವೇ ಸಿಕ್ಕಿಹಾಕಿಕೊಂಡ ಅಪರಾಧಿಗಳು ಇದೀಗ ಜೈಲು ಕಂಬಿ ಎಣಿಸುತ್ತಿದ್ದಾರೆ.

Murder: ಬೈಕ್ ಡಿಕ್ಕಿ ಹೊಡೆದಿದ್ದಕ್ಕೆ ಕೆಳಗೆ ಬಿತ್ತು ಹೆಣ!; ಸಿನಿಮೀಯವಾಗಿ ಬಯಲಾಯ್ತು ಬೆಂಗಳೂರು ಯುವತಿಯ ಕೊಲೆ ರಹಸ್ಯ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:May 11, 2022 | 5:38 PM

ಬೆಂಗಳೂರು: ಕೊಲೆಗಾರ ಎಷ್ಟೇ ಬುದ್ಧಿವಂತನಾದರೂ ಪೊಲೀಸರ ಕೈಯಿಂದ ಸುಲಭವಾಗಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಯುವತಿಯನ್ನು ಕೊಂದು, ಆಕೆಯ ಶವವನ್ನು (Dead Body) ಯಾರಿಗೂ ಗೊತ್ತಾಗದಂತೆ ದೂರ ಬಿಸಾಡಬೇಕೆಂದು ಪ್ಲಾನ್ ಮಾಡಿಕೊಂಡಿದ್ದ ದಂಪತಿ ಸಿನಿಮೀಯ ರೀತಿಯಲ್ಲಿ ಸಿಕ್ಕಿಬಿದ್ದಿರುವ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ. ಬೆಂಗಳೂರಿನಿಂದ (Bengaluru Crime) 60 ಕಿಮೀ ದೂರದ ಚನ್ನಪಟ್ಟಣದಲ್ಲಿ 21 ವರ್ಷದ ಯುವತಿಯ ಶವವನ್ನು ವಿಲೇವಾರಿ ಮಾಡುವ ದಂಪತಿಗಳ ಯೋಜನೆ ವಿಫಲವಾಗಿದ್ದು, ಆಕೆಯ ಶವದೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅವರಿಬ್ಬರು ಜಿಲ್ಲಾಧಿಕಾರಿಗಳ ಎದುರೇ ಅಪಘಾತಕ್ಕೀಡಾಗಿದ್ದಾರೆ. ಬೈಕ್ ವೇಗವಾಗಿ ಬಂದು ಸ್ಪೀಡ್ ಬ್ರೇಕರ್​ಗೆ ಡಿಕ್ಕಿ ಹೊಡೆದಿದ್ದರಿಂದ ಆ ಬೈಕ್​ನಲ್ಲಿ ಯುವತಿಯ ಶವ ಇರುವುದು ಬೆಳಕಿಗೆ ಬಂದಿದೆ. ಹೀಗೆ ತಾವೇ ಮಾಡಿದ ಪ್ಲಾನ್​ನಲ್ಲಿ ತಾವೇ ಸಿಕ್ಕಿಹಾಕಿಕೊಂಡ ಅಪರಾಧಿಗಳು ಇದೀಗ ಜೈಲು ಕಂಬಿ ಎಣಿಸುತ್ತಿದ್ದಾರೆ.

ಪೊಲೀಸರ ಪ್ರಕಾರ, ಬೆಂಗಳೂರಿನ ಆರ್ ಆರ್ ನಗರದ ನಿವಾಸಿಯಾದ 21 ವರ್ಷದ ಸೌಮ್ಯಾ ತಮ್ಮ ನೆರೆಹೊರೆಯ ದಂಪತಿಗಳಾದ ರಘು (30) ಮತ್ತು ದುರ್ಗಾ (28) ಅವರಿಂದ ಸಾಲ ಪಡೆದಿದ್ದರು. ಆ ಹಣಕ್ಕಾಗಿ ಜಗಳವಾಡಿದ ನಂತರ ರಘು ಮತ್ತು ದುರ್ಗಾ ಸೇರಿ ಸೌಮ್ಯಾಳನ್ನು ಕೊಲೆ ಮಾಡಿದ್ದರು.

ಈ ಹಿಂದೆ ಕೂಡ ಸೌಮ್ಯ ಮತ್ತು ರಘು ಜಗಳ ಮಾಡಿಕೊಂಡಿದ್ದರು ಎನ್ನಲಾಗಿದೆ. ಸೋಮವಾರ ರಘು ಆಕೆಗೆ ಕಪಾಳಮೋಕ್ಷ ಮಾಡಿದ್ದು, ಈ ವೇಳೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಸೌಮ್ಯಾ ಸಾವನ್ನಪ್ಪಿದ್ದರಿಂದ ಭಯಭೀತರಾದ ದಂಪತಿ ಶವವನ್ನು ಸುಮಾರು 8 ಗಂಟೆಗಳ ಕಾಲ ತಮ್ಮ ಮನೆಯೊಳಗೆ ಇಟ್ಟುಕೊಂಡಿದ್ದರು. ನಂತರ ಆ ಶವವನ್ನು ದೂರ ತೆಗೆದುಕೊಂಡು ಹೋಗಿ ಸುಡಲು ನಿರ್ಧರಿಸಿದ್ದರು. ನಂತರ ದಂಪತಿ ತಮ್ಮ ಸ್ನೇಹಿತರಾದ ನಾಗರಾಜ್ (18) ಮತ್ತು ವಿನೋದ್ (19) ಅವರ ಸಹಾಯವನ್ನು ಕೋರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. (Source)

ಇದನ್ನೂ ಓದಿ
Image
Love Story: ಕತ್ತಲೆಯಲ್ಲಿ ಪ್ರೇಯಸಿಯನ್ನು ಭೇಟಿಯಾಗಲು ಇಡೀ ಗ್ರಾಮದ ಕರೆಂಟ್ ತೆಗೆದ ಭೂಪ; ಕೋಪಗೊಂಡ ಜನರು ಮಾಡಿದ್ದೇನು?
Image
ಸುಂಕದಕಟ್ಟೆಯಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ; ಬೇರೆ ಬೇರೆ ಯುವತಿಯರಿಗೂ ಪ್ರೀತಿಸಲು ಪೀಡಿಸುತ್ತಿದ್ದ ಆರೋಪಿ ನಾಗೇಶ್
Image
Murder: ಗಂಡನ ಉಗುರಿನಲ್ಲಿದ್ದ ರಕ್ತದ ಕಲೆಯಿಂದ ಬಯಲಾಯ್ತು ಹೆಂಡತಿ ಕೊಲೆಯ ರಹಸ್ಯ!
Image
Shocking News: ಬೆಳ್ಳಿ ಗೆಜ್ಜೆ ಆಸೆಗೆ 4 ವರ್ಷದ ಬಾಲಕಿಯನ್ನು ಕೊಂದು, ಮನೆ ಹಿಂದೆ ಹೂತಿಟ್ಟ ಮಹಿಳೆ!

ಸೋಮವಾರ ತಡರಾತ್ರಿ ಎರಡು ಬೈಕ್‌ಗಳಲ್ಲಿ ಚನ್ನಪಟ್ಟಣಕ್ಕೆ ಅವರು ಹೊರಟಿದ್ದರು. ಒಂದರಲ್ಲಿ ರಘು ಮತ್ತು ದುರ್ಗಾ, ಇನ್ನೊಂದರಲ್ಲಿ ವಿನೋದ್ ಮತ್ತು ನಾಗರಾಜ್ ಸೌಮ್ಯಳ ಮೃತದೇಹವನ್ನು ಇಟ್ಟುಕೊಂಡು ಹೊರಟಿದ್ದರು. ಬೆಂಗಳೂರಿನಿಂದ 40 ಕಿ.ಮೀ ಹೋಗಿ, ರಾಮನಗರ ಪಟ್ಟಣದ ಪೊಲೀಸ್‌ ಉಪ ಆಯುಕ್ತರ ಕಚೇರಿ ಎದುರು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಆಗಮಿಸಿದ ವಿನೋದ್‌ ಸ್ಪೀಡ್‌ ಬ್ರೇಕರ್​ಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ವಿನೋದ್, ನಾಗರಾಜ್ ಮತ್ತು ಸೌಮ್ಯ ಅವರ ಶವ ರಸ್ತೆ ಮೇಲೆ ಬಿದ್ದಿತು. ಆ ರಸ್ತೆಯಲ್ಲಿ ಓಡಾಡುತ್ತಿದ್ದ ಜನರು ಮತ್ತು ಗಸ್ತಿನಲ್ಲಿದ್ದ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸುತ್ತಿದ್ದಂತೆ ಮೂವರನ್ನೂ ರಾಮನಗರದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಪಘಾತದ ಬಗ್ಗೆ ತಿಳಿಯದ ರಘು ಮತ್ತು ದುರ್ಗಾ ಮುಂದೆ ಹೋಗಿ ಚನ್ನಪಟ್ಟಣ ಬಳಿ ಕಾದು ಕುಳಿತಿದ್ದರು.

ಆಸ್ಪತ್ರೆಗೆ ಸೇರಿಸಿದ ನಂತರ ಡ್ಯೂಟಿ ಡಾಕ್ಟರ್ ಸೌಮ್ಯಳ ದೇಹವನ್ನು ಪರೀಕ್ಷಿಸಿ 8 ಗಂಟೆಗಳ ಹಿಂದೆಯೇ ಅವಳು ಸತ್ತಿದ್ದಾಳೆ ಎಂದು ಹೇಳಿದಾಗ ಪೊಲೀಸರಿಗೆ ಶಾಕ್ ಆಯಿತು. ಪೊಲೀಸರು ವಿನೋದ್ ಮತ್ತು ನಾಗರಾಜನನ್ನು ಹಿಡಿದು, ರಘುಗೆ ಕರೆ ಮಾಡಿದರು. ಅವರು ಇರುವ ಜಾಗವನ್ನು ತಿಳಿದುಕೊಂಡು ಅವರಿಬ್ಬರನ್ನೂ ಬಂಧಿಸಿದರು.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:36 pm, Wed, 11 May 22

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ