AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ತಬ್ರೇಜ್ ಕೊಲೆ ಪ್ರಕರಣ: ಸ್ಪೋಟಕ ಮಾಹಿತಿ ಬಹಿರಂಗ

ಅಕ್ರಮ ಸಂಬಂಧದ ವಿಚಾರವಾಗಿ ಬೆಂಗಳೂರು ನಗರದ ತಿಲಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಬ್ರೇಜ್ ಎಂಬಾತನನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಆರೋಪಿಯನ್ನು ಬಂಧಿಸಿದ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಸ್ಪೋಟಕ ಮಾಹಿತಿಯೊಂದು ಹೊರಬಿದ್ದಿದೆ.

ಪತ್ನಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ತಬ್ರೇಜ್ ಕೊಲೆ ಪ್ರಕರಣ: ಸ್ಪೋಟಕ ಮಾಹಿತಿ ಬಹಿರಂಗ
ಕೊಲೆ ಆರೋಪಿ ಶಬ್ಬೀರ್ ತನ್ನ ಪತ್ನಿಯೊಂದಿಗೆ (ಎಡಚಿತ್ರ) ಮತ್ತು ಕೊಲೆಯಾದ ತಬ್ರೇಜ್ (ಬಲಚಿತ್ರ)
Jagadisha B
| Edited By: |

Updated on: Nov 18, 2023 | 9:22 AM

Share

ಬೆಂಗಳೂರು, ನ.18: ತನ್ನ ಪತ್ನಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ನಗರದ (Bengaluru) ತಿಲಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ತಬ್ರೇಜ್​ ಕೊಲೆ ಪ್ರಕರಣ ಸಂಬಂಧ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಆರೋಪಿ ಶಬ್ಬೀರ್​ನನ್ನು ವಿಚಾರಣೆ ನಡೆಸುತ್ತಿರುವ ಪೊಲೀಸರಿಗೆ, ಆರೋಪಿಯು ಆ ದಿನ ಒಂದಲ್ಲ, ಎರಡು ಕೊಲೆಗಳನ್ನು ಮಾಡಲು ಸ್ಕೆಚ್ ಹಾಕಿರುವುದು ತಿಳಿದುಬಂದಿದೆ. ಪ್ರಕರಣದ ಇನ್​ಸೈಡ್ ಕಹಾನಿ ಇಲ್ಲಿದೆ.

ವುಡ್ ವರ್ಕ್​ನ ಸಬ್ ಕಾಂಟ್ರಾಕ್ಟರ್ ಆಗಿದ್ದ ತಬ್ರೇಜ್ ಕೊಲೆ ನಂತರ ಕೈಯಲ್ಲಿ ರಕ್ತ ಸಿಕ್ತ ಡ್ರ್ಯಾಗರ್ ಹಿಡಿದು ನಡುರಸ್ತೆಯಲ್ಲಿ ಶಬ್ಬೀರ್ ಓಡಾಡುತ್ತಿರುವ ದೃಶ್ಯವನ್ನು ಸಾರ್ವಜನಿಕರು ಸೆರೆ ಹಿಡಿದಿದ್ದಾರೆ. ಇದರ ವಿಡಿಯೋ ಟಿವಿ9ಗೆ ಲಭ್ಯವಾಗಿದೆ. ನಿಜಕ್ಕೂ ಆ ದಿನ ನಡೆದಿದ್ದೇನು ಗೊತ್ತಾ?

ಹತ್ಯೆಯ ಹಿಂದಿತ್ತು ಮೂರು ತಿಂಗಳ ತಂತ್ರ

ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತಿದ್ದ ಶಬ್ಬೀರ್, ದುಬೈನಲ್ಲಿ ಕೆಲಸ ಮಾಡಿ ವಾಪಾಸ್ ಆಗಿ ಕೆಂಗೇರಿಯಲ್ಲಿ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಉಳಿದುಕೊಂಡಿದ್ದ. ಆದರೆ, ಕಳೆದ ಒಂಬತ್ತು ತಿಂಗಳ ಹಿಂದೆ ಶಬ್ಬೀರ್​ಗೆ ತನ್ನ ಪತ್ನಿ ಹಾಗೂ ಮೂರು ಮಕ್ಕಳ ತಂದೆಯಾಗಿರುವ ತಬ್ರೇಜ್ ನಡುವೆ ಅಕ್ರಮ ಸಂಬಂಧ ಇರುವುದು ತಿಳಿದುಬಂದಿದೆ. ಇದೇ ವೇಳೆ ಪತ್ನಿ ಶ್ರೀರಾಮ್​ಪುರದಲ್ಲಿರುವ ತವರು ಮನೆ ಸೇರಿದ್ದಳು.

ಇದನ್ನೂ ಓದಿ: ಓರ್ವಳ ಮೇಲಿನ ದ್ವೇಷಕ್ಕೆ ನಾಲ್ವರನ್ನ ಹತ್ಯೆಗೈದ ಹಂತಕ: ಕೊಲೆ ಹಿಂದಿನ ಕಾರಣ ಬಿಚ್ಚಿಟ್ಟ ಉಡುಪಿ ಎಸ್​ಪಿ

ಆದರೆ, ಅಕ್ರಮ ಸಂಬಂಧ ವಿಚಾರವಾಗಿ ತಬ್ರೇಜ್ ಹಾಗೂ ಶಬ್ಬೀರ್ ನಡುವೆ ಜಗಳ ನಡೆದು ರಾಜಿಪಂಚಾಯಿತಿ ಕೂಡ ನಡೆದಿತ್ತು. ಆದರೂ ಅಕ್ರಮ ಸಂಬಂಧ ಮುಂದುವರಿದಿತ್ತು. ಹೀಗಾಗಿ ಮೂರು ತಿಂಗಳ ಹಿಂದೆಯೇ ಕೆಂಗೇರಿಯಲ್ಲಿ ಡ್ರ್ಯಾಗರ್ ಅನ್ನು ಶಬ್ಬೀರ್ ರೆಡಿ ಮಾಡಿದ್ದನು. ಇದನ್ನು ತಬ್ರೇಜ್ ಹತ್ಯೆ ಮಾಡಲೆಂದೆ ಇಟ್ಟುಕೊಂಡಿದ್ದನು. ತನ್ನ ಪತ್ನಿ ದೂರಾದರೂ ಸಂಬಂಧ ಹೊಂದುದವನ ಮೇಲಿದ್ದ (ತಬ್ರೇಜ್) ಸೇಡು, ಅನುಮಾನ ಕಡಿಮೆಯಾಗಿರಲಿಲ್ಲ. ಅದಕ್ಕಾಗೆ ತಬ್ರೇಜ್​ ಹತ್ಯೆಯ ಸಂಚು ರೂಪಿಸಿದ್ದ.

ತಬ್ರೇಜ್ ಹತ್ಯೆ ನಂತರ ಪತ್ನಿ ಕೊಲೆಗೆ ಸ್ಕೆಚ್

ಅಂದು ಆರೋಪಿ ಶಬ್ಬೀರ್ ಒಂದಲ್ಲ, ಎರಡು ಕೊಲೆ ಮಾಡಲು ಸ್ಕೆಚ್ ಹಾಕಿದ್ದನು ಎಂಬ ವಿಚಾರ ತನಿಖೆಯಿಂದ ತಿಳಿದುಬಂದಿದೆ. ಮೊದಲು ತಬ್ರೇಜ್​ನನ್ನು ಹತ್ಯೆ ಮಾಡಿ ಪತ್ನಿ ಕೊಲೆಗೆ ಸಂಚು ರೂಪಿಸಿದ್ದನು. ಅದರಂತೆ, ಊಟಕ್ಕೆಂದು ತನ್ನ ಗೆಳೆಯನ್ನು ಬಿಎಚ್​ಎಲ್ ಕಸ್ಟಮರ್ ಕಚೇರಿ ಬಳಿ ಕರೆದೊಯ್ದು ಏಕಾಏಕಿಯಾಗಿ ತಬ್ರೇಜ್ ಮೇಲೆ ಡ್ರ್ಯಾಗರ್​ನಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾನೆ. ಇದನ್ನು ಕಂಡ ಶಬ್ಬೀರ್ ಗೆಳೆಯ ಬೈಕ್ ಬಿಟ್ಟು ಪರಾರಿಯಾಗಿದ್ದನು.

ಇತ್ತ, ತಬ್ರೇಜ್ ಕೊಲೆ ನಂತರ ಡ್ರ್ಯಾಗರ್ ಹಿಡಿದುಕೊಂಡು ಪತ್ನಿಯನ್ನು ಕೊಲೆ ಮಾಡಲು ಗೆಳೆಯ ಬಿಟ್ಟು ಹೋದ ಬೈಕ್​ನಲ್ಲೇ ಶ್ರೀರಾಮ್ ಪುರಕ್ಕೆ ತೆರಳಿದ್ದನು. ಮನೆ ಬಾಗಿಲು ತಟ್ಟಿದ್ದಾಗ ಪತ್ನಿ ಅಲ್ಲಿ ಇರಲಿಲ್ಲ. ಈ ವಿಚಾರ ತಿಳಿದ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಡ್ರ್ಯಾಗರ್ ಸಹಿತ ಶಬ್ಬೀರ್​ನನ್ನು ಬಂಧಿಸಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ