ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ
ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ಕೋಣನಕುಂಟೆ ಠಾಣಾ ವ್ಯಾಪ್ತಿಯ ಎಕೆ ಕಾಲೊನಿಯಲ್ಲಿ ನಡೆದಿದೆ. ಮೆಹಬೂಬ್ (19) ಕೊಲೆಯಾದವರು. ಲಲಿತ್, ಮಣಿಕಂಠ ನಡುವೆ ಹಣದ ವಿಚಾರದಲ್ಲಿ ಗಲಾಟೆಯಾಗಿತ್ತು. ಲಲಿತ್ ಗುಂಪಿನಲ್ಲಿದ್ದ ಮೆಹಬೂಬ್ ಮೇಲೆ ಆರೋಪಿಗಳಾದ ಮಣಿಕಂಠ, ಪವನ್, ಕಿರಣ್, ಕಾರ್ತಿಕ್ ಸೇರಿದಂತೆ 13 ಮಂದಿ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳಿಗಾಗಿ ಕೋಣನಕುಂಟೆ ಠಾಣೆ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.
ಎಸಿಬಿ ಬಲೆಗೆ ರೆವಿನ್ಯೂ ಇನ್ಸ್ಪೆಕ್ಟರ್
ಬಿಬಿಎಂಪಿ 191ನೇ ವಾರ್ಡ್ ರೆವಿನ್ಯೂ ಇನ್ಸ್ಪೆಕ್ಟರ್ ಗಿರೀಶ್ 3 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಫ್ಲ್ಯಾಟ್ಗೆ ಖಾತೆ ಮಾಡಿಕೊಡಲು ಇವರು ಲಂಚ ಕೇಳಿದ್ದರು ಎನ್ನಲಾಗಿದೆ. ಆರ್ಐ ಗಿರೀಶ್ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಇದನ್ನೂ ಓದಿ: Crime News: ಬಾಡಿಗೆ ಮನೆ ನೋಡುವ ನೆಪದಲ್ಲಿ ಮಚ್ಚು ತೋರಿಸಿ ಮಹಿಳೆಯ ಕತ್ತಿನಲ್ಲಿದ್ದ ಸರಗಳವು
ಇದನ್ನೂ ಓದಿ: Crime News: ಬೆಂಗಳೂರಿನಲ್ಲಿ ಕಳವಾದ ಕಾರು ಫಾಸ್ಟ್ಟ್ಯಾಗ್ ಸಹಾಯದಿಂದ ಹುಬ್ಬಳ್ಳಿಯಲ್ಲಿ ಪತ್ತೆ!