AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: ಮನೆಯೊಂದರಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆ

ಅಪರಿಚಿತನ ಪುಂಡಾಟಕ್ಕೆ ಕುಟುಂಬ ಸದಸ್ಯರು ಹೈರಾಣಾದ ಘಟನೆಯೊಂದು ಬೆಂಗಳೂರಿನ ಹೆಬ್ಬಾಳ ಸರ್ಕಲ್​ನಲ್ಲಿ ತಡರಾತ್ರಿ ನಡೆದಿದೆ. ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಅಪರಿಚಿತನೊಬ್ಬ ಅಸಭ್ಯವಾಗಿ ವರ್ತನೆ ಮಾಡಿದ್ದಾನೆ.

Bengaluru Crime: ಮನೆಯೊಂದರಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 11, 2021 | 11:05 PM

Share

ಬೆಂಗಳೂರು: ಮನೆಯೊಂದರಲ್ಲಿ ಕೊಲೆಯಾದ‌ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆ ಆದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಗ್ರಾಮದ ಸೂರ್ಯಸಿಟಿಯ ರಾಮಯ್ಯ ಬಡಾವಣೆಯಲ್ಲಿ ನಡೆದಿದೆ. ತವರು ಮನೆಯಲ್ಲಿ ಕಾವ್ಯ, ಮತ್ತೊಬ್ಬ ವ್ಯಕ್ತಿಯ ಶವ ಪತ್ತೆ ಆಗಿದೆ. ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೆಂಗಳೂರು: ರಾತ್ರಿ ಅಪರಿಚತನ ಪುಂಡಾಟ; ಮನೆಯವರಿಂದ ದೂರು ಅಪರಿಚಿತನ ಪುಂಡಾಟಕ್ಕೆ ಕುಟುಂಬ ಸದಸ್ಯರು ಹೈರಾಣಾದ ಘಟನೆಯೊಂದು ಬೆಂಗಳೂರಿನ ಹೆಬ್ಬಾಳ ಸರ್ಕಲ್​ನಲ್ಲಿ ತಡರಾತ್ರಿ ನಡೆದಿದೆ. ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಅಪರಿಚಿತನೊಬ್ಬ ಅಸಭ್ಯವಾಗಿ ವರ್ತನೆ ಮಾಡಿದ್ದಾನೆ. ಅಪರಿಚಿತನ ಹುಚ್ಚಾಟಕ್ಕೆ ದೀಪಾ ಶ್ರೀಕುಮಾರ್ ಎಂಬವರು ಕಂಗಾಲಾಗಿದ್ದಾರೆ. ದೀಪಾ ಶ್ರೀಕುಮಾರ್ ಕುಟುಂಬದವರು ಸಂಬಂಧಿಕರ ಮನೆಗೆ ತೆರಳಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಗೆ ತೆರಳಿದ್ದರು. ರಾತ್ರಿ 2ರ ಸುಮಾರಿಗೆ ಪುತ್ರಿ, ಪುತ್ರನ ಜತೆ ಹಿಂದಿರುಗುತ್ತಿದ್ದರು. ಈ ವೇಳೆ, ಹೆಬ್ಬಾಳದ ಬಳಿ ದೀಪಾ ಕಾರಿನ ಟೈರ್​ ಪಂಕ್ಚರ್ ಆಗಿತ್ತು. ಟೈರ್​ ಬದಲಿಸುವಾಗ ಪಕ್ಕದಲ್ಲಿ ಅಪರಿಚಿತ ಒಬ್ಬ ಬಂದು ನಿಂತಿದ್ದ. DL 10, CG 5396 ಸಂಖ್ಯೆ ಕಾರಿನಲ್ಲಿ ಬಂದಿದ್ದ ಅಪರಿಚಿತ ದೀಪಾ ಶ್ರೀಕುಮಾರ್​ ಪುತ್ರಿಗೆ ಅಸಭ್ಯವಾಗಿ ಸನ್ನೆ ಮಾಡಿದ್ದ ಎಂದು ಹೇಳಲಾಗಿದೆ.

ಆದರೆ, ಅದನ್ನು ಕೇರ್​ ಮಾಡದೆ ಬೈದು ಕಾರಿನಲ್ಲಿ ದೀಪಾ ಕುಟುಂಬ ತೆರಳಿದ್ದರು. ಅದನ್ನೂ ಮೀರಿ ಗೊರಗುಂಟೆಪಾಳ್ಯದವರೆಗೂ ಹಿಂಬಾಲಿಸಿ ಬಂದು ಆತ ಹುಚ್ಚಾಟ ತೋರಿದ್ದ. ಈ ವೇಳೆ, ದೀಪಾ ಶ್ರೀಕುಮಾರ್​ ಕುಟುಂಬದವರು ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದರು. ಗೊರಗುಂಟೆಪಾಳ್ಯ ತಲುಪುವಷ್ಟರಲ್ಲಿ ಹೊಯ್ಸಳ ಸಿಬ್ಬಂದಿ ಬಂದಿದ್ದರು. ಹೊಯ್ಸಳ ಪೊಲೀಸ್​ ಸಿಬ್ಬಂದಿ ಕಂಡು ಪುಂಡ ಪರಾರಿಯಾಗಿದ್ದ. ಹೆದರಿದ ದೀಪಾ ಶ್ರೀಕುಮಾರ್​, ಮಕ್ಕಳು ಠಾಣೆಯಲ್ಲಿ ಆಶ್ರಯ ಪಡೆದಿದ್ದರು. ಬೆಳಗಾಗುವರೆಗೆ ದೀಪಾ, ಮಕ್ಕಳು RMC ಯಾರ್ಡ್ ಠಾಣೆಯಲ್ಲಿದ್ದರು. ಇದೀಗ ಘಟನೆ ಬಗ್ಗೆ ಅಮೃತಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಚಾಮರಾಜನಗರ: ಶಾರ್ಟ್​ಸರ್ಕ್ಯೂಟ್​ನಿಂದ 5 ಎಕರೆ ಕಬ್ಬು, 15 ತೆಂಗಿನ ಮರ ಭಸ್ಮ ಶಾರ್ಟ್​ಸರ್ಕ್ಯೂಟ್​ನಿಂದ 5 ಎಕರೆ ಕಬ್ಬು, 15 ತೆಂಗಿನ ಮರ ಭಸ್ಮವಾದ ದುರ್ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಬೂದಿತಿಟ್ಟು ಗ್ರಾಮದ ಬಳಿ ನಡೆದಿದೆ. ಇಲ್ಲಿ ಕಬ್ಬು ಬೆಳೆ ಸಂಪೂರ್ಣ ಬೆಂಕಿಗಾಹುತಿ ಆಗಿದೆ. ರೈತರಾದ ಮರಿಸ್ವಾಮಿ, ಬಸವಣ್ಣ, ಪುಟ್ಟಸ್ವಾಮಿಗೆ ಸೇರಿದ ಕಬ್ಬು ಬೆಳೆ ನಾಶವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸೆಸ್ಕಾಂ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ನಗರದ ಬಸ್ ನಿಲ್ದಾಣದಲ್ಲಿ ನೈತಿಕ ಪೊಲೀಸ್​ಗಿರಿ; ನಾಲ್ವರು ಆರೋಪಿಗಳ ಬಂಧನ

ಇದನ್ನೂ ಓದಿ: ನೆಲಮಂಗಲ: ಹಣಕಾಸಿನ ವಿಚಾರಕ್ಕೆ ಬೆಟ್ಟದ ಮೇಲಿನಿಂದ ತಳ್ಳಿ ಕೊಲೆ ಮಾಡಿದ ಆರೋಪ; ಸ್ನೇಹಿತನನ್ನು ವಶಕ್ಕೆ ಪಡೆದ ಪೊಲೀಸರು

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್