AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ಸಮುದಾಯದ 3ನೇ ಪೀಠಕ್ಕೂ ನಮ್ಮ ಕುಟುಂಬದ ಬೆಂಬಲ ಇದೆ: ಮುರುಗೇಶ್ ನಿರಾಣಿ

3ನೇ ಪೀಠಕ್ಕೂ ನಮ್ಮ ಕುಟುಂಬದ ಬೆಂಬಲ ಇದೆ. ಸಮುದಾಯದ ಉಳಿದೆರಡು ಪೀಠಗಳಿಗೆ ಪರ್ಯಾಯ ಪೀಠವಲ್ಲ. 3ನೇ ಪೀಠದಲ್ಲೂ ಸಮುದಾಯದ ಎಲ್ಲ ಸ್ವಾಮೀಜಿಗಳು ಇರ್ತಾರೆ ಎಂದು ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಪಂಚಮಸಾಲಿ ಸಮುದಾಯದ 3ನೇ ಪೀಠಕ್ಕೂ ನಮ್ಮ ಕುಟುಂಬದ ಬೆಂಬಲ ಇದೆ: ಮುರುಗೇಶ್ ನಿರಾಣಿ
ಮುರುಗೇಶ್ ನಿರಾಣಿ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on: Feb 09, 2022 | 10:30 PM

ಬೆಂಗಳೂರು: ಪಂಚಮಸಾಲಿ ಸಮುದಾಯದ 3ನೇ ಪೀಠ ಸ್ಥಾಪನೆ ವಿಚಾರವಾಗಿ ಬೆಂಗಳೂರಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಬುಧವಾರ (ಫೆಬ್ರವರಿ 9) ಹೇಳಿಕೆ ನೀಡಿದ್ದಾರೆ. ಎಲ್ಲ ಪೀಠಕ್ಕೂ ನಮ್ಮ ಕುಟುಂಬದ ಬೆಂಬಲ, ಸಹಕಾರವಿರುತ್ತೆ. ಹಾಗೆಯೇ 3ನೇ ಪೀಠಕ್ಕೂ ನಮ್ಮ ಕುಟುಂಬದ ಬೆಂಬಲ ಇದೆ. ಸಮುದಾಯದ ಉಳಿದೆರಡು ಪೀಠಗಳಿಗೆ ಪರ್ಯಾಯ ಪೀಠವಲ್ಲ. 3ನೇ ಪೀಠದಲ್ಲೂ ಸಮುದಾಯದ ಎಲ್ಲ ಸ್ವಾಮೀಜಿಗಳು ಇರ್ತಾರೆ ಎಂದು ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಪಂಚಮಸಾಲಿ 3ನೇ ಪೀಠವಾದರೆ ತಪ್ಪೇನಲ್ಲ. ನನ್ನಲ್ಲಿ ಎರಡು ಪೀಠಗಳು ಒಂದೇ ಎಂಬ ಭಾವನೆ ಇದೆ. ಮೂರನೇ ಪೀಠದ ಬಗ್ಗೆ ನನಗೆ ಗೊತ್ತಿಲ್ಲ. ಆದರೆ, 3ನೇ ಪೀಠ ಆದರೆ ತಪ್ಪಲ್ಲ, ಪಂಚಮಸಾಲಿ ಸಮಾಜ ದೊಡ್ಡದಿದೆ. ಇದಕ್ಕೆ ನಾವು ಸಹಮತ ವ್ಯಕ್ತಪಡಿಸಬೇಕು. ಸ್ವಾಮೀಜಿಗಳು ಆಪಾದನೆ ಬಿಟ್ಟು ಜವಾಬ್ದಾರಿ ತೆಗೆದುಕೊಳ್ಳಲಿ. ಅವರೇ ಮುಂದೆ ನಿಂತು ಪೀಠ ರಚನೆಯ ಜವಾಬ್ದಾರಿ ತೆಗೆದುಕೊಳ್ಳಬೇಕು. ಪ್ರತಿಷ್ಠೆಗಾಗಿ ಬರೀ ಅಪಾದನೆ ಮಾಡಬಾರದು ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟಿದ್ದರು.

ವೀರಶೈವ ಲಿಂಗಾಯತ ಪಂಚಮಸಾಲಿ ಹೆಸರಲ್ಲಿ ಮೂರನೆ ಪೀಠದ ಹಿಂದೆ ಮುರುಗೇಶ್ ನಿರಾಣಿ ಕೈವಾಡವಿದೆ ಎಂಬ ಕಾಶಪ್ಪನವರ್ ಹಾಗೂ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಬಾಗಲಕೋಟೆಯಲ್ಲಿ ಸಚಿವ‌ ಮುರುಗೇಶ್ ನಿರಾಣಿ ಪ್ರತಿಕ್ರಿಯೆ ನೀಡಿದ್ದರು. ಈ ಸಮಾಜಕ್ಕಾಗಿ ನಿರಾಣಿ ಕುಟುಂಬ ಏನು ಮಾಡಿದೆ ಅನ್ನೋದು ರಾಜ್ಯದ ಜನತೆಗೆ ಗೊತ್ತಿದೆ. ನನ್ನಲ್ಲಿ ಎರಡು ಪೀಠಗಳು ಒಂದೇ ಎಂಬ ಭಾವನೆ ಇದೆ. ಮೂರನೇ ಪೀಠದ ಬಗ್ಗೆ ನನಗೆ ಗೊತ್ತಿಲ್ಲ. ಆದರೆ, ಮೂರನೇ ಪೀಠ ಆದ್ರೆ ತಪ್ಪಲ್ಲ, ಸಮಾಜ ದೊಡ್ಡದಿದೆ. ಇದಕ್ಕೆ ನಾವು ಸಹಮತ ವ್ಯಕ್ತಪಡಿಸಬೇಕು. ಸ್ವಾಮೀಜಿಗಳು ಆಪಾದನೆ ಬಿಟ್ಟು ಅವರೇ ಮುಂದೆ ನಿಂತು ಪೀಠ ರಚನೆಯ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದಿದ್ದರು.

ಅಲ್ಲದೆ, ಮುರುಗೇಶ್ ನಿರಾಣಿ ದಾನವಾಗಿ ಕೊಟ್ಟ ವಸ್ತುಗಳನ್ನು ವಾಪಸ್ ಕೊಡುತ್ತೇವೆ ಎಂಬ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆಗೆ ನಿರಾಣಿ ಈ ಮೊದಲು ಪ್ರತಿಕ್ರಿಯೆ ನೀಡಿದ್ದರು. ಅದರಿಂದ ಮನಸ್ಸಿಗೆ ನೋವಾಗಿದೆ. ಪಂಚಮಸಾಲಿ ಶ್ರೀಗಳ ಮೇಲೆ ನನಗೆ ಪೂಜ್ಯ ಭಾವನೆ ಇದೆ. ನಾನು ಕೊಟ್ಟ ದಾನದ ಬಗ್ಗೆ ಯಾವತ್ತೂ ಎಲ್ಲಿಯೂ ಹೇಳಿಲ್ಲ. ಮುಂದೆಯೂ ಹೇಳುವುದಿಲ್ಲ. ಅಂಥ ಜಾಯಮಾನ ನಮ್ಮದಲ್ಲ. ನಾವು ಬಲಗೈಯಿಂದ ಕೊಟ್ಟ ದಾನವು ಎಡಗೈಗೆ ಗೊತ್ತಿರುವುದಿಲ್ಲ. ನಮ್ಮ ಹೆಸರು ಹಾಳು ಮಾಡಲು ಇಂಥ ಅಪಪ್ರಚಾರ ಮಾಡುತ್ತಿದ್ದಾರೆ. ಇಂಥ ಪ್ರಚಾರಗಳ ಬಗ್ಗೆ ಪೂರ್ವಾಪರ ಖಚಿತಪಡಿಸಿಕೊಳ್ಳದೆ ಮಾತನಾಡಬಾರದು ಎಂದು ಅವರು ಹೇಳಿದ್ದರು.

ನಮಗೆ ಪಂಚಮಸಾಲಿ ಮತ್ತು ಅನ್ಯ ಸಮುದಾಯದ ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದೆ. ನಮ್ಮ ಪೂರ್ವಜರ ಕಾಲದಿಂದಲೂ ಮಠ ಮಾನ್ಯಗಳಿಗೆ, ದೇಗುಲಗಳಿಗೆ ಸಾಧುಗಳಿಗೆ ನಮ್ಮ ‌ಕೈಲಾದಷ್ಟು ಸಹಾಯ ಮಾಡುತ್ತಿದ್ದೇವೆ. ಕೊಟ್ಟ ದಾನಧರ್ಮದ ಬಗ್ಗೆ ನೆನಪು ಸಹ ಇರುವುದಿಲ್ಲ. ನಾಡಿನ ಎಲ್ಲ ಪರಂಪರೆಯ ಸಂತ ಮಹಾಂತ ಮಠಾಧೀಶರುಗಳ ಸಾಮಿಪ್ಯ ದೊರೆತಿರುವುದು ನಮ್ಮ ಸೌಭಾಗ್ಯ ಎಂದೇ ಭಾವಿಸಿದ್ದೇವೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ದಾನ ಕೊಟ್ಟ ವಸ್ತು ಬಗ್ಗೆ ಎಂದಿಗೂ ನೆನಪಿಡುವುದಿಲ್ಲ, ಎಲ್ಲಿಯೂ ಮಾತಾಡಲ್ಲ: ಪಂಚಮಸಾಲಿ ಸ್ವಾಮೀಜಿ ಹೇಳಿಕೆಗೆ ಮುರುಗೇಶ್ ನಿರಾಣಿ ಪ್ರತಿಕ್ರಿಯೆ

ಇದನ್ನೂ ಓದಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಮಾರ್ಚ್​ ಒಳಗಾಗಿ ಸರ್ಕಾರ ಪ್ರಕಟಿಸಬೇಕು: ಜಯಮೃತ್ಯುಂಜಯ ಸ್ವಾಮೀಜಿ

ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್