AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hijab Verdict: ಹೈಕೋರ್ಟ್ ತೀರ್ಪು ನೀಡಿದ ಬಳಿಕ ವಿದ್ಯಾರ್ಥಿನಿಯರ ಹೇಳಿಕೆಗೆ ಧರ್ಮಗುರುಗಳಿಂದಲೇ ಆಕ್ಷೇಪ

ಈಗಾಗಲೇ ಕಪಿಲ್ ಸಿಬಲ್ ಜೊತೆ ಮಾತನಾಡಲಾಗಿದೆ. ಅನಗತ್ಯವಾಗಿ ಸಮಾಜದಲ್ಲಿ ಗೊಂದಲ ಸೃಷ್ಟಿ ಆಗುವುದು ಬೇಡ. ಪ್ರಚೋದನೆ ನೀಡವವರನ್ನು ಸಮರ್ಥನೆ ಮಾಡುವುದು ಬೇಡ ಎಂದು ಎಲ್ಲಾ ನಾಯಕರಿಗೆ ಅಮಿರ್ ಎ ಶರಿಯಾತ್ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Hijab Verdict: ಹೈಕೋರ್ಟ್ ತೀರ್ಪು ನೀಡಿದ ಬಳಿಕ ವಿದ್ಯಾರ್ಥಿನಿಯರ ಹೇಳಿಕೆಗೆ ಧರ್ಮಗುರುಗಳಿಂದಲೇ ಆಕ್ಷೇಪ
ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪು; ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಉಡುಪಿ ವಿದ್ಯಾರ್ಥಿನಿಯರ ಸುದ್ದಿಗೋಷ್ಠಿ
TV9 Web
| Edited By: |

Updated on: Mar 16, 2022 | 3:01 PM

Share

ಬೆಂಗಳೂರು: ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ತೀರ್ಪು ನೀಡಿದ ಬಳಿಕ ವಿದ್ಯಾರ್ಥಿನಿಯರ ಹೇಳಿಕೆಗೆ ಧರ್ಮಗುರುಗಳಿಂದಲೇ ಆಕ್ಷೇಪ ಕೇಳಿಬಂದಿದೆ. ಅವರ ವರ್ತನೆ ಸರಿ ಅಲ್ಲ, ಅವರಿಗೆ ಮಾರ್ಗದರ್ಶನ ಅಗತ್ಯವಿದೆ. ಸುದ್ದಿಗೋಷ್ಠಿಗೆ ಉತ್ತೇಜಿಸಿದ್ದು ಸರಿ ಅಲ್ಲವೆಂದು ಅಭಿಪ್ರಾಯ ಕೇಳಿಬಂದಿದೆ. ಹೈಕೋರ್ಟ್ ತೀರ್ಪಿನಿಂದ ಆತಂಕ ಪಡುವ ಅಗತ್ಯವಿಲ್ಲ. ಸಮವಸ್ತ್ರ ಇರುವಲ್ಲಷ್ಟೇ ಆದೇಶ ಪಾಲನೆ ಮಾಡಲು ಹೇಳಿದೆ. ಸುಪ್ರಿಂಕೋರ್ಟ್‌ಗೆ ಹೋಗಲು ಸಹ ನಮಗೆ ಅವಕಾಶ ಇದೆ. ಈಗಾಗಲೇ ಕಪಿಲ್ ಸಿಬಲ್ ಜೊತೆ ಮಾತನಾಡಲಾಗಿದೆ. ಅನಗತ್ಯವಾಗಿ ಸಮಾಜದಲ್ಲಿ ಗೊಂದಲ ಸೃಷ್ಟಿ ಆಗುವುದು ಬೇಡ. ಪ್ರಚೋದನೆ ನೀಡವವರನ್ನು ಸಮರ್ಥನೆ ಮಾಡುವುದು ಬೇಡ ಎಂದು ಎಲ್ಲಾ ನಾಯಕರಿಗೆ ಅಮಿರ್ ಎ ಶರಿಯಾತ್ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಹಿಜಾಬ್ ವಿಚಾರವಾಗಿ ನಿನ್ನೆ (ಮಾರ್ಚ್ 15) ಮುಖಂಡರು ಸಭೆ ನಡೆಸಿದ್ದಾರೆ ಎಂದು ಮಾಹಿತಿ ಲಭಿಸಿಸದೆ. ಅಲ್ಪಸಂಖ್ಯಾತ ಸಮುದಾಯದ ರಾಜಕೀಯ ನಾಯಕರು, ಮುಸ್ಲಿಂ ಧಾರ್ಮಿಕ ಮುಖಂಡರಿಂದ ಸಭೆ ನಡೆಸಲಾಗಿದೆ. ಅಮಿರ್ ಎ ಶರಿಯಾತ್‌ರ ನಿವಾಸದಲ್ಲಿ ನಡೆದಿದ್ದ ಸಭೆಯಲ್ಲಿ ಸಲಿಂ ಅಹ್ಮದ್, ಜಮೀರ್ ಅಹ್ಮದ್ ಖಾನ್, ಯು.ಟಿ. ಖಾದರ್, ಎನ್.ಎ. ಹ್ಯಾರಿಸ್, ನಜೀರ್ ಅಹ್ಮದ್, ರೆಹಮಾನ್ ಖಾನ್, ಖನೀಜ್ ಫಾತಿಮಾ, ಇತರರು ಭಾಗಿ ಆಗಿದ್ದಾರೆ ಎಂದು ತಿಳಿದುಬಂದಿದೆ.

ಈ ಮಧ್ಯೆ, ದಾವಣಗೆರೆ ಜಿಲ್ಲೆಯಲ್ಲಿ ಹಿಜಾಬ್ ವಿವಾದ ಮತ್ತೆ ಶುರವಾಗಿದೆ. ಕಾಲೇಜ್ ರಜೆ ಇದ್ದರೂ ನಾಲ್ವರು ವಿದ್ಯಾರ್ಥಿನಿಯರು ಕೆಲ ಪೋಸ್ಟರ್​ಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದಾರೆ. ದಾವಣಗೆರೆ ನಗರದ ಸರ್ಕಾರಿ ಪದವಿ ಕಾಲೇಜಿನ ಎದುರು ಪ್ರತಿಭಟನೆ ನಡೆಸಿದ್ದಾರೆ. ಹೈಕೋರ್ಟ್ ತೀರ್ಪು ನಮ್ಮ ವಿರುದ್ಧ ಬಂದಿದೆ. ನಮಗೆ ಶಿಕ್ಷಣ ಎಷ್ಟು ಮುಖ್ಯ ಅಷ್ಟೆ ಧರ್ಮ ಕೂಡಾ. ಹೀಗಾಗಿ ನಾನು ಹಿಜಾಬ್ ತೆಗೆದು ಕಾಲೇಜಿಗೆ ಹೋಗಲ್ಲ ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.

ಈ ಹಿಂದೆ ಶಬರಿಮಲೆಯಲ್ಲಿ ಕೆಲ ವಿಚಾರ ಚರ್ಚೆಗೆ ಬಂದಿದ್ದವು. ಆಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಧಾರ್ಮಿಕ ವಿಚಾರಗಳಲ್ಲಿ ಕೋರ್ಟ್ ಪ್ರವೇಶ ಮಾಡಬಾರದು ಎಂದು ಹೇಳಿದ್ದರು. ಈಗ ನಮ್ಮ ವಿಚಾರದಲ್ಲಿ ಅಮಿತ್ ಶಾ ಅವರು ಬೆಂಬಲ ನೀಡಲಿ. ಹೈಕೋರ್ಟ್ ತೀರ್ಪು ಬರುವ ತನಕ ಕಾಲೇಜಿನ ಮುಖ್ಯಸ್ಥರ ಮಾತು ಕೇಳಿ ಹಿಜಾಬ್ ತೆಗೆದು ಕೆಲ ಪರೀಕ್ಷೆಗಳಿಗೆ ಹಾಜರಾಗಿದ್ದೆವು. ಆದ್ರೆ ಹೈಕೋರ್ಟ್ ತೀರ್ಪು ನಮ್ಮ ವಿರುದ್ಧ ಬಂದಿದೆ. ಹೀಗಾಗಿ ನಾವು ಕಾಲೇಜಿಗೆ ಹಿಜಾಬ್ ಇಲ್ಲದೇ ಹೋಗಲ್ಲ. ಜೊತೆಗೆ ನಮಗೆ ಶಿಕ್ಷಣದಷ್ಟು ಧರ್ಮ ಕೂಡಾ ಮುಖ್ಯ ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.

ಇದನ್ನೂ ಓದಿ: Hijab Verdict: ಹಿಜಾಬ್ ಪ್ರಕರಣ ಆದೇಶದ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ಇದನ್ನೂ ಓದಿ: ಸುಪ್ರೀಂಕೋರ್ಟ್​ಗೆ ಹೋಗಿದ್ದಾರೆ, ಮುಂದೆ ಇಡೀ ದೇಶದಲ್ಲಿ ಹಿಜಾಬ್ ರದ್ದಾಗಬಹುದು: ರಘುಪತಿ ಭಟ್

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್