AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಂದ ಮಾಧ್ಯಮ ಹೇಳಿಕೆ ಬಿಡುಗಡೆ -ನಾನು ಆರೋಗ್ಯವಾಗಿದ್ದೇನೆ, ಶೀಘ್ರವೇ ಪಕ್ಷದ ಕಚೇರಿಗೆ ಭೇಟಿ ನೀಡುವೆ

HD Deve Gowda Health: ಕೆಲ ದಿನಗಳ ನಂತರ ನಾನೇ ಖುದ್ದು ಪಕ್ಷದ ಕಚೇರಿಗೆ ಭೇಟಿ ನೀಡುವುದರ ಜತೆಗೆ, ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗಲಿದ್ದೇನೆ. ಯಾವುದೇ ಕಾರಣಕ್ಕೂ ಮುಖಂಡರು, ಕಾರ್ಯಕರ್ತರು ಅನ್ಯತಾ ಭಾವಿಸಬಾರದು ಎಂದು ಕೋರುತ್ತೇನೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಂದ ಮಾಧ್ಯಮ ಹೇಳಿಕೆ ಬಿಡುಗಡೆ -ನಾನು ಆರೋಗ್ಯವಾಗಿದ್ದೇನೆ, ಶೀಘ್ರವೇ ಪಕ್ಷದ ಕಚೇರಿಗೆ ಭೇಟಿ ನೀಡುವೆ
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಂದ ಮಾಧ್ಯಮ ಹೇಳಿಕೆ ಬಿಡುಗಡೆ -ನಾನು ಆರೋಗ್ಯವಾಗಿದ್ದೇನೆ, ಶೀಘ್ರವೇ ಪಕ್ಷದ ಕಚೇರಿಗೆ ಭೇಟಿ ನೀಡುವೆ
TV9 Web
| Edited By: |

Updated on: Sep 22, 2022 | 6:46 PM

Share

ಬೆಂಗಳೂರು: ನನ್ನ ಆರೋಗ್ಯ ಉತ್ತಮವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರು (JDS Supremo, Former PM HD Deve Gowda) ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಪ್ರಧಾನಮಂತ್ರಿ ” ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ ಕಾರಣಕ್ಕೆ ವೈದ್ಯರು ವಿಶ್ರಾಂತಿಗೆ ಸಲಹೆ ಮಾಡಿದ್ದರು. ಆದಕಾರಣ ಕೆಲ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯಬೇಕಾಯಿತು. ಇನ್ನೂ ಕೆಲ ದಿನ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ಮಾಡಿದ್ದಾರೆ ” ಎಂದು ಅವರು ಹೇಳಿದ್ದಾರೆ (Health).

ಮನೆಯಿಂದಲೇ ನನ್ನೆಲ್ಲಾ ರಾಜಕೀಯ, ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಣೆ ಮಾಡಲಿದ್ದೇನೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೆಲವು ದಿನಗಳ ಮಟ್ಟಿಗೆ ನನ್ನ ಭೇಟಿಗೆ ಬರುವುದು ಬೇಡ ಎಂದು ಮಾಜಿ ಪ್ರಧಾನಮಂತ್ರಿ ಮನವಿ ಮಾಡಿದ್ದಾರೆ.

ಕೆಲ ದಿನಗಳ ನಂತರ ನಾನೇ ಖುದ್ದು ಪಕ್ಷದ ಕಚೇರಿಗೆ ಭೇಟಿ ನೀಡುವುದರ ಜತೆಗೆ, ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗಲಿದ್ದೇನೆ. ಯಾವುದೇ ಕಾರಣಕ್ಕೂ ಮುಖಂಡರು, ಕಾರ್ಯಕರ್ತರು ಅನ್ಯತಾ ಭಾವಿಸಬಾರದು ಎಂದು ಕೋರುತ್ತೇನೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಲ್ಲದೆ, ನನ್ನ ನಿವಾಸಕ್ಕೆ ಭೇಟಿ ನೀಡಿ ನನ್ನ ಆರೋಗ್ಯ ವಿಚಾರಿಸಿದ ಪ್ರತಿಪಕ್ಷ ನಾಯಕರಾದ ಶ್ರೀ ಸಿದ್ದರಾಮಯ್ಯ, ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಯಡಿಯೂರಪ್ಪ, ಕಂದಾಯ ಸಚಿವ ಶ್ರೀ ಅಶೋಕ್ ಸೇರಿದಂತೆ ಇತರೆ ಎಲ್ಲಾ ಸಚಿವರು, ಮುಖಂಡರಿಗೆ ನಾನು ಆಭಾರಿಯಾಗಿದ್ದೇನೆ ಎಂದೂ ಅವರು ತಿಳಿಸಿದ್ದಾರೆ.

ಹಾಗೆಯೇ, ನನ್ನ ಆರೋಗ್ಯಕ್ಕಾಗಿ ನಾಡಿನ ದೇವಾಲಯಗಳಲ್ಲಿ ಪೂಜೆ, ಹರಕೆ ಮಾಡಿಕೊಂಡು ಅನ್ನದಾನ ಇತ್ಯಾದಿಗಳನ್ನು ಮಾಡಿದ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಪ್ರೀತಿ ವಿಶ್ವಾಸಕ್ಕೆ ನನ್ನ ಹೃದಯ ತುಂಬಿ ಬಂದಿದೆ. ಅವರೆಲ್ಲರಿಗೂ ನನ್ನ ಶುಭ ಹಾರೈಕೆಗಳು ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಹೇಳಿದ್ದಾರೆ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್