AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Expressway: ಉದ್ಘಾಟನೆಗೆ ಮೋದಿ ಆಗಮನ, ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗ ಬದಲಾವಣೆ, ಇಲ್ಲಿದೆ ಪರ್ಯಾಯ ಮಾರ್ಗ

ನೂತನವಾಗಿ ನಿರ್ಮಾಣವಾಗಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ದಶಪಥ ಹೆದ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಂಡ್ಯದ ಮದ್ದೂರು ತಾಲೂಕಿನಲ್ಲಿ ಲೋಕಾರ್ಪಣೆಗೊಳಿಸುವ ಹಿನ್ನೆಲೆ ದಶಪಥ ಹೆದ್ದಾರಿಯನ್ನು ಅರ್ಧಕ್ಕರ್ಧ ಬಂದ್​ ಮಾಡಲಾಗಿದೆ.

Mysuru Expressway: ಉದ್ಘಾಟನೆಗೆ ಮೋದಿ ಆಗಮನ, ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗ ಬದಲಾವಣೆ, ಇಲ್ಲಿದೆ ಪರ್ಯಾಯ ಮಾರ್ಗ
ಮೈಸೂರು-ಬೆಂಗಳೂರು ಎಕ್ಸಪ್ರೆಸ್​ವೇ
ವಿವೇಕ ಬಿರಾದಾರ
|

Updated on:Mar 10, 2023 | 11:33 AM

Share

ಬೆಂಗಳೂರು: ನೂತನವಾಗಿ ನಿರ್ಮಾಣವಾಗಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ದಶಪಥ ಹೆದ್ದಾರಿಯನ್ನು (Bengaluru-Mysuru Expressway) ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ (ಮಾ.12) ಮಂಡ್ಯದ ಮದ್ದೂರು ತಾಲೂಕಿನಲ್ಲಿ ಲೋಕಾರ್ಪಣೆಗೊಳಿಸುವ ಹಿನ್ನೆಲೆ ದಶಪಥ ಹೆದ್ದಾರಿಯನ್ನು ಅರ್ಧಕ್ಕರ್ಧ ಬಂದ್​ ಮಾಡಲಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಲಾಗಿದೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಮಂಡ್ಯ ಜಿಲ್ಲಾಧಿಕಾರಿ ಹೆಚ್​ ಎನ್​ ಗೋಪಾಲಕೃಷ್ಣ ಮಂಡ್ಯ ನಗರ ಮತ್ತು ಮದ್ದೂರು ಠಾಣಾ ವ್ಯಾಪ್ತಿಯ ಗೆಜ್ಜಲಗೆರ ಕಾಲೋನಿ ಬಳಿ ಪ್ರಧಾನಿಗಳ ಸಾರ್ವಜನಿಕ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಹಸ್ರಾರು ಜನರು ಆಗಮಿಸಲಿದ್ದಾರೆ. ಹಾಗೇ ಅತಿಥಿ ಗಣ್ಯರು ಭಾಗವಹಿಸಲಿದ್ದು, ಭದ್ರತಾ ದೃಷ್ಟಿಯಿಂದ ಮಾರ್ಚ್​ 12 ರಂದು ಬೆಳಿಗ್ಗೆ 6 ರಿಂದ ಸಾಯಂಕಾಲ 6 ಗಂಟೆಯವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ದರ ಪಟ್ಟಿ ಬಿಡುಗಡೆ

ಮಾರ್ಗ ಬದಲಾವಣೆ

ಮೈಸೂರು ಬೆಂಗಳೂರು, ಬೆಂಗಳೂರು ಮಲೆಮಹಾದೇಶ್ವರ, ಮೈಸೂರು ತುಮಕೂರು ಮಾರ್ಗದಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

1. ಮೈಸೂರಿನಿಂದ ಬೆಂಗಳೂರಿಗೆ ಮಂಡ್ಯ, ಮಾರ್ಗವಾಗಿ ಸಂಚರಿಸಲಿರುವ ಎಲ್ಲ ರೀತಿಯ ವಾಹನಗಳು ಮೈಸೂರು – ಬನ್ನೂರು – ಕಿರುಗಾವಲು – ಮಳವಳ್ಳಿ – ಹಲಗೂರು – ಕನಕಪುರ – ಬೆಂಗಳೂರು ಮಾರ್ಗವಾಗಿ ತೆರಳಬೇಕು.

2. ಮೈಸೂರಿನಿಂದ ತುಮಕೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲ ರೀತಿಯ ವಾಹನಗಳು ಮೈಸೂರು – ಶ್ರೀರಂಗಪಟ್ಟಣ – ಪಾಂಡವಪುರ – ನಾಗಮಂಗಲ – ಬೆಳ್ಳೂರು ಕ್ರಾಸ್ – ತುಮಕೂರು ಮಾರ್ಗವಾಗಿ ಹೋಗಬೇಕು.

3. ತುಮಕೂರಿನಿಂದ ಮೈಸೂರಿಗೆ ಮದ್ದೂರು ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲ ರೀತಿಯ ವಾಹನಗಳು ತುಮಕೂರು- ಬೆಳ್ಳೂರು ಕ್ರಾಸ್- ನಾಗಮಂಗಲ-ಪಾಂಡವಪುರ- ಶ್ರೀರಂಗಪಟ್ಟಣ ಮೈಸೂರು ಮಾರ್ಗವಾಗಿ ಸಂಚರಿಸಬೇಕು.

4. ಬೆಂಗಳೂರಿನಿಂದ ಮೈಸೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲ ರೀತಿಯ ವಾಹನಗಳು ಬೆಂಗಳೂರು – ಚನ್ನಪಟ್ಟಣ – ಹಲಗೂರು – ಮಳವಳ್ಳಿ – ಕಿರುಗಾವಲು -ಬನ್ನೂರು – ಮೈಸೂರು ಮಾರ್ಗವಾಗಿ ಸಂಚರಿಸಬೇಕು.

5. ಬೆಂಗಳೂರಿನಿಂದ ಮದ್ದೂರು ಮಾರ್ಗವಾಗಿ ಕೊಳ್ಳೇಗಾಲ-ಮಹದೇಶ್ವರ ಬೆಟ್ಟಕ್ಕೆ ತೆರಳುವ ಎಲ್ಲ ರೀತಿಯ ವಾಹನಗಳು ಬೆಂಗಳೂರು – ಚನ್ನಪಟ್ಟಣ – ಹಲಗೂರು – ಮಳವಳ್ಳಿ – ಕೊಳ್ಳೇಗಾಲ ಮಹದೇಶ್ವರಬೆಟ್ಟ ಮಾರ್ಗವಾಗಿ ಸಂಚರಿಸಬೇಕು.

ಒಂದು ವೇಳೆ ಈ ನಿಯಮವನ್ನು ಉಲ್ಲಂಘಿಸಿದ್ದೇ ಆದರೆ ಅಂತವರ ವಿರುದ್ಧ ಕೂನೂನು ರೀತ್ಯಾ ಕ್ರಮಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:21 am, Fri, 10 March 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?