AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Bengaluru Expressway Toll: ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇನಲ್ಲಿ ಫೆ.15ರೊಳಗೆ ಟೋಲ್ ಸಂಗ್ರಹಿಸಲು ನಿರ್ಧಾರ

ಮಹತ್ವಾಕಾಂಕ್ಷೆಯ ಮೈಸೂರು-ಬೆಂಗಳೂರು ಎಕ್ಸಪ್ರೆಸ್ ವೇನಲ್ಲಿ ಫೆ.15ರೊಳಗೆ ಟೋಲ್ ಸಂಗ್ರಹಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ.

Mysuru Bengaluru Expressway Toll: ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇನಲ್ಲಿ ಫೆ.15ರೊಳಗೆ ಟೋಲ್ ಸಂಗ್ರಹಿಸಲು ನಿರ್ಧಾರ
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇImage Credit source: The Hindu
ನಯನಾ ರಾಜೀವ್
|

Updated on: Feb 03, 2023 | 9:51 AM

Share

ಮಹತ್ವಾಕಾಂಕ್ಷೆಯ ಮೈಸೂರು-ಬೆಂಗಳೂರು ಎಕ್ಸಪ್ರೆಸ್ ವೇನಲ್ಲಿ ಫೆ.15ರೊಳಗೆ ಟೋಲ್ ಸಂಗ್ರಹಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಕಾಮಗಾರಿಯು ಮೊದಲ ಹಂತದಲ್ಲಿ ಬೆಂಗಳೂರು-ಚನ್ನಪಟ್ಟಣದ ನಿಡಘಟ್ಟದವರೆಗೂ ನಡೆದಿತ್ತು. ಶ್ರೀರಂಗಪಟ್ಟಣ ಹಾಗೂ ಬಿಡದಿ ಬಳಿ ಎರಡು ಟೋಲ್ ಪ್ಲಾಜಾ ನಿರ್ಮಿಸಲಾಗಿದೆ. ಪ್ರವೇಶ ಹಾಗೂ ನಿರ್ಗಮನಕ್ಕೆ ಅನುಕೂಲವಾಗುವಂತೆ 11 ಗೇಟ್ ಅಳವಡಿಸಲಾಗಿದೆ. ಎಲ್ಲಾ ಗೇಟ್‍ಗಳು ಅತ್ಯಾಧುನಿಕ ಟೋಲ್ ಸಿಸ್ಟಂ ಹಾಗೂ ಫಾಸ್ಟ್ ಟ್ಯಾಗ್ ವ್ಯವಸ್ಥೆ ಇರಲಿದೆ. ಸರ್ವಿಸ್ ರಸ್ತೆ ನಿರ್ಮಾಣವಾದ ಬಳಿಕ ಹೈವೇ ರಸ್ತೆಯಲ್ಲಿ ದ್ವಿಚಕ್ರ ಮತ್ತು ಮೂರು ಚಕ್ರದ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ.

ಈ ಎಕ್ಸ್​ಪ್ರೆಸ್​ ವೇ ಒಟ್ಟು 56 ಕಿಮೀ ಒಳಗೊಂಡಿತ್ತು. ಎರಡನೇ ಹಂತದ ಕಾಮಗಾರಿ ನಿಡಘಟ್ಟದಿಂದ ಮೈಸೂರಿನವರೆಗೆ ನಡೆಯುತ್ತಿದೆ. 61 ಕಿ.ಮೀ. ಕಾಮಗಾರಿ ಭರದಿಂದ ಸಾಗುತ್ತಿದೆ. ಇದೀಗ ಮೊದಲ ಹಂತದ ಬೆಂಗಳೂರು-ನಿಡಘಟ್ಟ ಟೋಲ್ ಸಂಗ್ರಹಕ್ಕೆ ಹೆದ್ದಾರಿ ಪ್ರಾಕಾರ ನಿರ್ಧರಿಸಿದೆ. ಮೊದಲ ಹಂತದ ಕಾಮಗಾರಿ ಮುಗಿದಿದ್ದು, ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ. ಎರಡನೇ ಹಂತದ ಕಾಮಗಾರಿ ಭರದಿಂದ ಸಾಗುತ್ತಿದೆ. ಈ ಕಾರಣದಿಂದಾಗಿ ಮೊದಲ ಹಂತದಲ್ಲಿ ಬೆಂಗಳೂರು-ನಿಡಘಟ್ಟ ಟೋಲ್ ಸಂಗ್ರಹವನ್ನು ಆರಂಭಿಸಲಾಗುವುದು. ಎರಡನೇ ಹಂತದ ಕಾಮಗಾರಿ ಮುಗಿದ ಬಳಿಕ ಎರಡನೆ ಟೋಲ್ ಸಂಗ್ರಹ ಮಾಡಲಾಗುವುದು ಎಂದು ಪ್ರಾಧಿಕಾರದ ಅಧಿಕಾರಿ ರಸ್ತೆಯ ದೂರ, ಮಾರ್ಗದರ್ಶಿ ಬೋರ್ಡ್ ಅಳವಡಿಸಲಾಗಿದೆ.

ಮತ್ತಷ್ಟು ಓದಿ: Srirangapatna Bypass: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯ ಶ್ರೀರಂಗಪಟ್ಟಣ ಬೈಪಾಸ್ ಸಂಚಾರಕ್ಕೆ ಮುಕ್ತ

ಮಂಡ್ಯ ಬೈಪಾಸ್ ರಸ್ತೆ ಕಾಮಗಾರಿ ಮುಗಿದಿದೆ. ಕೆಲ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿಯಾಗಿ 1,201 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಈಗಾಗಲೇ ತ್ರಿಡಿ ನೋಟಿಫಿಕೇಷನ್ ಮುಗಿದು ಮುಂದಿನ ತಿಂಗಳೊಳಗಾಗಿ ಕಾಮಗಾರಿಗೆ ಚಾಲನೆ ನೀಡಲು ಕ್ರಮವಹಿಸಲಾಗಿದೆ.

ಚನ್ನಪಟ್ಟಣದಲ್ಲಿ ಐಲೆಂಡ್ ರೆಸ್ಟ್ ಏರಿಯಾ ನಿರ್ಮಾಣ ಮಾಡಲು ಸುಮಾರು 50 ಎಕರೆ ಜಮೀನನ್ನು ಖರೀದಿಸಿ ಟ್ರಾಮಾ ಸೆಂಟರ್ ತೆರೆದು ಅಪಘಾತಗಳು ಸಂಭವಿಸಿದಲ್ಲಿ ತುರ್ತು ಚಿಕಿತ್ಸೆ ನೀಡಲು ಕ್ರಮ ವಹಿಸಲಾಗುತ್ತದೆ.

ನೈಸ್ ರಸ್ತೆಯಂತೆ ಆಗಮನ ಮತ್ತು ನಿರ್ಗಮನ ಸಂಪರ್ಕ ಕಲ್ಪಿಸುವ ರಸ್ತೆಯಂತೆ ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣಗಳಲ್ಲಿ ಸಂಪರ್ಕ ಕಲ್ಪಿಸುವ ರಸ್ತೆಗಳ ಜೊತೆಗೆ ರೆಸ್ಟ್ ಏರಿಯಾ ನಿರ್ಮಾಣ ಮಾಡಲು ಮುಂದಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ