AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಗೀತೆ ದಾಟಿ ಮತ್ತು ಅವಧಿ ನಿಗದಿ ವಿವಾದ: ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ನಕಾರ

ನಾಡಗೀತೆ ದಾಟಿ ಮತ್ತು ಅವಧಿ ನಿಗದಿ ಕುರಿತು ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನ್ಯಾ. ಬಿ.ವಿ. ನಾಗರತ್ನ ನೇತೃತ್ವದ ಪೀಠವು, ನಾಡಗೀತೆಯಲ್ಲಿ ಏಕರೂಪತೆ ಇರಬೇಕು, ಸಮಯ ಮತ್ತು ರಾಗದ ಬಗ್ಗೆ ಸರ್ಕಾರದ ತೀರ್ಮಾನವೇ ಅಂತಿಮ ಎಂದು ಹೈಕೋರ್ಟ್ ಹೇಳಿದ್ದನ್ನು ಎತ್ತಿಹಿಡಿದಿದೆ. ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅರ್ಜಿ ವಜಾಗೊಳಿಸಿದೆ.

ನಾಡಗೀತೆ ದಾಟಿ ಮತ್ತು ಅವಧಿ ನಿಗದಿ ವಿವಾದ: ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ನಕಾರ
ಸುಪ್ರೀಂಕೋರ್ಟ್Image Credit source: Getty images
ರಮೇಶ್​ ಎಮ್​.
| Edited By: |

Updated on: Aug 27, 2026 | 10:44 PM

Share

ಬೆಂಗಳೂರು, ಆಗಸ್ಟ್​ 27: ನಾಡಗೀತೆ (Nadageethe) ದಾಟಿ ಮತ್ತು ಅವಧಿ ನಿಗದಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ (Supreme Court) ನಿರಾಕರಿಸಿದೆ. ನಾಡಗೀತೆ ದಾಟಿಯಲ್ಲಿ ಏಕರೂಪತೆ ಕಾಯ್ದುಕೊಳ್ಳುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟಿರುವ ಸರ್ವೋಚ್ಚ ನ್ಯಾಯಾಲಯ, ಸರ್ಕಾರದ ತೀರ್ಮಾನವನ್ನು ಎತ್ತಿಹಿಡಿದಿರುವ ಹೈಕೋರ್ಟ್ ಆದೇಶವನ್ನು ಪುರಸ್ಕರಿಸಿದೆ.

ರಾಗ ಮತ್ತು ಕಾಲಮಿತಿಯಲ್ಲಿ ಏಕರೂಪತೆ ಮುಖ್ಯ ಎಂದ ಪೀಠ

ಈ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹಾಗೂ ನ್ಯಾಯಮೂರ್ತಿ ಆರ್. ಮಹಾದೇವನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು, ‘ರಾಜ್ಯದ ನಾಡಗೀತೆಯನ್ನು ಹಾಡುವಾಗ ರಾಗ ಮತ್ತು ಸಮಯದ ಅವಧಿ ಎರಡರಲ್ಲೂ ಕಡ್ಡಾಯವಾಗಿ ಏಕರೂಪತೆ ಇರಬೇಕು’ ಎಂದು ಅಭಿಪ್ರಾಯಪಟ್ಟಿದೆ.

ಅರ್ಜಿ ವಜಾಗೊಳಿಸಿದ ಸುಪ್ರೀಂ

‘ಇನ್ನು ಹೈಕೋರ್ಟ್ ನೀಡಿರುವ ಆದೇಶದಲ್ಲಿ ನಾವು ಮಧ್ಯಪ್ರವೇಶಿಸಲು ಯಾವುದೇ ಸೂಕ್ತ ಕಾರಣಗಳಿಲ್ಲ’ ಎಂದು ಹೇಳುವ ಮೂಲಕ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಆ ಮೂಲಕ ನಾಡಗೀತೆ ಗಾಯನದ ದಾಟಿ ಮತ್ತು ಅವಧಿಯ ಗೊಂದಲಗಳಿಗೆ ಸುಪ್ರೀಂಕೋರ್ಟ್‌ನಲ್ಲೂ ತೆರೆ ಬಿದ್ದಂತಾಗಿದೆ.

ಪ್ರಕರಣ ಹಿನ್ನೆಲೆ

ನಾಡಗೀತೆಯನ್ನು ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ದಾಟಿಯಲ್ಲಿ, 2 ಗಂಟೆ 30 ನಿಮಿಷಗಳ ಅವಧಿಯಲ್ಲಿ ಹಾಡಬೇಕು ಎಂದು 2022ರ ಸೆಪ್ಟೆಂಬರ್ 25ರಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಖ್ಯಾತ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅವರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ ‘ರಾಗವನ್ನು ತಜ್ಞರೇ ಸಂಯೋಜಿಸಿದ್ದು, ಸರ್ಕಾರ ರಾಗ ನಿಗದಿಪಡಿಸುವುದರಿಂದ ಯಾರ ಹಕ್ಕುಗಳಿಗೂ ಚ್ಯುತಿಯಾಗುವುದಿಲ್ಲ’ ಎಂದು ಅಭಿಪ್ರಾಯಪಟ್ಟಿದ್ದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು.

ಇದನ್ನೂ ಓದಿ: ಒಂದಕ್ಷರವನ್ನೂ ಬಿಡದಂತೆ ನಾಡಗೀತೆ ಹಾಡಲು ಸಮ್ಮತಿ: 2 ನಿಮಿಷ 30 ಸೆಕೆಂಡ್​ನಲ್ಲಿ ಹಾಡಲು ಸರ್ಕಾರ ಒಪ್ಪಿಗೆ

ಇದನ್ನು ಪ್ರಶ್ನಿಸಿ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ‘ನಾಡಗೀತೆಯ ರಾಗ ಹಾಗೂ ಅವಧಿಯ ವಿಚಾರದಲ್ಲಿ ಸರ್ಕಾರ ನಿರ್ದೇಶನ ನೀಡುವಂತಿಲ್ಲ’ ಎಂಬುದು ಅರ್ಜಿದಾರರ ಪರವಾಗಿ ಹಿರಿಯ ವಕೀಲ ವಿ. ಕಟಾರ್ಕಿ ಅವರ ವಾದವಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್
4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್
ಗರ್ಭಿಣಿ ಮಹಿಳಾ ಕಾನ್ಸ್ಟೇಬಲ್ ಮೇಲೆ ರಾಡ್ ನಿಂದ ಹಲ್ಲೆ: ಆರೋಪಿ ಬಂಧನ
ಗರ್ಭಿಣಿ ಮಹಿಳಾ ಕಾನ್ಸ್ಟೇಬಲ್ ಮೇಲೆ ರಾಡ್ ನಿಂದ ಹಲ್ಲೆ: ಆರೋಪಿ ಬಂಧನ