AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್​ನಲ್ಲಿ ನಾಡಪ್ರಭು ಕೆಂಪೇಗೌಡರ 3ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ; ಯಾವಾಗ?

ವಿಶ್ವ ಒಕ್ಕಲಿಗರ ಮಹಾ ವೇದಿಕೆಯು ಅನೇಕ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಜನಾಂಗದ ಆಶಾದೀಪವಾಗಿ ಜನಪ್ರಿಯತೆಯನ್ನು ಗಳಿಸಿದೆ. ಅದರಂತೆ ಲಂಡನ್‌(London) ನಗರದಲ್ಲಿ ನಾಡಪ್ರಭು ಕೆಂಪೇಗೌಡರ 3ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸಂಭ್ರಮ ಮತ್ತು ಕನ್ನಡೋತ್ಸವವನ್ನು ಆಯೋಜಿಸಲು ಸಜ್ಜಾಗಿದೆ. ಈ ಕುರಿತು ವಿವರ ಇಲ್ಲಿದೆ.

ಲಂಡನ್​ನಲ್ಲಿ ನಾಡಪ್ರಭು ಕೆಂಪೇಗೌಡರ 3ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ; ಯಾವಾಗ?
ಲಂಡನ್​ನಲ್ಲಿ ನಾಡಪ್ರಭು ಕೆಂಪೇಗೌಡರ 3ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ
ಕಿರಣ್ ಹನುಮಂತ್​ ಮಾದಾರ್
|

Updated on: Sep 26, 2024 | 7:22 PM

Share

ಬೆಂಗಳೂರು, ಸೆ.26: ವಿಶ್ವ ಒಕ್ಕಲಿಗರ ಮಹಾ ವೇದಿಕೆ(Vishva Okkaliga Maha Vedike)ಯು ಸೆಪ್ಟೆಂಬರ್ 28ರಂದು ಲಂಡನ್‌(London) ನಗರದಲ್ಲಿ ನಾಡಪ್ರಭು ಕೆಂಪೇಗೌಡರ 3ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸಂಭ್ರಮ ಮತ್ತು ಕನ್ನಡೋತ್ಸವವನ್ನು ಆಯೋಜಿಸಲು ಸಜ್ಜಾಗಿದೆ. ಈಗಾಗಲೇ ದುಬೈ ಮತ್ತು ಸಿಂಗಾಪುರ ನಗರಗಳಲ್ಲಿ ಈ ಉತ್ಸವವನ್ನು ನಡೆಸಲಾಗಿದ್ದು, ಮೂರನೇ ಉತ್ಸವವನ್ನು ಈ ಬಾರಿ ಮಹಾನಗರಿ ಲಂಡನ್‌ನಲ್ಲಿ ಆಚರಿಸಲು ವೇದಿಕೆಯು ಸಿದ್ಧಗೊಂಡಿದೆ.

ಈ ಕಾರ್ಯಕ್ರಮವು ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷರಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್‌ ಜೋಶಿ ಹಾಗೂ ಕಾರ್ಯಕ್ರಮದ ಉದ್ಘಾಟಕರಾಗಿ ಕರ್ನಾಟಕದ ಮಾಜಿ ಸಚಿವರಾದ ಶ್ರೀ ಸಿ.ಎಸ್.ಪುಟ್ಟರಾಜು ಮತ್ತು ಬೊಮ್ಮನಹಳ್ಳಿ ಕ್ಷೇತ್ರದ ಶಾಸಕರಾದ ಶ್ರೀ ಸತೀಶ್ ರೆಡ್ಡಿ ಪಾಲ್ಗೊಳ್ಳಲಿದ್ದಾರೆ.

ಉತ್ಸವದಲ್ಲಿ ಮನರಂಜನೆಯ ಮಹಾ ರಸದೌತಣ

ಈ ಉತ್ಸವದಲ್ಲಿ ಮಾತುಕತೆಯ ಜೊತೆಗೆ ಮನರಂಜನೆಯ ಮಹಾ ರಸದೌತಣವನ್ನೇ ಏರ್ಪಡಿಸಲಾಗುತ್ತಿದೆ. ಕರ್ನಾಟಕದ ಶ್ರೀಮಂತ ಪರಂಪರೆ ಮತ್ತು ಸಾಂಸ್ಕೃತಿಕ ಹೆಮ್ಮೆಯನ್ನು ವಿದೇಶಿ ನೆಲದಲ್ಲಿ ಪ್ರಸ್ತುತಪಡಿಸಲು ಈ ವೇದಿಕೆಯು ಮುಂದಾಗಿದೆ. ಈ ಮೂಲಕ ನಾಡು, ನುಡಿಯ ಅಭಿಮಾನವನ್ನು ಸದಾ ಜಾಗೃತಗೊಳಿಸುವ ಈ ರೀತಿಯ ಕಾರ್ಯಗಳು ವೇದಿಕೆಯಿಂದ ನಿರಂತರವಾಗಿ ಜಾರಿಯಲ್ಲಿರಲಿವೆ.

ವಿಶ್ವ ಒಕ್ಕಲಿಗರ ಮಹಾ ವೇದಿಕೆಯು ಅನೇಕ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಜನಾಂಗದ ಆಶಾದೀಪವಾಗಿ ಜನಪ್ರಿಯತೆಯನ್ನು ಗಳಿಸಿದೆ. ನೀರು, ನೆಲದ ವಿಷಯದಲ್ಲಿ ಆರಂಭದಿಂದಲೂ ಉತ್ತಮವಾದ ಹೋರಾಟವನ್ನು ಮಾಡುತ್ತಾ ಬಂದಿದೆ. ವಿಶ್ವ ಒಕ್ಕಲಿಗರ ಮಹಾ ವೇದಿಕೆಯು ಸಮುದಾಯಕ್ಕೆ ಒಂದಷ್ಟು ಸೇವೆ ಸಲ್ಲಿಸುತ್ತಾ ಪ್ರತಿ ವರ್ಷವೂ ಪರಮಪೂಜ್ಯ ಜಗದ್ಗುರುಗಳ ಸಮ್ಮುಖದಲ್ಲಿ ಜನಾಂಗದ ನೇತಾರರ ಸಹಕಾರದೊಂದಿಗೆ ಸಾಂಪ್ರದಾಯಿಕ ಹಬ್ಬವಾದ ಸಂಕ್ರಾಂತಿ ಹಬ್ಬವನ್ನು ಒಕ್ಕಲಿಗರ ಹಬ್ಬವಾಗಿ ವಿಶಿಷ್ಠವಾಗಿ ರಾಜ್ಯಾದ್ಯಂತ ಆಚರಿಸುತ್ತಾ, ವಾರ್ಷಿಕೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರುತ್ತಿದೆ.

ಇದೇ ಸಂದರ್ಭದಲ್ಲಿ ಜನಾಂಗದ ಸಾಧಕರಿಗಾಗಿ ವಿಶ್ವಮಾನ್ಯ ಒಕ್ಕಲಿಗ ಪ್ರಶಸ್ತಿಯನ್ನು ನೀಡುವ ಮೂಲಕ ಅನೇಕ ಜನಪರ ಕೆಲಸಗಳನ್ನು ಮಾಡಿರುವ ಸಾಧಕರನ್ನು ಗುರುತಿಸುವ ಕಾರ್ಯವನ್ನು ಕೂಡ ಮಾಡುತ್ತಿದೆ. ವೇದಿಕೆಯು ಜನಾಂಗದ ಸಮುದಾಯದ ಒಳಿತಿಗಾಗಿ, ಒಗ್ಗಟ್ಟಿಗಾಗಿ, ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ ಎಲ್ಲರೊಡನೆ ಸ್ಪಂದಿಸುತ್ತಾ ಬಂದಿದೆ. ಇನ್ನು ಈ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಮೊ: 6364409651, 6364466240 ಸಂಪರ್ಕಿಸಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ