AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಬಾವಿಯಲ್ಲಿ ಬಾರ್ ಓಪನ್ ಆಗಿ ಎರಡೇ ದಿನವಾಯ್ತು! ಸ್ಥಳೀಯರಿಂದ ಪ್ರತಿಭಟನೆ, ಬಾರ್​ಗೆ ಬೀಗಮುದ್ರೆ ಆಗ್ರಹಿಸಿ ಧರಣಿ

2 ದಿನದ ಹಿಂದಷ್ಟೇ ಓಪನ್ ಆಗಿರುವ ಬಾರ್​​ಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಬಾರ್ ಬಾಗಿಲು ತೆಗೆಯುವ ಮುನ್ನವೇ ಸ್ಥಳೀಯರು ಬಾರ್ ಮುಂದೆ ಜಮಾವಣೆಗೊಂಡಿದ್ದಾರೆ.

ನಾಗರಬಾವಿಯಲ್ಲಿ ಬಾರ್ ಓಪನ್ ಆಗಿ ಎರಡೇ ದಿನವಾಯ್ತು! ಸ್ಥಳೀಯರಿಂದ ಪ್ರತಿಭಟನೆ, ಬಾರ್​ಗೆ ಬೀಗಮುದ್ರೆ ಆಗ್ರಹಿಸಿ ಧರಣಿ
ಬಾರ್​ಗೆ ಬೀಗಮುದ್ರೆ ಆಗ್ರಹಿಸಿ ಧರಣಿ
TV9 Web
| Updated By: ಆಯೇಷಾ ಬಾನು|

Updated on: Jan 18, 2023 | 12:43 PM

Share

ಬೆಂಗಳೂರು: ನಗರದ ನಾಗರಬಾವಿ ವೃತ್ತದ ಮೆಟ್ರೋ ಲೇಔಟ್​ ಬಳಿಯಿರುವ ನೂತನ ಬಾರ್ ಮುಂದೆ ಏರಿಯಾ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. 2 ದಿನದ ಹಿಂದಷ್ಟೇ ಓಪನ್ ಆಗಿರುವ ಬಾರ್​​ಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಬಾರ್ ಬಾಗಿಲು ತೆಗೆಯುವ ಮುನ್ನವೇ ಸ್ಥಳೀಯರು ಬಾರ್ ಮುಂದೆ ಜಮಾವಣೆಗೊಂಡಿದ್ದಾರೆ. ಸ್ಥಳೀಯ ನಿವಾಸಿಗಳ ಪ್ರತಿಭಟನೆ ಹಿನ್ನೆಲೆ ಸ್ಥಳದಲ್ಲಿ ಪೊಲೀಸರಿಂದ ಭದ್ರತೆ ನಿಯೋಜಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸ್ಥಳದಲ್ಲಿ ಸಂಚಾರ ಸ್ಥಗಿತಗೊಳಿಸಿದ್ದಾರೆ. ಜನವಸತಿ ಪ್ರದೇಶದಲ್ಲಿ ಬಾರ್​ ಮುಚ್ಚಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಅಲ್ಲದೆ ಬಾರ್ ಮಾಲೀಕರ ಜೊತೆ ಅಬಕಾರಿ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಸ್ಥಳೀಯರು ಆರೋಪಿಸಿದ್ದಾರೆ. ಹಣದ ಹೊಳೆ ಹರಿಸಿದ್ದಕ್ಕೆ ನಮ್ಮ ವಿರೋಧವಿದ್ದರೂ ಅನುನತಿ ನೀಡಿದ್ದಾರೆ. ಬಿಬಿಎಂಪಿ, ಅಬಕಾರಿ ಇಲಾಖೆ, ಪೊಲೀಸರಿಗೆ ದೂರು ನೀಡಿದ್ರೂ ಕ್ರಮ ವಹಿಸಿಲ್ಲ. ಈಗಾಗ್ಲೇ ಈ ಏರಿಯಾದಲ್ಲಿ ಬಹಳಷ್ಟು ಬಾರ್​ಗಳಿವೆ. ಈಗ ಓಪನ್ ಮಾಡಿರುವ ಬಾರ್ & ಲಾಡ್ಜ್ ನ ಸುತ್ತ ಶಾಲೆಗಳು, ದೇವಸ್ಥಾನಗಳಿವೆ. ಅಬಕಾರಿ ಇಲಾಖೆ ಅನುಮತಿ ವಾಪಾಸ್ ಪಡೆಯಬೇಕು. ಬಾರ್ ಗೆ ಬೀಗ ಹಾಕಿ ಸೀಲ್ ಹಾಕುವವರೆಗೂ ನಾವು ಸುಮ್ಮನಿರೊಲ್ಲ. ಪ್ರಭಾವ ಬಳಸಿ ಬಾರ್ ಓಪನ್ ಮಾಡಿದ್ದಾರೆಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ಗಂಡ, ಮಕ್ಕಳು ದುಡಿದ ಹಣವನ್ನೆಲ್ಲಾ ಬಾರ್​ಗೆ ಸುರಿಯುತ್ತಿದ್ದಾರೆ. ಹೆಂಡತಿ, ಮಕ್ಕಳು, ಅಕ್ಕ ತಂಗಿಯರು ಬೀದಿ ಪಾಲಾಗುತ್ತಿದ್ದಾರೆ. ಹೀಗಾಗಿ ನಮ್ಮ ಏರಿಯಾದಲ್ಲಿ ಬಾರ್​ ಬಾಗಿಲು ತೆರೆಯುವುದೇ ಬೇಡ. ನೂತನ ಬಾರ್​ಗೆ ಬೀಗಮುದ್ರೆ ಹಾಕುವವರೆಗೆ ಧರಣಿ ಹಿಂಪಡೆಯಲ್ಲ ಎಂದು ಸ್ಥಳೀಯರು ಖಡಕ್​ ಆಗಿ ತಮ್ಮ ನಿಲುವನ್ನು ತಿಳಿಸಿದ್ದಾರೆ. bng bar protest

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ