AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಬಾವಿಯಲ್ಲಿ ಬಾರ್ ಓಪನ್ ಆಗಿ ಎರಡೇ ದಿನವಾಯ್ತು! ಸ್ಥಳೀಯರಿಂದ ಪ್ರತಿಭಟನೆ, ಬಾರ್​ಗೆ ಬೀಗಮುದ್ರೆ ಆಗ್ರಹಿಸಿ ಧರಣಿ

2 ದಿನದ ಹಿಂದಷ್ಟೇ ಓಪನ್ ಆಗಿರುವ ಬಾರ್​​ಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಬಾರ್ ಬಾಗಿಲು ತೆಗೆಯುವ ಮುನ್ನವೇ ಸ್ಥಳೀಯರು ಬಾರ್ ಮುಂದೆ ಜಮಾವಣೆಗೊಂಡಿದ್ದಾರೆ.

ನಾಗರಬಾವಿಯಲ್ಲಿ ಬಾರ್ ಓಪನ್ ಆಗಿ ಎರಡೇ ದಿನವಾಯ್ತು! ಸ್ಥಳೀಯರಿಂದ ಪ್ರತಿಭಟನೆ, ಬಾರ್​ಗೆ ಬೀಗಮುದ್ರೆ ಆಗ್ರಹಿಸಿ ಧರಣಿ
ಬಾರ್​ಗೆ ಬೀಗಮುದ್ರೆ ಆಗ್ರಹಿಸಿ ಧರಣಿ
TV9 Web
| Edited By: ಆಯೇಷಾ ಬಾನು|

Updated on: Jan 18, 2023 | 12:43 PM

Share

ಬೆಂಗಳೂರು: ನಗರದ ನಾಗರಬಾವಿ ವೃತ್ತದ ಮೆಟ್ರೋ ಲೇಔಟ್​ ಬಳಿಯಿರುವ ನೂತನ ಬಾರ್ ಮುಂದೆ ಏರಿಯಾ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. 2 ದಿನದ ಹಿಂದಷ್ಟೇ ಓಪನ್ ಆಗಿರುವ ಬಾರ್​​ಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಬಾರ್ ಬಾಗಿಲು ತೆಗೆಯುವ ಮುನ್ನವೇ ಸ್ಥಳೀಯರು ಬಾರ್ ಮುಂದೆ ಜಮಾವಣೆಗೊಂಡಿದ್ದಾರೆ. ಸ್ಥಳೀಯ ನಿವಾಸಿಗಳ ಪ್ರತಿಭಟನೆ ಹಿನ್ನೆಲೆ ಸ್ಥಳದಲ್ಲಿ ಪೊಲೀಸರಿಂದ ಭದ್ರತೆ ನಿಯೋಜಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸ್ಥಳದಲ್ಲಿ ಸಂಚಾರ ಸ್ಥಗಿತಗೊಳಿಸಿದ್ದಾರೆ. ಜನವಸತಿ ಪ್ರದೇಶದಲ್ಲಿ ಬಾರ್​ ಮುಚ್ಚಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಅಲ್ಲದೆ ಬಾರ್ ಮಾಲೀಕರ ಜೊತೆ ಅಬಕಾರಿ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಸ್ಥಳೀಯರು ಆರೋಪಿಸಿದ್ದಾರೆ. ಹಣದ ಹೊಳೆ ಹರಿಸಿದ್ದಕ್ಕೆ ನಮ್ಮ ವಿರೋಧವಿದ್ದರೂ ಅನುನತಿ ನೀಡಿದ್ದಾರೆ. ಬಿಬಿಎಂಪಿ, ಅಬಕಾರಿ ಇಲಾಖೆ, ಪೊಲೀಸರಿಗೆ ದೂರು ನೀಡಿದ್ರೂ ಕ್ರಮ ವಹಿಸಿಲ್ಲ. ಈಗಾಗ್ಲೇ ಈ ಏರಿಯಾದಲ್ಲಿ ಬಹಳಷ್ಟು ಬಾರ್​ಗಳಿವೆ. ಈಗ ಓಪನ್ ಮಾಡಿರುವ ಬಾರ್ & ಲಾಡ್ಜ್ ನ ಸುತ್ತ ಶಾಲೆಗಳು, ದೇವಸ್ಥಾನಗಳಿವೆ. ಅಬಕಾರಿ ಇಲಾಖೆ ಅನುಮತಿ ವಾಪಾಸ್ ಪಡೆಯಬೇಕು. ಬಾರ್ ಗೆ ಬೀಗ ಹಾಕಿ ಸೀಲ್ ಹಾಕುವವರೆಗೂ ನಾವು ಸುಮ್ಮನಿರೊಲ್ಲ. ಪ್ರಭಾವ ಬಳಸಿ ಬಾರ್ ಓಪನ್ ಮಾಡಿದ್ದಾರೆಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ಗಂಡ, ಮಕ್ಕಳು ದುಡಿದ ಹಣವನ್ನೆಲ್ಲಾ ಬಾರ್​ಗೆ ಸುರಿಯುತ್ತಿದ್ದಾರೆ. ಹೆಂಡತಿ, ಮಕ್ಕಳು, ಅಕ್ಕ ತಂಗಿಯರು ಬೀದಿ ಪಾಲಾಗುತ್ತಿದ್ದಾರೆ. ಹೀಗಾಗಿ ನಮ್ಮ ಏರಿಯಾದಲ್ಲಿ ಬಾರ್​ ಬಾಗಿಲು ತೆರೆಯುವುದೇ ಬೇಡ. ನೂತನ ಬಾರ್​ಗೆ ಬೀಗಮುದ್ರೆ ಹಾಕುವವರೆಗೆ ಧರಣಿ ಹಿಂಪಡೆಯಲ್ಲ ಎಂದು ಸ್ಥಳೀಯರು ಖಡಕ್​ ಆಗಿ ತಮ್ಮ ನಿಲುವನ್ನು ತಿಳಿಸಿದ್ದಾರೆ. bng bar protest

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು