AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಬಾವಿಯಲ್ಲಿ ಬಾರ್ ಓಪನ್ ಆಗಿ ಎರಡೇ ದಿನವಾಯ್ತು! ಸ್ಥಳೀಯರಿಂದ ಪ್ರತಿಭಟನೆ, ಬಾರ್​ಗೆ ಬೀಗಮುದ್ರೆ ಆಗ್ರಹಿಸಿ ಧರಣಿ

2 ದಿನದ ಹಿಂದಷ್ಟೇ ಓಪನ್ ಆಗಿರುವ ಬಾರ್​​ಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಬಾರ್ ಬಾಗಿಲು ತೆಗೆಯುವ ಮುನ್ನವೇ ಸ್ಥಳೀಯರು ಬಾರ್ ಮುಂದೆ ಜಮಾವಣೆಗೊಂಡಿದ್ದಾರೆ.

ನಾಗರಬಾವಿಯಲ್ಲಿ ಬಾರ್ ಓಪನ್ ಆಗಿ ಎರಡೇ ದಿನವಾಯ್ತು! ಸ್ಥಳೀಯರಿಂದ ಪ್ರತಿಭಟನೆ, ಬಾರ್​ಗೆ ಬೀಗಮುದ್ರೆ ಆಗ್ರಹಿಸಿ ಧರಣಿ
ಬಾರ್​ಗೆ ಬೀಗಮುದ್ರೆ ಆಗ್ರಹಿಸಿ ಧರಣಿ
TV9 Web
| Edited By: |

Updated on: Jan 18, 2023 | 12:43 PM

Share

ಬೆಂಗಳೂರು: ನಗರದ ನಾಗರಬಾವಿ ವೃತ್ತದ ಮೆಟ್ರೋ ಲೇಔಟ್​ ಬಳಿಯಿರುವ ನೂತನ ಬಾರ್ ಮುಂದೆ ಏರಿಯಾ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. 2 ದಿನದ ಹಿಂದಷ್ಟೇ ಓಪನ್ ಆಗಿರುವ ಬಾರ್​​ಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಬಾರ್ ಬಾಗಿಲು ತೆಗೆಯುವ ಮುನ್ನವೇ ಸ್ಥಳೀಯರು ಬಾರ್ ಮುಂದೆ ಜಮಾವಣೆಗೊಂಡಿದ್ದಾರೆ. ಸ್ಥಳೀಯ ನಿವಾಸಿಗಳ ಪ್ರತಿಭಟನೆ ಹಿನ್ನೆಲೆ ಸ್ಥಳದಲ್ಲಿ ಪೊಲೀಸರಿಂದ ಭದ್ರತೆ ನಿಯೋಜಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸ್ಥಳದಲ್ಲಿ ಸಂಚಾರ ಸ್ಥಗಿತಗೊಳಿಸಿದ್ದಾರೆ. ಜನವಸತಿ ಪ್ರದೇಶದಲ್ಲಿ ಬಾರ್​ ಮುಚ್ಚಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಅಲ್ಲದೆ ಬಾರ್ ಮಾಲೀಕರ ಜೊತೆ ಅಬಕಾರಿ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಸ್ಥಳೀಯರು ಆರೋಪಿಸಿದ್ದಾರೆ. ಹಣದ ಹೊಳೆ ಹರಿಸಿದ್ದಕ್ಕೆ ನಮ್ಮ ವಿರೋಧವಿದ್ದರೂ ಅನುನತಿ ನೀಡಿದ್ದಾರೆ. ಬಿಬಿಎಂಪಿ, ಅಬಕಾರಿ ಇಲಾಖೆ, ಪೊಲೀಸರಿಗೆ ದೂರು ನೀಡಿದ್ರೂ ಕ್ರಮ ವಹಿಸಿಲ್ಲ. ಈಗಾಗ್ಲೇ ಈ ಏರಿಯಾದಲ್ಲಿ ಬಹಳಷ್ಟು ಬಾರ್​ಗಳಿವೆ. ಈಗ ಓಪನ್ ಮಾಡಿರುವ ಬಾರ್ & ಲಾಡ್ಜ್ ನ ಸುತ್ತ ಶಾಲೆಗಳು, ದೇವಸ್ಥಾನಗಳಿವೆ. ಅಬಕಾರಿ ಇಲಾಖೆ ಅನುಮತಿ ವಾಪಾಸ್ ಪಡೆಯಬೇಕು. ಬಾರ್ ಗೆ ಬೀಗ ಹಾಕಿ ಸೀಲ್ ಹಾಕುವವರೆಗೂ ನಾವು ಸುಮ್ಮನಿರೊಲ್ಲ. ಪ್ರಭಾವ ಬಳಸಿ ಬಾರ್ ಓಪನ್ ಮಾಡಿದ್ದಾರೆಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ಗಂಡ, ಮಕ್ಕಳು ದುಡಿದ ಹಣವನ್ನೆಲ್ಲಾ ಬಾರ್​ಗೆ ಸುರಿಯುತ್ತಿದ್ದಾರೆ. ಹೆಂಡತಿ, ಮಕ್ಕಳು, ಅಕ್ಕ ತಂಗಿಯರು ಬೀದಿ ಪಾಲಾಗುತ್ತಿದ್ದಾರೆ. ಹೀಗಾಗಿ ನಮ್ಮ ಏರಿಯಾದಲ್ಲಿ ಬಾರ್​ ಬಾಗಿಲು ತೆರೆಯುವುದೇ ಬೇಡ. ನೂತನ ಬಾರ್​ಗೆ ಬೀಗಮುದ್ರೆ ಹಾಕುವವರೆಗೆ ಧರಣಿ ಹಿಂಪಡೆಯಲ್ಲ ಎಂದು ಸ್ಥಳೀಯರು ಖಡಕ್​ ಆಗಿ ತಮ್ಮ ನಿಲುವನ್ನು ತಿಳಿಸಿದ್ದಾರೆ. bng bar protest

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ