AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ; ನಾಗಸಂದ್ರ ಟು ಮಾದಾವರ ಮೆಟ್ರೋ ಟ್ರಯಲ್ ರನ್ ಆರಂಭ

ನಾಗಸಂದ್ರ - ಮಾದಾವರ ಮೆಟ್ರೋ ಮಾರ್ಗದಲ್ಲಿ ಸೆಪ್ಟೆಂಬರ್ ಕೊನೆಯ ವಾರ ಅಥವಾ ಅಕ್ಟೋಬರ್ ಮೊದಲ ವಾರ ಸಂಚಾರ ಆರಂಭವಾಗುವ ಸಾಧ್ಯತೆ ಇದೆ. ಈಗಾಗಲೇ BMRCL ನಿಂದ‌ ಮೊದಲ ಟ್ರಯಲ್ ರನ್ ಆರಂಭವಾಗಿದೆ. ಐದು ವರ್ಷಗಳಿಂದ ಮೆಟ್ರೋಗಾಗಿ ಕಾಯುತ್ತಿದ್ದ ಈ ಭಾಗದ ಜನರಿಗೆ ಸಿಹಿ ಸುದ್ದಿ ಸಿಕ್ಕಿದೆ.

ಕಿರಣ್​ ಸೂರ್ಯ
| Edited By: ಆಯೇಷಾ ಬಾನು|

Updated on:Aug 18, 2024 | 2:53 PM

Share

ಬೆಂಗಳೂರು, ಆಗಸ್ಟ್​.18: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಮತ್ತೊಂದು ಗುಡ್‌ ನ್ಯೂಸ್‌. ನಾಗಸಂದ್ರ ಟು ಮಾದಾವರ ಮೆಟ್ರೋ ಟ್ರಯಲ್ ರನ್ ಆರಂಭವಾಗಿದೆ. ನಾಗಸಂದ್ರ ಹಾಗೂ ಮಾದಾವರದ (Nagasandra to Madavara) ನಡುವಿನ 3.7 ಕಿಮೀ ಅಂತರದ ಮೆಟ್ರೋ ಮಾರ್ಗ ಪೂರ್ಣಗೊಂಡಿದೆ. 600 ಕೋಟಿ ವೆಚ್ಚದಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಈಗಾಗಲೇ BMRCL ನಿಂದ‌ ಮೊದಲ ಟ್ರಯಲ್ ರನ್ ಆರಂಭವಾಗಿದೆ. ಐದು ವರ್ಷಗಳಿಂದ ಮೆಟ್ರೋಗಾಗಿ ಕಾಯುತ್ತಿದ್ದ ಈ ಭಾಗದ ಜನರಿಗೆ ಸಿಹಿ ಸುದ್ದಿ ಸಿಕ್ಕಿದೆ.

ನಾಗಸಂದ್ರ – ಮಾದಾವರ ಮೆಟ್ರೋ ಮಾರ್ಗದಲ್ಲಿ ಸೆಪ್ಟೆಂಬರ್ ಕೊನೆಯ ವಾರ ಅಥವಾ ಅಕ್ಟೋಬರ್ ಮೊದಲ ವಾರ ಸಂಚಾರ ಆರಂಭವಾಗುವ ಸಾಧ್ಯತೆ ಇದೆ. ಮಾದಾವರ ಮೆಟ್ರೋ ಸ್ಟೇಷನ್​​ನಿಂದ ನೆಲಮಂಗಲಕ್ಕೆ ಕೇವಲ ಆರು ಕಿಮೀ ಮಾತ್ರ ದೂರವಿದೆ. ಸಿಟಿಗೆ ಹೋಗಿ ಬರುವುದಕ್ಕೆ ಸುಲಭ ಆಗುತ್ತದೆ.

ಇದನ್ನೂ ಓದಿ: Viral Video: ಅತ್ಯಾಚಾರ ಎಸಗಲು ಮುಂದಾದ ಕಾಮಾಂಧನನ್ನು ಕೊಂಬಿನಿಂದ ತಿವಿದು ಬಿಸಾಕಿದ ಹಸು; ವಿಡಿಯೋ ವೈರಲ್

ನಾಗಸಂದ್ರದಿಂದ ಮಾದಾವರದ ನಡುವಿನ ಮಾರ್ಗದಲ್ಲಿ ಮೂರು ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಮಂಜುನಾಥನಗರ, ಚಿಕ್ಕಬಿದರಕಲ್ಲು ಮತ್ತು ಮಾದಾವರ. ಹಸಿರು ಮಾರ್ಗ ವಿಸ್ತರಣೆಯಿಂದ ನಗರದ ಪ್ರಮುಖ ಪ್ರದರ್ಶನ ಕೇಂದ್ರವಾದ ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ (BIEC) ಗೆ ಸಂಪರ್ಕವನ್ನು ಹೊಂದಿದೆ.

ಮಂಜುನಾಥನಗರ, ಚಿಕ್ಕಬಿದರಕಲ್ಲು, ಮಾದಾವರ, ತುಮಕೂರು ರಸ್ತೆ, ಅಂಚೆಪಾಳ್ಯ, ಜಿಂದಾಲ್ ನಗರದ ನಾಗರಿಕರು ಮೆಟ್ರೋದಲ್ಲಿ ಪ್ರಯಾಣಿಸಲು ನಾಗಸಂದ್ರ ಮೆಟ್ರೊ ನಿಲ್ದಾಣಕ್ಕೆ ಬರಬೇಕಾಗಿತ್ತು, ಈಗ ಈ ಮಾರ್ಗ ಸಂಪೂರ್ಣವಾದ ಬಳಿಕ ಐದು ಕಿಲೋಮೀಟರ್‌ಗಳಷ್ಟು ಪ್ರಯಾಣಿಸುವುದು ತಪ್ಪಲಿದೆ.

ನಾಗಸಂದ್ರ-ಮಾದಾವರದ ನಡುವಿನ ಮೂರು ಕಿ.ಮೀ. ಮೆಟ್ರೋ ಕಾಮಗಾರಿ 2017 ರಲ್ಲಿ ಪ್ರಾರಂಭವಾಯಿತು. 2019 ರ ಮಧ್ಯದ ವೇಳೆಗೆ ಕಾಮಗಾರಿ ಮುಗಿಸುವ ಗುರಿ ಹೊಂದಿತ್ತಾದರೂ, ಭೂಸ್ವಾಧೀನದಲ್ಲಿ ವಿಳಂಬವಾದ ಕಾರಣ ಕಾಮಗಾರಿ ವಿಳಂಬವಾಗುತ್ತಲೇ ಸಾಗಿತು. ಭೂಸ್ವಾಧೀನ ಸಮಸ್ಯೆಗಳು, ವಿಶೇಷವಾಗಿ ನೈಸ್‌ ರಸ್ತೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿನ ವಿಳಂಬ ಮತ್ತು ಕೋವಿಡ್ ಸಾಂಕ್ರಾಮಿಕ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಕಾರಣಗಳಾಗಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:38 pm, Sun, 18 August 24

Follow Us
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ