AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ; ನಾಗಸಂದ್ರ ಟು ಮಾದಾವರ ಮೆಟ್ರೋ ಟ್ರಯಲ್ ರನ್ ಆರಂಭ

ನಾಗಸಂದ್ರ - ಮಾದಾವರ ಮೆಟ್ರೋ ಮಾರ್ಗದಲ್ಲಿ ಸೆಪ್ಟೆಂಬರ್ ಕೊನೆಯ ವಾರ ಅಥವಾ ಅಕ್ಟೋಬರ್ ಮೊದಲ ವಾರ ಸಂಚಾರ ಆರಂಭವಾಗುವ ಸಾಧ್ಯತೆ ಇದೆ. ಈಗಾಗಲೇ BMRCL ನಿಂದ‌ ಮೊದಲ ಟ್ರಯಲ್ ರನ್ ಆರಂಭವಾಗಿದೆ. ಐದು ವರ್ಷಗಳಿಂದ ಮೆಟ್ರೋಗಾಗಿ ಕಾಯುತ್ತಿದ್ದ ಈ ಭಾಗದ ಜನರಿಗೆ ಸಿಹಿ ಸುದ್ದಿ ಸಿಕ್ಕಿದೆ.

Kiran Surya
| Edited By: |

Updated on:Aug 18, 2024 | 2:53 PM

Share

ಬೆಂಗಳೂರು, ಆಗಸ್ಟ್​.18: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಮತ್ತೊಂದು ಗುಡ್‌ ನ್ಯೂಸ್‌. ನಾಗಸಂದ್ರ ಟು ಮಾದಾವರ ಮೆಟ್ರೋ ಟ್ರಯಲ್ ರನ್ ಆರಂಭವಾಗಿದೆ. ನಾಗಸಂದ್ರ ಹಾಗೂ ಮಾದಾವರದ (Nagasandra to Madavara) ನಡುವಿನ 3.7 ಕಿಮೀ ಅಂತರದ ಮೆಟ್ರೋ ಮಾರ್ಗ ಪೂರ್ಣಗೊಂಡಿದೆ. 600 ಕೋಟಿ ವೆಚ್ಚದಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಈಗಾಗಲೇ BMRCL ನಿಂದ‌ ಮೊದಲ ಟ್ರಯಲ್ ರನ್ ಆರಂಭವಾಗಿದೆ. ಐದು ವರ್ಷಗಳಿಂದ ಮೆಟ್ರೋಗಾಗಿ ಕಾಯುತ್ತಿದ್ದ ಈ ಭಾಗದ ಜನರಿಗೆ ಸಿಹಿ ಸುದ್ದಿ ಸಿಕ್ಕಿದೆ.

ನಾಗಸಂದ್ರ – ಮಾದಾವರ ಮೆಟ್ರೋ ಮಾರ್ಗದಲ್ಲಿ ಸೆಪ್ಟೆಂಬರ್ ಕೊನೆಯ ವಾರ ಅಥವಾ ಅಕ್ಟೋಬರ್ ಮೊದಲ ವಾರ ಸಂಚಾರ ಆರಂಭವಾಗುವ ಸಾಧ್ಯತೆ ಇದೆ. ಮಾದಾವರ ಮೆಟ್ರೋ ಸ್ಟೇಷನ್​​ನಿಂದ ನೆಲಮಂಗಲಕ್ಕೆ ಕೇವಲ ಆರು ಕಿಮೀ ಮಾತ್ರ ದೂರವಿದೆ. ಸಿಟಿಗೆ ಹೋಗಿ ಬರುವುದಕ್ಕೆ ಸುಲಭ ಆಗುತ್ತದೆ.

ಇದನ್ನೂ ಓದಿ: Viral Video: ಅತ್ಯಾಚಾರ ಎಸಗಲು ಮುಂದಾದ ಕಾಮಾಂಧನನ್ನು ಕೊಂಬಿನಿಂದ ತಿವಿದು ಬಿಸಾಕಿದ ಹಸು; ವಿಡಿಯೋ ವೈರಲ್

ನಾಗಸಂದ್ರದಿಂದ ಮಾದಾವರದ ನಡುವಿನ ಮಾರ್ಗದಲ್ಲಿ ಮೂರು ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಮಂಜುನಾಥನಗರ, ಚಿಕ್ಕಬಿದರಕಲ್ಲು ಮತ್ತು ಮಾದಾವರ. ಹಸಿರು ಮಾರ್ಗ ವಿಸ್ತರಣೆಯಿಂದ ನಗರದ ಪ್ರಮುಖ ಪ್ರದರ್ಶನ ಕೇಂದ್ರವಾದ ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ (BIEC) ಗೆ ಸಂಪರ್ಕವನ್ನು ಹೊಂದಿದೆ.

ಮಂಜುನಾಥನಗರ, ಚಿಕ್ಕಬಿದರಕಲ್ಲು, ಮಾದಾವರ, ತುಮಕೂರು ರಸ್ತೆ, ಅಂಚೆಪಾಳ್ಯ, ಜಿಂದಾಲ್ ನಗರದ ನಾಗರಿಕರು ಮೆಟ್ರೋದಲ್ಲಿ ಪ್ರಯಾಣಿಸಲು ನಾಗಸಂದ್ರ ಮೆಟ್ರೊ ನಿಲ್ದಾಣಕ್ಕೆ ಬರಬೇಕಾಗಿತ್ತು, ಈಗ ಈ ಮಾರ್ಗ ಸಂಪೂರ್ಣವಾದ ಬಳಿಕ ಐದು ಕಿಲೋಮೀಟರ್‌ಗಳಷ್ಟು ಪ್ರಯಾಣಿಸುವುದು ತಪ್ಪಲಿದೆ.

ನಾಗಸಂದ್ರ-ಮಾದಾವರದ ನಡುವಿನ ಮೂರು ಕಿ.ಮೀ. ಮೆಟ್ರೋ ಕಾಮಗಾರಿ 2017 ರಲ್ಲಿ ಪ್ರಾರಂಭವಾಯಿತು. 2019 ರ ಮಧ್ಯದ ವೇಳೆಗೆ ಕಾಮಗಾರಿ ಮುಗಿಸುವ ಗುರಿ ಹೊಂದಿತ್ತಾದರೂ, ಭೂಸ್ವಾಧೀನದಲ್ಲಿ ವಿಳಂಬವಾದ ಕಾರಣ ಕಾಮಗಾರಿ ವಿಳಂಬವಾಗುತ್ತಲೇ ಸಾಗಿತು. ಭೂಸ್ವಾಧೀನ ಸಮಸ್ಯೆಗಳು, ವಿಶೇಷವಾಗಿ ನೈಸ್‌ ರಸ್ತೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿನ ವಿಳಂಬ ಮತ್ತು ಕೋವಿಡ್ ಸಾಂಕ್ರಾಮಿಕ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಕಾರಣಗಳಾಗಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:38 pm, Sun, 18 August 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್