AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಭಾರೀ ಮಳೆ: ಮೆಟ್ರೋ ತಡೆಗೋಡೆ ಕುಸಿತ, 6 ಕಾರು, 2 ಬೈಕ್ ಜಖಂ

ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಹಲವು ರಸ್ತೆಗಳು ಜಲಾವೃತವಾಗಿದ್ದು, ನಮ್ಮ ಮೆಟ್ರೋ ತಡೆಗೋಡೆ ಕುಸಿದಿದೆ,

ಬೆಂಗಳೂರಲ್ಲಿ ಭಾರೀ ಮಳೆ: ಮೆಟ್ರೋ ತಡೆಗೋಡೆ ಕುಸಿತ, 6 ಕಾರು, 2 ಬೈಕ್ ಜಖಂ
metro compound collapsed
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Oct 20, 2022 | 12:19 AM

Share

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ವರುಣಾರ್ಭಟ ಮುಂದುವರಿದಿದೆ. ಅವಾಂತರಗಳ ಸರಮಾಲೆಯೇ ಸೃಷ್ಟಿಯಾಗುತ್ತಿದ್ದು, ಇಂದು(ಅ.19) ಮೆಟ್ರೋ ಕಾಂಪೌಂಡ್ ಕುಸಿದಿದೆ. ಬೆಂಗಳೂರಿನ ಮಂತ್ರಿಮಾಲ್ ಸಮೀಪದ ಜೆಡಿಎಸ್ ಕೇಂದ್ರ ಕಚೇರಿ ಮುಂಭಾಗದ ಮೆಟ್ರೋ ತಡೆಗೋಡೆ ಕುಸಿದಿದ್ದು, ಕಾರು, ಬೈಕ್​ಗಳು ಜಖಂಗೊಂಡಿವೆ.

ತಡೆಗೋಡೆಯ ಪಕ್ಕದಲ್ಲಿ ಕಾರು ಹಾಗೂ ಬೈಕ್​ಗಳನ್ನು ನಿಲ್ಲಿಸಲಾಗಿತ್ತು. ಆದ್ರೆ, ಮೆಟ್ರೋ ತಡೆಗೋಡೆ ಕುಸಿತದಿಂದ 6 ಕಾರುಗಳು ಹಾಗೂ ಎರಡು ಬೈಕ್​ಗೆ ಹಾನಿಯಾಗಿದೆ. ಇದರಿಂದ ವಾಹನದ ಮಾಲೀಕರು ಕಂಗಾಲಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಬಹುತೇಕ ಬೆಂಗಳೂರಿನ ಎಲ್ಲಾ ಅಂಡರ್​​ಪಾಸ್​ಗಳಲಿ ನೀರು ತಂಬಿ ನಂದಿಯಂತಾಗಿವೆ. ಇನ್ನು ಚಿಕ್ಕಪೇಟೆ, ಸುಲ್ತಾನ್ ಪೇಟೆಯಲ್ಲಿ ಹಲವು ಅಂಗಡಿಗಳು ಜಲಾವೃತವಾಗಿ ವ್ಯಾಪಾರಿಗಳು ನಷ್ಟ ಅನುಭವಿಸುವಂತಾಗಿದೆ.

ವಿಲ್ಸನ್ ಗಾರ್ಡ್, ಶಾಂತಿನಗರ, ಶಿವಾನಂದ ಸರ್ಕಲ್ ಸೇರಿದಂತೆ ಹಲವು ಕಡೆಗಳಲ್ಲಿ ಧಾರಾಕಾರ ಮಳೆಗೆ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಮೇಲೆ ಸುಮಾರು ಎರಡು ಅಡಿಯಷ್ಟು ನೀರು ನಿಂತಿದೆ. ಇದರಿಂದ ವಾಹನ ಸವಾರು ಪರದಾಡುವಂತಾಗಿದೆ.

ಇನ್ನೂ 5 ದಿನ ಭಾರೀ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಇನ್ನೂ ಮುಂದಿನ ಐದು ದಿನ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಲ್ಲೂ ಇನ್ನೂ 5 ದಿನ ಮಳೆಯ ಎಚ್ಚರಿಕೆ ನೀಡಲಾಗಿದೆ. ತಗ್ಗು ಪ್ರದೇಶ ಹಾಗೂ ರಾಜಾಕಾಲುವೆ ಅಕ್ಕಪಕ್ಕದಲ್ಲಿ ವಾಸಿಸುವ ಜನರು ಜಾಗ್ರತೆಯಿಂದ ಇರಬೇಕಿದೆ.

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?