AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸಚಿವರು ನಿರ್ದೇಶನ ನೀಡಿ ಒಂದು ತಿಂಗಳಾದರೂ ರಾತ್ರಿ 8 ಗಂಟೆವರೆಗೆ ಕಾರ್ಯ ನಿರ್ವಹಿಸದ ನಮ್ಮ ಕ್ಲಿನಿಕ್​

ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು 100 ನಮ್ಮ ಕ್ಲಿನಿಕ್​ಗಳನ್ನು ರಾತ್ರಿ 8 ಗಂಟೆಯವರೆಗೆ ಕಾರ್ಯ ನಿರ್ವಹಿಸುವಂತೆ ನಿರ್ದೇಶನ ನೀಡಿದ್ದಾರೆ. ಆದರೂ, ನಿರ್ದೇಶನ ಪಾಲನೆ ಆಗುತ್ತಿಲ್ಲ. ಆದರೆ, ಕ್ಲಿನಿಕ್‌ಗಳು ರಾತ್ರಿ 8 ಗಂಟೆಯವರೆಗೆ ಕಾರ್ಯನಿರ್ವಹಿಸಲು ರಾಜ್ಯ ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಬಿಬಿಎಂಪಿ ಮುಖ್ಯ ಆರೋಗ್ಯ ಕಚೇರಿ ಎಎಸ್ ಬಾಲಸುಂದರ್ ಹೇಳಿದರು.

ಆರೋಗ್ಯ ಸಚಿವರು ನಿರ್ದೇಶನ ನೀಡಿ ಒಂದು ತಿಂಗಳಾದರೂ ರಾತ್ರಿ 8 ಗಂಟೆವರೆಗೆ ಕಾರ್ಯ ನಿರ್ವಹಿಸದ ನಮ್ಮ ಕ್ಲಿನಿಕ್​
ಆರೋಗ್ಯ ಸಚಿವರು ನಿರ್ದೇಶನ ನೀಡಿದರೂ ರಾತ್ರಿ 8 ಗಂಟೆವರೆಗೆ ಕಾರ್ಯ ನಿರ್ವಹಿಸದ ನಮ್ಮ ಕ್ಲಿನಿಕ್​
Rakesh Nayak Manchi
|

Updated on:Sep 03, 2023 | 3:12 PM

Share

ಬೆಂಗಳೂರು, ಸೆ.3: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರು 100 ‘ನಮ್ಮ ಕ್ಲಿನಿಕ್​ಗಳನ್ನು (Namma Clinic) ರಾತ್ರಿ 8 ಗಂಟೆಯವರೆಗೆ ಕಾರ್ಯ ನಿರ್ವಹಣೆ ಮಾಡುವಂತೆ ನಿರ್ದೇಶನ ನೀಡಿ ಸುಮಾರು ಒಂದು ತಿಂಗಳು ಕಳೆದರೂ ಅದು ಇನ್ನೂ ಜಾರಿಯಾಗಿಲ್ಲ.

ಈ ಬಗ್ಗೆ ಮಾತನಾಡಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆರೋಗ್ಯ ಕಚೇರಿ ಎಎಸ್ ಬಾಲಸುಂದರ್, 100 ಕ್ಲಿನಿಕ್‌ಗಳು ರಾತ್ರಿ 8 ಗಂಟೆಯವರೆಗೆ ಕಾರ್ಯನಿರ್ವಹಿಸಲು ರಾಜ್ಯ ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಆರೋಗ್ಯ ವ್ಯವಸ್ಥೆಯಲ್ಲಿ ಪ್ರಸ್ತುತ ಮಾನವಶಕ್ತಿಯ ಕೊರತೆಯಿಂದಾಗಿ ನಗರದ ಎಲ್ಲಾ 243 ನಮ್ಮ ಕ್ಲೀನಿಕ್​ಗಳಲ್ಲಿ ಈ ವ್ಯವಸ್ಥೆಯನ್ನು ವಿಸ್ತರಿಸಲು ಕಷ್ಟವಾಗುತ್ತದೆ ಎಂದು ಹೇಳಿದರು.

ಪ್ರಸ್ತುತ ‘ನಮ್ಮ ಕ್ಲಿನಿಕ್​ಗಳು’ ಬೆಳಿಗ್ಗೆ 9 ರಿಂದ ಸಂಜೆ 4 ರ ನಡುವೆ ಕಾರ್ಯನಿರ್ವಹಿಸುತ್ತಿವೆ ಮತ್ತು ನಗರದ ಎಲ್ಲಾ 243 ಚಿಕಿತ್ಸಾಲಯಗಳನ್ನು ರಾತ್ರಿ 8 ರವರೆಗೆ ಕಾರ್ಯನಿರ್ವಹಿಸುವಂತೆ ಮಾಡಲು ನಮಗೆ ಪ್ರಸ್ತುತ ಇರುವ ಸಿಬ್ಬಂದಿಗಿಂತ ದುಪ್ಪಟ್ಟು ಅಗತ್ಯವಿದೆ ಎಂದು ಬಾಲಸುಂದರ್ ಹೇಳಿದರು.

ಇದನ್ನೂ ಓದಿ: Namma Clinics: ಬೆಂಗಳೂರಿನ ಕೆಲ ನಮ್ಮ ಕ್ಲೀನಿಕ್​​ಗಳ ಸಮಯ ಬದಲಿಸಲು ಚಿಂತನೆ: ದಿನೇಶ್ ಗುಂಡೂರಾವ್

ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಾ. ಕೆವಿ ತ್ರಿಲೋಕ್ ಚಂದ್ರ ಅವರು ಹೊಸ ಸಮಯವನ್ನು ಜಾರಿಗೊಳಿಸಲು ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದರು. ಆಗಸ್ಟ್ 4 ರಂದು ದೆಹಲಿಯಲ್ಲಿ ಎಎಪಿ ನೇತೃತ್ವದ ಸರ್ಕಾರದ ‘ಮೊಹಲ್ಲಾ ಕ್ಲಿನಿಕ್’ಗೆ ಭೇಟಿ ನೀಡಿದ ನಂತರ ಆರೋಗ್ಯ ಸಚಿವರಿಂದ ಈ ನಿರ್ಧಾರ ಹೊರಬಿದ್ದಿದೆ ಎಂದರು.

ಮರುದಿನ ‘ನಮ್ಮ ಕ್ಲಿನಿಕ್’ಗಳ ಸಮಯವನ್ನು ವಿಸ್ತರಿಸುವ ಕುರಿತು ಅವರು ಘೋಷಣೆ ಮಾಡಿದ್ದರು. ‘ಮೊಹಲ್ಲಾ ಕ್ಲಿನಿಕ್’ಗಳನ್ನು ‘ಓವರ್ಹೈಪ್ಡ್’ ಎಂದೂ ಕರೆದಿದ್ದರು. 2015-16 ರಲ್ಲಿ ಪ್ರಾರಂಭವಾದ ‘ಮೊಹಲ್ಲಾ ಕ್ಲಿನಿಕ್’ಗಳಿಂದ ‘ನಮ್ಮ ಕ್ಲಿನಿಕ್​’ ಸ್ಫೂರ್ತಿ ಪಡೆದಿವೆ. ತಮ್ಮ ಪ್ರಕಟಣೆಯ ಸಮಯದಲ್ಲಿ ದಿನೇಶ್ ಗುಂಡೂರಾವ್ ಅವರು ಮಧ್ಯಾಹ್ನ 12 ರಿಂದ ರಾತ್ರಿ 8 ರವರೆಗೆ ಸಮಯವನ್ನು ಬದಲಾಯಿಸಲು ಶಿಫಾರಸು ಮಾಡಿದರು ಎಂದು ವಿವರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:10 pm, Sun, 3 September 23

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ