ಆರೋಗ್ಯ ಸಚಿವರು ನಿರ್ದೇಶನ ನೀಡಿ ಒಂದು ತಿಂಗಳಾದರೂ ರಾತ್ರಿ 8 ಗಂಟೆವರೆಗೆ ಕಾರ್ಯ ನಿರ್ವಹಿಸದ ನಮ್ಮ ಕ್ಲಿನಿಕ್​

ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು 100 ನಮ್ಮ ಕ್ಲಿನಿಕ್​ಗಳನ್ನು ರಾತ್ರಿ 8 ಗಂಟೆಯವರೆಗೆ ಕಾರ್ಯ ನಿರ್ವಹಿಸುವಂತೆ ನಿರ್ದೇಶನ ನೀಡಿದ್ದಾರೆ. ಆದರೂ, ನಿರ್ದೇಶನ ಪಾಲನೆ ಆಗುತ್ತಿಲ್ಲ. ಆದರೆ, ಕ್ಲಿನಿಕ್‌ಗಳು ರಾತ್ರಿ 8 ಗಂಟೆಯವರೆಗೆ ಕಾರ್ಯನಿರ್ವಹಿಸಲು ರಾಜ್ಯ ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಬಿಬಿಎಂಪಿ ಮುಖ್ಯ ಆರೋಗ್ಯ ಕಚೇರಿ ಎಎಸ್ ಬಾಲಸುಂದರ್ ಹೇಳಿದರು.

ಆರೋಗ್ಯ ಸಚಿವರು ನಿರ್ದೇಶನ ನೀಡಿ ಒಂದು ತಿಂಗಳಾದರೂ ರಾತ್ರಿ 8 ಗಂಟೆವರೆಗೆ ಕಾರ್ಯ ನಿರ್ವಹಿಸದ ನಮ್ಮ ಕ್ಲಿನಿಕ್​
ಆರೋಗ್ಯ ಸಚಿವರು ನಿರ್ದೇಶನ ನೀಡಿದರೂ ರಾತ್ರಿ 8 ಗಂಟೆವರೆಗೆ ಕಾರ್ಯ ನಿರ್ವಹಿಸದ ನಮ್ಮ ಕ್ಲಿನಿಕ್​
Rakesh Nayak Manchi

Updated on: Sep 03, 2023 | 3:12 PM

ಬೆಂಗಳೂರು, ಸೆ.3: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರು 100 ‘ನಮ್ಮ ಕ್ಲಿನಿಕ್​ಗಳನ್ನು (Namma Clinic) ರಾತ್ರಿ 8 ಗಂಟೆಯವರೆಗೆ ಕಾರ್ಯ ನಿರ್ವಹಣೆ ಮಾಡುವಂತೆ ನಿರ್ದೇಶನ ನೀಡಿ ಸುಮಾರು ಒಂದು ತಿಂಗಳು ಕಳೆದರೂ ಅದು ಇನ್ನೂ ಜಾರಿಯಾಗಿಲ್ಲ.

ಈ ಬಗ್ಗೆ ಮಾತನಾಡಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆರೋಗ್ಯ ಕಚೇರಿ ಎಎಸ್ ಬಾಲಸುಂದರ್, 100 ಕ್ಲಿನಿಕ್‌ಗಳು ರಾತ್ರಿ 8 ಗಂಟೆಯವರೆಗೆ ಕಾರ್ಯನಿರ್ವಹಿಸಲು ರಾಜ್ಯ ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಆರೋಗ್ಯ ವ್ಯವಸ್ಥೆಯಲ್ಲಿ ಪ್ರಸ್ತುತ ಮಾನವಶಕ್ತಿಯ ಕೊರತೆಯಿಂದಾಗಿ ನಗರದ ಎಲ್ಲಾ 243 ನಮ್ಮ ಕ್ಲೀನಿಕ್​ಗಳಲ್ಲಿ ಈ ವ್ಯವಸ್ಥೆಯನ್ನು ವಿಸ್ತರಿಸಲು ಕಷ್ಟವಾಗುತ್ತದೆ ಎಂದು ಹೇಳಿದರು.

ಪ್ರಸ್ತುತ ‘ನಮ್ಮ ಕ್ಲಿನಿಕ್​ಗಳು’ ಬೆಳಿಗ್ಗೆ 9 ರಿಂದ ಸಂಜೆ 4 ರ ನಡುವೆ ಕಾರ್ಯನಿರ್ವಹಿಸುತ್ತಿವೆ ಮತ್ತು ನಗರದ ಎಲ್ಲಾ 243 ಚಿಕಿತ್ಸಾಲಯಗಳನ್ನು ರಾತ್ರಿ 8 ರವರೆಗೆ ಕಾರ್ಯನಿರ್ವಹಿಸುವಂತೆ ಮಾಡಲು ನಮಗೆ ಪ್ರಸ್ತುತ ಇರುವ ಸಿಬ್ಬಂದಿಗಿಂತ ದುಪ್ಪಟ್ಟು ಅಗತ್ಯವಿದೆ ಎಂದು ಬಾಲಸುಂದರ್ ಹೇಳಿದರು.

ಇದನ್ನೂ ಓದಿ: Namma Clinics: ಬೆಂಗಳೂರಿನ ಕೆಲ ನಮ್ಮ ಕ್ಲೀನಿಕ್​​ಗಳ ಸಮಯ ಬದಲಿಸಲು ಚಿಂತನೆ: ದಿನೇಶ್ ಗುಂಡೂರಾವ್

ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಾ. ಕೆವಿ ತ್ರಿಲೋಕ್ ಚಂದ್ರ ಅವರು ಹೊಸ ಸಮಯವನ್ನು ಜಾರಿಗೊಳಿಸಲು ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದರು. ಆಗಸ್ಟ್ 4 ರಂದು ದೆಹಲಿಯಲ್ಲಿ ಎಎಪಿ ನೇತೃತ್ವದ ಸರ್ಕಾರದ ‘ಮೊಹಲ್ಲಾ ಕ್ಲಿನಿಕ್’ಗೆ ಭೇಟಿ ನೀಡಿದ ನಂತರ ಆರೋಗ್ಯ ಸಚಿವರಿಂದ ಈ ನಿರ್ಧಾರ ಹೊರಬಿದ್ದಿದೆ ಎಂದರು.

ಮರುದಿನ ‘ನಮ್ಮ ಕ್ಲಿನಿಕ್’ಗಳ ಸಮಯವನ್ನು ವಿಸ್ತರಿಸುವ ಕುರಿತು ಅವರು ಘೋಷಣೆ ಮಾಡಿದ್ದರು. ‘ಮೊಹಲ್ಲಾ ಕ್ಲಿನಿಕ್’ಗಳನ್ನು ‘ಓವರ್ಹೈಪ್ಡ್’ ಎಂದೂ ಕರೆದಿದ್ದರು. 2015-16 ರಲ್ಲಿ ಪ್ರಾರಂಭವಾದ ‘ಮೊಹಲ್ಲಾ ಕ್ಲಿನಿಕ್’ಗಳಿಂದ ‘ನಮ್ಮ ಕ್ಲಿನಿಕ್​’ ಸ್ಫೂರ್ತಿ ಪಡೆದಿವೆ. ತಮ್ಮ ಪ್ರಕಟಣೆಯ ಸಮಯದಲ್ಲಿ ದಿನೇಶ್ ಗುಂಡೂರಾವ್ ಅವರು ಮಧ್ಯಾಹ್ನ 12 ರಿಂದ ರಾತ್ರಿ 8 ರವರೆಗೆ ಸಮಯವನ್ನು ಬದಲಾಯಿಸಲು ಶಿಫಾರಸು ಮಾಡಿದರು ಎಂದು ವಿವರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:10 pm, Sun, 3 September 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us