Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Metro: ನಮ್ಮ ಮೆಟ್ರೋ ರೈಲು ಸಂಚಾರಕ್ಕೆ 10 ವರ್ಷ ಪೂರ್ಣ! ಪ್ರಯಾಣಿಕರಿಗೆ ಕೃತಜ್ಞತೆ

Namma Metro: ಎಂ.ಜಿ. ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ಮೊದಲಿಗೆ ಮೆಟ್ರೋ ಸಂಚಾರ ಆರಂಭ ಆಗಿತ್ತು. 6 ಕಿ.ಮೀ. ಮಾರ್ಗದಲ್ಲಿ ಮೊದಲ ಬಾರಿಗೆ ಮೆಟ್ರೋ ಸಂಚರಿಸಿತ್ತು.

Bengaluru Metro: ನಮ್ಮ ಮೆಟ್ರೋ ರೈಲು ಸಂಚಾರಕ್ಕೆ 10 ವರ್ಷ ಪೂರ್ಣ! ಪ್ರಯಾಣಿಕರಿಗೆ ಕೃತಜ್ಞತೆ
ನಮ್ಮ ಮೆಟ್ರೋ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Oct 20, 2021 | 3:42 PM

ಬೆಂಗಳೂರು: ನಮ್ಮ ಮೆಟ್ರೋ (Namma Metro) ಸಂಚಾರಕ್ಕೆ 10 ವರ್ಷ ಪೂರ್ಣವಾಗಿದೆ. 2011 ರ ಅಕ್ಟೋಬರ್ 20ರಂದು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಕಾರ್ಯಾರಂಭವಾಗಿತ್ತು. ಅಂದು ಹಳಿಗೆ ಇಳಿದಿದ್ದ ನಮ್ಮ ಮೆಟ್ರೋ ರೈಲು ಇಂದಿಗೆ 10 ವರ್ಷಗಳನ್ನು ಪೂರೈಸಿಕೊಂಡಿದೆ. ಎಂ.ಜಿ. ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ಮೊದಲಿಗೆ ಮೆಟ್ರೋ ಸಂಚಾರ ಆರಂಭ ಆಗಿತ್ತು. 6 ಕಿ.ಮೀ. ಮಾರ್ಗದಲ್ಲಿ ಮೊದಲ ಬಾರಿಗೆ ಮೆಟ್ರೋ ಸಂಚರಿಸಿತ್ತು.

ನಮ್ಮ ಮೆಟ್ರೋಗೆ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೆಟ್ರೋ ಪ್ರಯಾಣಿಕರು, ಮೆಟ್ರೋಗೆ ಭೂಮಿ ನೀಡಿದವರಿಗೆ ಬಿಎಂಆರ್​ಸಿಎಲ್​ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್​ ಕೃತಜ್ಞತೆ ಸಮರ್ಪಣೆ ಮಾಡಿದ್ದಾರೆ. ಪ್ರಸ್ತುತ 56 ಕಿ.ಮೀ. ನಮ್ಮ ಮೆಟ್ರೋ ಸಂಚಾರ ನಡೆಸುತ್ತಿದೆ. ಇದನ್ನು 175 ಕಿ.ಮೀ.ಗೆ ವಿಸ್ತರಿಸಬೇಕೆಂಬುದು ನಮ್ಮ ಉದ್ದೇಶ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆಯಂತೆ 2024ರ ಡಿಸೆಂಬರ್​​ ವೇಳೆಗೆ ಈ ಮೆಟ್ರೋ ಕಾಮಗಾರಿ ಪೂರ್ಣ ಆಗಲಿದೆ. 175 ಕಿ.ಮೀ. ಪೂರ್ಣಗೊಳಿಸುವ ಗುರಿ ಹೊಂದಿದ್ದೇವೆ ಎಂದು ಬಿಎಂಆರ್​ಸಿಎಲ್​ ಎಂಡಿ ಅಂಜುಂ ಪರ್ವೇಜ್​ ಹೇಳಿದ್ದಾರೆ.

855 ಮೀಟರ್ ಸುರಂಗ ಕೊರೆದ ವಿಂದ್ಯಾ ಯಂತ್ರ ಅಕ್ಟೋಬರ್ 13 ರಂದು ನಮ್ಮ ಮೆಟ್ರೋ ಮತ್ತೊಂದು ಟಿಬಿಎಂ ಬ್ರೇಕ್​ ಥ್ರೂ ಪಡೆದುಕೊಂಡಿದೆ. ‘ವಿಂದ್ಯಾ’ ಯಂತ್ರ ಸುರಂಗ ಕೊರೆದು ಯಶಸ್ವಿಯಾಗಿ ಹೊರಬಂದಿದೆ. ಕಳೆದ ತಿಂಗಳು ಹೊರಬಂದಿದ್ದ ಟಿಬಿಎಂ ‘ಊರ್ಜಾ’ ಯಂತ್ರ, ಸುರಂಗ ಕೊರೆಯಲು ಯಶಸ್ವಿಯಾಗಿತ್ತು. ಅಕ್ಟೋಬರ್ 13 ರಂದು 2ನೇ ಯಂತ್ರ ವಿಂದ್ಯಾ ಸುರಂಗ ಕೊರೆದು ಯಶಸ್ವಿಯಾಗಿ ಹೊರಬಂದಿದೆ. ಕಂಟೋನ್ಮೆಂಟ್​ನಿಂದ ಶಿವಾಜಿನಗರದವರೆಗೆ ಸುರಂಗ ಮಾರ್ಗ ಕೊರೆಯಲಾಗಿದೆ. 855 ಮೀಟರ್​ ಸುರಂಗ ಕೊರೆದು ವಿಂದ್ಯಾ ಯಂತ್ರ ಹೊರಬಂದಿದೆ.

ನಮ್ಮ ಮೆಟ್ರೋ ಯೋಜನೆಯ ಎರಡನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ನೀಡಲಾಗಿದ್ದ 2025ರ ಗಡುವನ್ನು ಮಾರ್ಪಡಿಸಿ, 2024 ಕ್ಕೆ ನಿಗದಿ ಪಡಿಸುವಂತೆ ಹಾಗೂ ಇದಕ್ಕೆ ತಕ್ಕ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಮೊದಲು ಸೂಚನೆ ನೀಡಿದ್ದರು. ಇದು ಪೂರ್ಣಗೊಳ್ಳುತ್ತಿದ್ದಂತೆಯೇ ಮೂರನೇ ಹಂತದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.

ಇದನ್ನೂ ಓದಿ: ಬೆಂಗಳೂರು ಮೆಟ್ರೋ ರೈಲಿನಲ್ಲಿ ಬಾಲಕನ ಉಯ್ಯಾಲೆ ಆಟ; ವಿಡಿಯೋ ವೈರಲ್

ಇದನ್ನೂ ಓದಿ: ಮೆಟ್ರೋ ಕಾಮಗಾರಿ ನಡೆಯುತ್ತಿರುವ ಟ್ಯಾನರಿ ರಸ್ತೆಯಲ್ಲಿ 30 ಅಡಿ ಮಣ್ಣು ಕುಸಿತ, ಪರಿಹಾರ ಕೇಳಿದ ಜಾಗದ ಮಾಲೀಕ

Published On - 3:40 pm, Wed, 20 October 21