AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಮೆಟ್ರೋದಲ್ಲಿ ಸಿಕ್ಕ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್​, ಪ್ರಾಮಾಣಿಕತೆಗೆ ಮೆಚ್ಚುಗೆ

ಚಿನ್ನಕಂಡಾಕ್ಷಣ ಯಾರದ್ದಾದರೇನು ಎಂದು ತೆಗೆದುಕೊಂಡು ಹೋಗುವವರೇ ಹೆಚ್ಚು, ಅಂತಹ ಸಮಯದಲ್ಲಿ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್(Home Guards) ಪ್ರಾಮಾಣಿಕತೆಗೆ ಎಲ್ಲೆಡೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾದ ಹೊಸ ಶಾಖೆಯಲ್ಲಿ ಅಸೋಸಿಯೇಟ್​ ಆಗಿ ಕೆಲಸ ಮಾಡುತ್ತಿರುವ ದಿವ್ಯಾ ಪ್ರಿಯದರ್ಶಿನಿ ಎಂಬುವವರು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಮೆಟ್ರೋ ನಿಲ್ದಾಣದಿಂದ ಬೆನ್ನಿಗಾನಹಳ್ಳಿ ನಿಲ್ದಾಣಕ್ಕೆ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದರು.

Namma Metro: ಮೆಟ್ರೋದಲ್ಲಿ ಸಿಕ್ಕ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್​, ಪ್ರಾಮಾಣಿಕತೆಗೆ ಮೆಚ್ಚುಗೆ
ಹೋಂಗಾರ್ಡ್ಸ್​Image Credit source: Indian Express
ಕಿರಣ್​ ಸೂರ್ಯ
| Edited By: |

Updated on:Nov 29, 2023 | 11:20 AM

Share

ಚಿನ್ನಕಂಡಾಕ್ಷಣ ಯಾರದ್ದಾದರೇನು ಎಂದು ತೆಗೆದುಕೊಂಡು ಹೋಗುವವರೇ ಹೆಚ್ಚು, ಅಂತಹ ಸಮಯದಲ್ಲಿ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್(Home Guards) ಪ್ರಾಮಾಣಿಕತೆಗೆ ಎಲ್ಲೆಡೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾದ ಹೊಸ ಶಾಖೆಯಲ್ಲಿ ಅಸೋಸಿಯೇಟ್​ ಆಗಿ ಕೆಲಸ ಮಾಡುತ್ತಿರುವ ದಿವ್ಯಾ ಪ್ರಿಯದರ್ಶಿನಿ ಎಂಬುವವರು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಮೆಟ್ರೋ ನಿಲ್ದಾಣದಿಂದ ಬೆನ್ನಿಗಾನಹಳ್ಳಿ ನಿಲ್ದಾಣಕ್ಕೆ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದರು.

ಅಲ್ಲಿಂದ ತಮ್ಮ ಬ್ಯಾಂಕ್​ಗೆ ಹೋಗಿದ್ದಾರೆ, ಬೆನ್ನಿಗಾನಹಳ್ಳಿ ನಿಲ್ದಾಣದಿಂದ ಹೊರಡುವಾಗ ಉಂಗುರ ಇಲ್ಲದಿರುವುದು ಗೊತ್ತಾಗಿದೆ. ತಕ್ಷಣವೇ ಕಂಟ್ರೋಲ್ ರೂಂಗೆ ಕರೆ ಮಾಡಿ ಮಾಹಿತಿ ಕೊಟ್ಟಿದ್ದರು.

ಅಲ್ಲಿದ್ದ ಹೋಂಗಾರ್ಡ್ಸ್​ ಚಿನ್ನದ ಉಂಗುರ ಸಿಕ್ಕದ ತಕ್ಷಣ ಅದನ್ನು ಸಹಾಯಕ ಸುರಕ್ಷತಾ ಅಧಿಕಾರಿಗೆ ಒಪ್ಪಿಸಿದ್ದಾರೆ. ಸೋಮವಾರ ಸಂಜೆ 6.45ರ ಸುಮಾರಿಗೆ ಬೆನ್ನಿಗಾನಹಳ್ಳಿ ಮೆಟ್ರೋ ನಿಲ್ದಾಣದ 2ನೇ ಪ್ಲಾಟ್​ಫಾರ್ಮ್​ನಲ್ಲಿ ರೈಲು ನಿಂತಾಗ ರೈಲಿನ ಲೇಡಿಸ್ ಕೋಚ್ ಬಳಿ ಉಂಗುರು ಬಿದ್ದಿತ್ತು.

ಮತ್ತಷ್ಟು ಓದಿ: ನಮ್ಮ ಮೆಟ್ರೋ 3ನೇ ಹಂತ: ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದ ಬಿಎಂಆರ್​ಸಿಎಲ್

ಆ ಉಂಗುರವನ್ನು ಗಮನಿಸಿದ ಹೋಂಗಾರ್ಡ್‌ಗಳಾದ ಶಿಲ್ಪಾ ಜಿ ಆರ್ ಮತ್ತು ಈಶ್ವರಮ್ಮ ಅವರು ಬಿಎಂಆರ್​ಸಿಎಲ್ ಸಹಾಯಕ ಸುರಕ್ಷತಾ ಅಧಿಕಾರಿ ಕೆಎನ್​ ರಾಜಣ್ಣ ಅವರಿಗೆ ಹಸ್ತಾಂತರಿಸಿದ್ದಾರೆ.

ಇದೀಗ ಆ ಉಂಗುರವನ್ನು ದಿವ್ಯಾ ಅವರಿಗೆ ನೀಡಲಾಗಿದೆ, ಹೋಂ​ ಗಾರ್ಡ್ಸ್​ ಪ್ರಾಮಾಣಿಕತೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಉಂಗುರ ಸುಮಾರು 30 ಸಾವಿರ ರೂ.ನಷ್ಟು ಬೆಲೆಬಾಳುವಂಥದ್ದಾಗಿತ್ತು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:18 am, Wed, 29 November 23

Follow Us
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ