AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಮೆಟ್ರೋದಲ್ಲಿ ಸಿಕ್ಕ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್​, ಪ್ರಾಮಾಣಿಕತೆಗೆ ಮೆಚ್ಚುಗೆ

ಚಿನ್ನಕಂಡಾಕ್ಷಣ ಯಾರದ್ದಾದರೇನು ಎಂದು ತೆಗೆದುಕೊಂಡು ಹೋಗುವವರೇ ಹೆಚ್ಚು, ಅಂತಹ ಸಮಯದಲ್ಲಿ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್(Home Guards) ಪ್ರಾಮಾಣಿಕತೆಗೆ ಎಲ್ಲೆಡೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾದ ಹೊಸ ಶಾಖೆಯಲ್ಲಿ ಅಸೋಸಿಯೇಟ್​ ಆಗಿ ಕೆಲಸ ಮಾಡುತ್ತಿರುವ ದಿವ್ಯಾ ಪ್ರಿಯದರ್ಶಿನಿ ಎಂಬುವವರು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಮೆಟ್ರೋ ನಿಲ್ದಾಣದಿಂದ ಬೆನ್ನಿಗಾನಹಳ್ಳಿ ನಿಲ್ದಾಣಕ್ಕೆ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದರು.

Namma Metro: ಮೆಟ್ರೋದಲ್ಲಿ ಸಿಕ್ಕ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್​, ಪ್ರಾಮಾಣಿಕತೆಗೆ ಮೆಚ್ಚುಗೆ
ಹೋಂಗಾರ್ಡ್ಸ್​Image Credit source: Indian Express
ಕಿರಣ್​ ಸೂರ್ಯ
| Edited By: |

Updated on:Nov 29, 2023 | 11:20 AM

Share

ಚಿನ್ನಕಂಡಾಕ್ಷಣ ಯಾರದ್ದಾದರೇನು ಎಂದು ತೆಗೆದುಕೊಂಡು ಹೋಗುವವರೇ ಹೆಚ್ಚು, ಅಂತಹ ಸಮಯದಲ್ಲಿ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್(Home Guards) ಪ್ರಾಮಾಣಿಕತೆಗೆ ಎಲ್ಲೆಡೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾದ ಹೊಸ ಶಾಖೆಯಲ್ಲಿ ಅಸೋಸಿಯೇಟ್​ ಆಗಿ ಕೆಲಸ ಮಾಡುತ್ತಿರುವ ದಿವ್ಯಾ ಪ್ರಿಯದರ್ಶಿನಿ ಎಂಬುವವರು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಮೆಟ್ರೋ ನಿಲ್ದಾಣದಿಂದ ಬೆನ್ನಿಗಾನಹಳ್ಳಿ ನಿಲ್ದಾಣಕ್ಕೆ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದರು.

ಅಲ್ಲಿಂದ ತಮ್ಮ ಬ್ಯಾಂಕ್​ಗೆ ಹೋಗಿದ್ದಾರೆ, ಬೆನ್ನಿಗಾನಹಳ್ಳಿ ನಿಲ್ದಾಣದಿಂದ ಹೊರಡುವಾಗ ಉಂಗುರ ಇಲ್ಲದಿರುವುದು ಗೊತ್ತಾಗಿದೆ. ತಕ್ಷಣವೇ ಕಂಟ್ರೋಲ್ ರೂಂಗೆ ಕರೆ ಮಾಡಿ ಮಾಹಿತಿ ಕೊಟ್ಟಿದ್ದರು.

ಅಲ್ಲಿದ್ದ ಹೋಂಗಾರ್ಡ್ಸ್​ ಚಿನ್ನದ ಉಂಗುರ ಸಿಕ್ಕದ ತಕ್ಷಣ ಅದನ್ನು ಸಹಾಯಕ ಸುರಕ್ಷತಾ ಅಧಿಕಾರಿಗೆ ಒಪ್ಪಿಸಿದ್ದಾರೆ. ಸೋಮವಾರ ಸಂಜೆ 6.45ರ ಸುಮಾರಿಗೆ ಬೆನ್ನಿಗಾನಹಳ್ಳಿ ಮೆಟ್ರೋ ನಿಲ್ದಾಣದ 2ನೇ ಪ್ಲಾಟ್​ಫಾರ್ಮ್​ನಲ್ಲಿ ರೈಲು ನಿಂತಾಗ ರೈಲಿನ ಲೇಡಿಸ್ ಕೋಚ್ ಬಳಿ ಉಂಗುರು ಬಿದ್ದಿತ್ತು.

ಮತ್ತಷ್ಟು ಓದಿ: ನಮ್ಮ ಮೆಟ್ರೋ 3ನೇ ಹಂತ: ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದ ಬಿಎಂಆರ್​ಸಿಎಲ್

ಆ ಉಂಗುರವನ್ನು ಗಮನಿಸಿದ ಹೋಂಗಾರ್ಡ್‌ಗಳಾದ ಶಿಲ್ಪಾ ಜಿ ಆರ್ ಮತ್ತು ಈಶ್ವರಮ್ಮ ಅವರು ಬಿಎಂಆರ್​ಸಿಎಲ್ ಸಹಾಯಕ ಸುರಕ್ಷತಾ ಅಧಿಕಾರಿ ಕೆಎನ್​ ರಾಜಣ್ಣ ಅವರಿಗೆ ಹಸ್ತಾಂತರಿಸಿದ್ದಾರೆ.

ಇದೀಗ ಆ ಉಂಗುರವನ್ನು ದಿವ್ಯಾ ಅವರಿಗೆ ನೀಡಲಾಗಿದೆ, ಹೋಂ​ ಗಾರ್ಡ್ಸ್​ ಪ್ರಾಮಾಣಿಕತೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಉಂಗುರ ಸುಮಾರು 30 ಸಾವಿರ ರೂ.ನಷ್ಟು ಬೆಲೆಬಾಳುವಂಥದ್ದಾಗಿತ್ತು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:18 am, Wed, 29 November 23

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ