AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಮೆಟ್ರೋದಲ್ಲಿ ಸಿಕ್ಕ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್​, ಪ್ರಾಮಾಣಿಕತೆಗೆ ಮೆಚ್ಚುಗೆ

ಚಿನ್ನಕಂಡಾಕ್ಷಣ ಯಾರದ್ದಾದರೇನು ಎಂದು ತೆಗೆದುಕೊಂಡು ಹೋಗುವವರೇ ಹೆಚ್ಚು, ಅಂತಹ ಸಮಯದಲ್ಲಿ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್(Home Guards) ಪ್ರಾಮಾಣಿಕತೆಗೆ ಎಲ್ಲೆಡೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾದ ಹೊಸ ಶಾಖೆಯಲ್ಲಿ ಅಸೋಸಿಯೇಟ್​ ಆಗಿ ಕೆಲಸ ಮಾಡುತ್ತಿರುವ ದಿವ್ಯಾ ಪ್ರಿಯದರ್ಶಿನಿ ಎಂಬುವವರು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಮೆಟ್ರೋ ನಿಲ್ದಾಣದಿಂದ ಬೆನ್ನಿಗಾನಹಳ್ಳಿ ನಿಲ್ದಾಣಕ್ಕೆ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದರು.

Namma Metro: ಮೆಟ್ರೋದಲ್ಲಿ ಸಿಕ್ಕ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್​, ಪ್ರಾಮಾಣಿಕತೆಗೆ ಮೆಚ್ಚುಗೆ
ಹೋಂಗಾರ್ಡ್ಸ್​Image Credit source: Indian Express
Kiran Surya
| Edited By: |

Updated on:Nov 29, 2023 | 11:20 AM

Share

ಚಿನ್ನಕಂಡಾಕ್ಷಣ ಯಾರದ್ದಾದರೇನು ಎಂದು ತೆಗೆದುಕೊಂಡು ಹೋಗುವವರೇ ಹೆಚ್ಚು, ಅಂತಹ ಸಮಯದಲ್ಲಿ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್(Home Guards) ಪ್ರಾಮಾಣಿಕತೆಗೆ ಎಲ್ಲೆಡೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾದ ಹೊಸ ಶಾಖೆಯಲ್ಲಿ ಅಸೋಸಿಯೇಟ್​ ಆಗಿ ಕೆಲಸ ಮಾಡುತ್ತಿರುವ ದಿವ್ಯಾ ಪ್ರಿಯದರ್ಶಿನಿ ಎಂಬುವವರು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಮೆಟ್ರೋ ನಿಲ್ದಾಣದಿಂದ ಬೆನ್ನಿಗಾನಹಳ್ಳಿ ನಿಲ್ದಾಣಕ್ಕೆ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದರು.

ಅಲ್ಲಿಂದ ತಮ್ಮ ಬ್ಯಾಂಕ್​ಗೆ ಹೋಗಿದ್ದಾರೆ, ಬೆನ್ನಿಗಾನಹಳ್ಳಿ ನಿಲ್ದಾಣದಿಂದ ಹೊರಡುವಾಗ ಉಂಗುರ ಇಲ್ಲದಿರುವುದು ಗೊತ್ತಾಗಿದೆ. ತಕ್ಷಣವೇ ಕಂಟ್ರೋಲ್ ರೂಂಗೆ ಕರೆ ಮಾಡಿ ಮಾಹಿತಿ ಕೊಟ್ಟಿದ್ದರು.

ಅಲ್ಲಿದ್ದ ಹೋಂಗಾರ್ಡ್ಸ್​ ಚಿನ್ನದ ಉಂಗುರ ಸಿಕ್ಕದ ತಕ್ಷಣ ಅದನ್ನು ಸಹಾಯಕ ಸುರಕ್ಷತಾ ಅಧಿಕಾರಿಗೆ ಒಪ್ಪಿಸಿದ್ದಾರೆ. ಸೋಮವಾರ ಸಂಜೆ 6.45ರ ಸುಮಾರಿಗೆ ಬೆನ್ನಿಗಾನಹಳ್ಳಿ ಮೆಟ್ರೋ ನಿಲ್ದಾಣದ 2ನೇ ಪ್ಲಾಟ್​ಫಾರ್ಮ್​ನಲ್ಲಿ ರೈಲು ನಿಂತಾಗ ರೈಲಿನ ಲೇಡಿಸ್ ಕೋಚ್ ಬಳಿ ಉಂಗುರು ಬಿದ್ದಿತ್ತು.

ಮತ್ತಷ್ಟು ಓದಿ: ನಮ್ಮ ಮೆಟ್ರೋ 3ನೇ ಹಂತ: ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದ ಬಿಎಂಆರ್​ಸಿಎಲ್

ಆ ಉಂಗುರವನ್ನು ಗಮನಿಸಿದ ಹೋಂಗಾರ್ಡ್‌ಗಳಾದ ಶಿಲ್ಪಾ ಜಿ ಆರ್ ಮತ್ತು ಈಶ್ವರಮ್ಮ ಅವರು ಬಿಎಂಆರ್​ಸಿಎಲ್ ಸಹಾಯಕ ಸುರಕ್ಷತಾ ಅಧಿಕಾರಿ ಕೆಎನ್​ ರಾಜಣ್ಣ ಅವರಿಗೆ ಹಸ್ತಾಂತರಿಸಿದ್ದಾರೆ.

ಇದೀಗ ಆ ಉಂಗುರವನ್ನು ದಿವ್ಯಾ ಅವರಿಗೆ ನೀಡಲಾಗಿದೆ, ಹೋಂ​ ಗಾರ್ಡ್ಸ್​ ಪ್ರಾಮಾಣಿಕತೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಉಂಗುರ ಸುಮಾರು 30 ಸಾವಿರ ರೂ.ನಷ್ಟು ಬೆಲೆಬಾಳುವಂಥದ್ದಾಗಿತ್ತು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:18 am, Wed, 29 November 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ