AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ನೇಮಕಾತಿ ವಿರುದ್ಧ ರೈಲ್ವೆ ಸಚಿವರು-ಸಿಎಂಗೆ ದೂರು: ಆದರೆ ನಮ್ಮ ಮೆಟ್ರೋ ಎಂಡಿ ಅಂಜುಂ ಪರ್ವೇಜ್ ಹೇಳಿದ್ದೇನು?

ಮೆಟ್ರೋ ಎಂಡಿ ಅಂಜುಂ ಪರ್ವೇಜ್ ಅವರು ಸುಮಾರು 500 ಉದ್ಯೋಗಿಗಳನ್ನು ಅಕ್ರಮವಾಗಿ ನೇಮಕ ಮಾಡಿದ್ದಾರೆ. ಸಂದರ್ಶನವಿಲ್ಲದೆ ನೇಮಕಾತಿ ಮಾಡಿದ್ದಾರೆ ಎಂದು ಸೂರ್ಯ ನಾರಾಯಣ ಮೂರ್ತಿ ಆರೋಪಿಸಿದ್ದಾರೆ.

ಅಕ್ರಮ ನೇಮಕಾತಿ ವಿರುದ್ಧ ರೈಲ್ವೆ ಸಚಿವರು-ಸಿಎಂಗೆ ದೂರು: ಆದರೆ ನಮ್ಮ ಮೆಟ್ರೋ ಎಂಡಿ ಅಂಜುಂ ಪರ್ವೇಜ್ ಹೇಳಿದ್ದೇನು?
ಮೆಟ್ರೋ ಎಂಡಿ ಅಂಜುಂ ಪರ್ವೇಜ್Image Credit source: deccanherald
TV9 Web
| Edited By: |

Updated on:Jan 07, 2023 | 12:02 PM

Share

ಬೆಂಗಳೂರು: ಮೆಟ್ರೋ ಎಂಡಿ(Anjum Parvez) ವಿರುದ್ಧ ಬಿಎಂಆರ್​ಸಿಎಲ್(BMRCL) ಎಂಪ್ಲಾಯಿಸ್ ಯೂನಿಯನ್ ಕಡೆಯಿಂದ ರೈಲ್ವೆ ಸಚಿವರು, ಕೇಂದ್ರ ಅರ್ಬನ್ ಡೆವಲಪ್ಮೆಂಟ್ ಮಿನಿಸ್ಟರ್ ಹಾಗೂ ಸಿಎಂಗೆ ದೂರು ನೀಡಲಾಗಿದೆ. ಮೆಟ್ರೋ ಎಂಪ್ಲಾಯಿಸ್ ಅಸೋಸಿಯೇಷನ್ ಉಪಾಧ್ಯಕ್ಷ ಸೂರ್ಯ ನಾರಾಯಣ ಮೂರ್ತಿ ಎಂಬುವವರು ಮೆಟ್ರೋ ಎಂಡಿ ಅಂಜುಂ ಪರ್ವೇಜ್ ವಿರುದ್ಧ ಆರೋಪ ಮಾಡಿ ದೂರು ನೀಡಿದ್ದಾರೆ.

ಮೆಟ್ರೋ ಎಂಡಿ ಅಂಜುಂ ಪರ್ವೇಜ್ ಅವರು ಸುಮಾರು 500 ಉದ್ಯೋಗಿಗಳನ್ನು ಅಕ್ರಮವಾಗಿ ನೇಮಕ ಮಾಡಿದ್ದಾರೆ. ಯಾವುದೇ ನೋಟಿಫಿಕೇಶನ್ ಇಲ್ಲದೆ, ಸಂದರ್ಶನವಿಲ್ಲದೆ ನೇಮಕಾತಿ ಮಾಡಿದ್ದಾರೆ ಎಂದು ಸೂರ್ಯ ನಾರಾಯಣ ಮೂರ್ತಿ ಆರೋಪಿಸಿದ್ದಾರೆ. ಹಾಗೂ ಈ ಬಗ್ಗೆ ಬಿಎಂಆರ್​ಸಿಎಲ್ ಗೆ ಮಾಹಿತಿ ಕೇಳಿದ್ರೆ ಎಂಡಿ ಯಾರನ್ನು ಬೇಕಾದರೂ ನೇಮಕಾತಿ ಮಾಡಿಕೊಳ್ಳಬಹುದು ಎಂದು ಹೇಳುತ್ತಿದೆ. ಸರಿಯಾದ ವಿದ್ಯಾರ್ಹತೆ ಇಲ್ಲದಿದ್ದರೂ ನೇಮಕಾತಿ ಮಾಡಿದ್ದಾರೆ. ಇದರಿಂದ ಮೆರಿಟ್ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ರಾಜಕಾರಣಿಗಳ ಒತ್ತಡಕ್ಕೆ ಮಣಿದು ಬೇಕ್ ಬೇಕಾದವರಿಗೆ ಉದ್ಯೋಗ ನೀಡಿದ್ದಾರೆ. ಇದರಲ್ಲಿ ದೊಡ್ಡ ಅಕ್ರಮ ನಡೆದಿದೆ ಸರಿಯಾಗಿ ತನಿಖೆ ನಡೆಸಿದ್ರೆ ಅಕ್ರಮ ಬಯಲಾಗುತ್ತದೆ. ನೋಟಿಫಿಕೇಶನ್ ಮಾಡಿದ್ರೆ ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳಿಗೆ ಉದ್ಯೋಗ ನೀಡಬೇಕಾಗುತ್ತದೆ ಎಂದು ನೋಟಿಫಿಕೇಶನ್ ಮಾಡದೆ ಆಯ್ಕೆ ಮಾಡಿದ್ದಾರೆ. ನಿವೃತ್ತ ತಹಶೀಲ್ದಾರ್​ಗೆ ಹೆಚ್​ಆರ್ ಮ್ಯಾನೇಜರ್ ಹುದ್ದೆ ನೀಡಿದ್ದಾರೆ. 60 ರಿಂದ 75 ವಯಸ್ಸು ಆಗಿರೋರಿಗೆಲ್ಲ ಹುದ್ದೆ ನೀಡಿ ಲಕ್ಷಾಂತರ ರೂಪಾಯಿ ಸಂಬಳ ನೀಡ್ತಿದ್ದಾರೆ ಎಂದು ಮೆಟ್ರೋ ಎಂಪ್ಲಾಯಿಸ್ ಅಸೋಸಿಯೇಷನ್ ಉಪಾಧ್ಯಕ್ಷ ಸೂರ್ಯ ನಾರಾಯಣ ಮೂರ್ತಿ ಆರೋಪಿಸಿದ್ದಾರೆ.

ಇದನ್ನೂ ಓದಿ: Namma Metro: ಹೊಸ ವರ್ಷದ ಮೊದಲ​ ದಿನವೇ ನಮ್ಮ ಮೆಟ್ರೋಗೆ ರೂ. 1 ಕೋಟಿಗೂ ಆದಾಯ

ಜನರಲ್ ಮ್ಯಾನೇಜರ್, ಚೀಫ್ ಜನರಲ್ ಮ್ಯಾನೇಜರ್, ಚೀಫ್ ಇಂಜಿನಿಯರ್, ಅಡ್ವೈಸರ್ ಕನ್ಸಲ್ಟೆಂಟ್, ‘ಡೆಪ್ಯುಟಿ ಜನರಲ್ ಮ್ಯಾನೇಜರ್, ಡೆಪ್ಯೂಟಿ ಚೀಫ್ ಇಂಜಿನಿಯರ್, ಡೆಪ್ಯುಟಿ ಚೀಫ್ ಸೆಕ್ಯುರಿಟಿ ಆಫೀಸರ್, ಎಕ್ಸಿಕ್ಯುಟಿವ್ ಇಂಜಿನಿಯರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್, ಅಸಿಸ್ಟೆಂಟ್ ಮ್ಯಾನೇಜರ್, ಸೂಪರ್ವೈಸರ್ ,ಎಕ್ಸಿಕ್ಯುಟಿವ್ ಅಸಿಸ್ಟೆಂಟ್ , ಟ್ರ್ಯಾಕ್ ಮ್ಯಾನ್ ಡ್ರೈವರ್ ಯಾವುದೇ ಹುದ್ದೆಗೂ ನೋಟಿಫಿಕೇಶನ್ ಮಾಡದೆ ಕೆಲಸ ನೀಡಿದ್ದಾರೆ ಎಂದು ಸೂರ್ಯ ನಾರಾಯಣ ಮೂರ್ತಿ ತಿಳಿಸಿದ್ದಾರೆ.

ನಾವು ಮಾನವೀಯತೆಯ ಆಧಾರದಲ್ಲಿ ಕೆಲಸಕ್ಕೆ ತೆಗೆದುಕೊಂಡಿದ್ದೇವೆ

ಇನ್ನು ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮೆಟ್ರೋ ಎಂಡಿ ಅಂಜುಂ ಪರ್ವೇಜ್, ಸೂರ್ಯ ನಾರಾಯಣ ನಮ್ಮ ಯಾವುದೇ ಎಂಪ್ಲಾಯಿಸ್ ಅಸೋಸಿಯೇಷನ್ ನ ಉಪಾಧ್ಯಕ್ಷ ಅಲ್ಲ. ಆತ ಒಬ್ಬ ಬ್ಲಾಕ್ ಮೇಲರ್, ನಮ್ಮಲ್ಲಿ ಬೇರೆ ಸಿಸ್ಟಮ್ ಇದೆ ಅಸೋಸಿಯೇಷನ್ ಗಾಗಿ. ಎಲೆಕ್ಷನ್ ನಲ್ಲಿ ಯಾರು ಆಯ್ಕೆ ಆಗಿ ಬರ್ತಾರೋ ಅವರು ಮಾತ್ರ ಇಲ್ಲಿ ಅಧಿಕೃತ. ಅವರು ಎಲ್ಲರಿಗೂ ಸುಮ್ಮನೆ ಪತ್ರ ಬರೆದಿದ್ದಾರೆ ಅಷ್ಟೇ. ಮೆಟ್ರೋದಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಆರು ವರ್ಷ ಕೆಲಸ ಮಾಡಿದ ನೌಕರರನ್ನು ಮಾತ್ರ ನಾವು ಮೆಟ್ರೋ ಎಂಪ್ಲಾಯಿಸ್ ಆಗಿ ಕೆಲಸಕ್ಕೆ ತೆಗೆದುಕೊಂಡಿದ್ದೇವೆ. ಮಾನವೀಯತೆಯ ಆಧಾರದಲ್ಲಿ ಕೆಲಸಕ್ಕೆ ತೆಗೆದುಕೊಂಡಿದ್ದೇವೆ. ಇಲ್ಲಿ ಇಷ್ಟು ವರ್ಷಗಳ ಕಾಲ ಕೆಲಸ ಮಾಡಿದ ನೌಕರರಿಗೆ ನ್ಯಾಯ ಒದಗಿಸಿದ್ದೇವೆ ಅಷ್ಟೇ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:02 pm, Sat, 7 January 23

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು