AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಡಿಸೆಂಬರ್ ತಿಂಗಳಲ್ಲಿ ನಮ್ಮ ಮೆಟ್ರೋಗೆ ದಾಖಲೆ ಪ್ರಮಾಣದಲ್ಲಿ ಆದಾಯ, ಪ್ರಯಾಣಿಕರ ಸಂಖ್ಯೆಯೂ ಹೆಚ್ಚಳ

ಡಿಸೆಂಬರ್​ನಲ್ಲಿ ನಮ್ಮ ಮೆಟ್ರೋಗೆ ದಾಖಲೆ ಪ್ರಮಾಣದಲ್ಲಿ ಆದಾಯ ಹರಿದುಬಂದಿದೆ. ಡಿಸೆಂಬರ್ ತಿಂಗಳಲ್ಲಿ ಬರೋಬ್ಬರಿ 2 ಕೋಟಿ ಜನರು ಮೆಟ್ರೋ ಬಳಕೆ ಮಾಡಿದ್ದು ₹55 ಕೋಟಿ ಆದಾಯ ಸಂಗ್ರಹವಾಗಿದೆ. ದಿನದಿಂದ ದಿನಕ್ಕೆ ಮೆಟ್ರೋ ಪ್ರಯಾಣಿಕರ ಸಂಖ್ಯೆ ಹೆಚ್ಚಾಗ್ತಿದೆ ಎಂದು ಟಿವಿ9ಗೆ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Namma Metro: ಡಿಸೆಂಬರ್ ತಿಂಗಳಲ್ಲಿ ನಮ್ಮ ಮೆಟ್ರೋಗೆ ದಾಖಲೆ ಪ್ರಮಾಣದಲ್ಲಿ ಆದಾಯ, ಪ್ರಯಾಣಿಕರ ಸಂಖ್ಯೆಯೂ ಹೆಚ್ಚಳ
ನಮ್ಮ ಮೆಟ್ರೋ
ಕಿರಣ್​ ಸೂರ್ಯ
| Edited By: ಆಯೇಷಾ ಬಾನು|

Updated on: Jan 10, 2024 | 11:17 AM

Share

ಬೆಂಗಳೂರು, ಜ.10: ಹೊಸ ವರ್ಷದ ಹಿನ್ನೆಲೆ ಡಿ.31ರಂದು ಒಂದೇ ದಿನದಲ್ಲಿ ಬಿಎಂಆರ್​ಸಿಎಲ್​ಗೆ (BMRCL) ಬರೋಬ್ಬರಿ 1 ಕೋಟಿ 64 ಲಕ್ಷದ 74 ಸಾವಿರದ 918 ರೂಪಾಯಿ ಆದಾಯ ಹರಿದು ಬಂದಿತ್ತು. ಇದೀಗ ನಮ್ಮ ಮೆಟ್ರೋ (Namma Metro) ಇಡೀ ಡಿಸೆಂಬರ್ ತಿಂಗಳ ಆದಾಯದ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಡಿಸೆಂಬರ್​ನಲ್ಲಿ ನಮ್ಮ ಮೆಟ್ರೋಗೆ ದಾಖಲೆ ಪ್ರಮಾಣದಲ್ಲಿ ಆದಾಯ ಹರಿದುಬಂದಿದೆ. ಡಿಸೆಂಬರ್ ತಿಂಗಳಲ್ಲಿ ಬರೋಬ್ಬರಿ 2 ಕೋಟಿ ಜನರು ಮೆಟ್ರೋ ಬಳಕೆ ಮಾಡಿದ್ದು ₹55 ಕೋಟಿ ಆದಾಯ ಸಂಗ್ರಹವಾಗಿದೆ.

ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ. ನಮ್ಮ ಮೆಟ್ರೋ ಮೊದಲ ಬಾರಿಗೆ ಒಂದೇ ತಿಂಗಳಲ್ಲಿ ಅತ್ಯಧಿಕ ಪ್ರಯಾಣಿಕರಿಗೆ ಸೇವೆ ನೀಡುವ ಮೂಲಕ ದಾಖಲೆ ಬರೆದಿದೆ. ಡಿಸೆಂಬರ್ ಒಂದೇ ತಿಂಗಳಲ್ಲಿ ಬರೋಬ್ಬರಿ 2 ಕೋಟಿ ಜನರು ಮೆಟ್ರೋ ಬಳಕೆ ಮಾಡಿದ್ದಾರೆ. ದಿನಕ್ಕೆ ಸರಾಸರಿ 6.88 ಲಕ್ಷ ಜನರು ಸಂಚಾರ ಮಾಡಿದ್ದಾರೆ. ವರ್ಷದ ಕೊನೆ ತಿಂಗಳಾದ ಡಿಸೆಂಬರ್​ನಲ್ಲಿ ಬರೋಬ್ಬರಿ ₹55 ಕೋಟಿ ಆದಾಯ ಹರಿದು‌ ಬಂದಿದೆ. ಡಿಸೆಂಬರ್ ನ ಒಟ್ಟು ಪ್ರಯಾಣಿಕರ ಸಂಖ್ಯೆ 2,13,34,076. ದಿನದ ಸರಾಸರಿ ಪ್ರಯಾಣಿಕರ ಸಂಖ್ಯೆ 6,88,196 . ದಿನದಿಂದ ದಿನಕ್ಕೆ ಮೆಟ್ರೋ ಪ್ರಯಾಣಿಕರ ಸಂಖ್ಯೆ ಹೆಚ್ಚಾಗ್ತಿದೆ ಎಂದು ಟಿವಿ9ಗೆ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೆಟ್ರೋದಲ್ಲಿ ಸಾಲು ಸಾಲು ಅವಘಡ; ಎಚ್ಚೆತ್ತ ಬಿಎಂಆರ್​ಸಿಎಲ್, ಪ್ರಯಾಣಿಕರ ಸುರಕ್ಷತೆಗೆ ಫ್ಲಾಟ್ ಫಾರ್ಮ್ ಸ್ಕ್ರೀನ್ ಡೋರ್ ನಿರ್ಮಾಣ

ಹೊಸ ವರ್ಷದ ವೇಳೆ ಒಂದೇ ದಿನದಲ್ಲಿ ದಾಖಲೆಯ ಆದಾಯ

ಇನ್ನು ಡಿ.31ರ ಭಾನುವಾರ ನಮ್ಮ‌ ಮೆಟ್ರೋದಲ್ಲಿ 6 ಲಕ್ಷ 26 ಸಾವಿರದ 202 ಜನ ಸಂಚಾರ ಮಾಡಿದ್ದು, ಹೊಸ ವರ್ಷದ ಹಿನ್ನೆಲೆ ಮೆಟ್ರೋ ಸೇವೆ ವಿಸ್ತರಣೆಯಿಂದ‌ ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಬಾರಿ ಏರಿಕೆಯಾಗಿತ್ತು. ಅಂದು ಬಂದೇ ದಿನ ಬರೊಬ್ಬರಿ 1 ಕೋಟಿ 64 ಲಕ್ಷದ 74 ಸಾವಿರದ 918 ರೂಪಾಯಿ ಆದಾಯ ಬಂದಿದೆ. ಸಾಮಾನ್ಯವಾಗಿ ಭಾನುವಾರ ಮೆಟ್ರೋ ಪ್ರಯಾಣಿಕರ ಸಂಖ್ಯೆ 5 ಲಕ್ಷ ದಾಟೋದು ಡೌಟ್. ಆದರೆ ಡಿ.31ರಂದು ಹೊಸ ವರ್ಷ ಬಂದ ಹಿನ್ನೆಲೆ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿತ್ತು. ನ್ಯೂ ಇಯರ್ ಹಿನ್ನೆಲೆ ರಾತ್ರಿ 2.15 ಗಂಟೆ ತನಕ ನಮ್ಮ ಮೆಟ್ರೋ ಸೇವೆ ಇತ್ತು. ದಟ್ಟಣೆ ಹೆಚ್ಚಿರುವ ಹಿನ್ನೆಲೆ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳಲ್ಲಿ ಮಧ್ಯರಾತ್ರಿ ಟಿಕೆಟ್‌ ವಿತರಣೆ ಇರಲಿಲ್ಲ. ಆ ನಿಲ್ದಾಣಗಳಿಂದ ಪ್ರಯಾಣಿಸುವವರಿಗೆ 50 ರೂಪಾಯಿ ರಿಟರ್ನ್‌ ಜರ್ನಿ ಪೇಪರ್‌ ಟಿಕೆಟ್‌ ವಿತರಿಸಲಾಗಿತ್ತು. ಮುಂಚಿತವಾಗಿಯೇ ಪ್ರಯಾಣಿಕರು ರಿಟರ್ನ್ ಜರ್ನಿ ಟಿಕೆಟ್ ಖರೀದಿ ಕೂಡ ಮಾಡಿದ್ರು. ಇನ್ನು ಸ್ಮಾರ್ಟ್‌ ಕಾರ್ಡ್ ಮತ್ತು ಕ್ಯೂಆರ್‌ ಕೋಡ್ ಟಿಕೆಟ್‌‌ ಗೆ ಎಂದಿನಂತೆ ರಿಯಾಯಿತಿ ಇತ್ತು. ಅಲ್ಲದೆ ರಾತ್ರಿ 11.30ರ ನಂತರ ಎಂ.ಜಿ. ರಸ್ತೆಯ ಮೆಟ್ರೋ ನಿಲ್ದಾಣ ಪ್ರವೇಶ ನಿರ್ಬಂಧವಿತ್ತು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ