AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಹಸಿರು ಮಾರ್ಗ ಶೀಘ್ರ ವಿಸ್ತರಣೆ: ಸದ್ಯದಲ್ಲೇ ನಾಗಸಂದ್ರ – ಮಾದಾವರ ನಡುವೆ ಸಂಚಾರ

ಮಾದಾವರ ಜನರು ಐದು ವರ್ಷಗಳಿಂದ ಬೆಂಗಳೂರಿನ ಶರವೇಗದ ಸಂಚಾರ ಸರದಾರ ನಮ್ಮ ಮೆಟ್ರೋಗಾಗಿ ಕಾದು ಕುಳಿತಿದ್ದರು. ನಗರಕ್ಕೆ ವೇಗವಾಗಿ ತಲುಪಬಹುದು ಎಂದು ವರ್ಷಗಳಿಂದ ಕಾಯುತ್ತಾ ಇದ್ದರು. ಕಾದು ಕುಳಿತಿದ್ದ ಜನರಿಗೆ ಕೊನೆಗೂ ಗುಡ್ ನ್ಯೂಸ್ ಸಿಕ್ಕೇ ಬಿಟ್ಟಿದೆ. ಸದ್ಯದಲ್ಲೇ ನಾಗಸಂದ್ರ ಟು ಮಾದಾವರ ನಡುವೆ ಮೆಟ್ರೋ ಸಂಚಾರ ಆರಂಭವಾಗಲಿದೆ.

ನಮ್ಮ ಮೆಟ್ರೋ ಹಸಿರು ಮಾರ್ಗ ಶೀಘ್ರ ವಿಸ್ತರಣೆ: ಸದ್ಯದಲ್ಲೇ ನಾಗಸಂದ್ರ - ಮಾದಾವರ ನಡುವೆ ಸಂಚಾರ
ನಮ್ಮ ಮೆಟ್ರೋ ಹಸಿರು ಮಾರ್ಗ
Kiran Surya
| Edited By: |

Updated on: Jul 12, 2024 | 7:07 AM

Share

ಬೆಂಗಳೂರು, ಜುಲೈ 12: ನಮ್ಮ ಮೆಟ್ರೋ ಈಗ ಬೆಂಗಳೂರಿನಲ್ಲಿ ವೇಗವಾಗಿ ತನ್ನ ವ್ಯಾಪ್ತಿ ವಿಸ್ತರಿಸಿಕೊಳ್ಳುತ್ತಿದೆ. ಅತ್ತ ಒಂದಿಲ್ಲೊಂದು ಕಾರಣದಿಂದ ವಿಳಂಬವಾಗುತ್ತಿದ್ದ ನಾಗಸಂದ್ರದಿಂದ ಮಾದವಾರ ಬಿಐಇಸಿ ಮೆಟ್ರೋ ನಿಲ್ದಾಣವರೆಗಿನ 3.2 ಕಿಮೀ ವಿಸ್ತರಿತ ಮಾರ್ಗ ಜನ ಬಳಕೆಗೆ ಮುಕ್ತ ಆಗುವ ಕಾಲ ಸನ್ನಿಹಿತದಲ್ಲಿದೆ. ಸದ್ಯದಲ್ಲೇ ಲೋಕಾರ್ಪಣೆ ಮಾಡಲು ತಯಾರಿ ನಡೆಯುತ್ತಿದೆ. ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾದರೆ ಸಿಲ್ಕ್ ಇನ್ಸ್ಟಿಟ್ಯೂಟ್​ನಿಂದ ಮಾದಾವರ ನಡುವಣ ಸಂಚಾರ ಸುಗಮವಾಗಲಿದೆ.

ನಾಗಸಂದ್ರ – ಮಾದಾವರ ಮೆಟ್ರೋ ಮಾರ್ಗ ಶೀಘ್ರದಲ್ಲೇ ಲೋಕಾರ್ಪಣೆಗೊಳ್ಳಲಿರುವ ಬಗ್ಗೆ ಬಿಎಂಆರ್​​ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ್ ಚವ್ಹಾಣ್ ಸುಳಿವು ನೀಡಿದ್ದಾರೆ.

ನಮ್ಮ ಮೆಟ್ರೋ ಹಸಿರು ಮಾರ್ಗದ ಶೀಘ್ರ ವಿಸ್ತರಣೆಯತ್ತ ಬಿಎಂಆರ್​​ಸಿಎಲ್ ಗಮನಹರಿಸಿದೆ. ಈ ಮಾರ್ಗ ವಿಸ್ತರಣೆ ಮಾಡುವುದರಿಂದ ನೆಲಮಂಗಲ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಮತ್ತಷ್ಟು ಹತ್ತಿರ ಆಗಲಿದೆ ಎಂದು ಅವರು ತಿಳಿಸಿದ್ದಾರೆ.

ನೆಲಮಂಗಲ – ಬೆಂಗಳೂರು ಪ್ರಯಾಣ ಸುಲಭ

ಮಾದಾವರ ಮೆಟ್ರೋ ಸ್ಟೇಷನ್​​ನಿಂದ ನೆಲಮಂಗಲಕ್ಕೆ ಕೇವಲ ಆರು ಕಿಮೀ ಮಾತ್ರ ದೂರವಿದೆ. ಸಿಟಿಗೆ ಹೋಗಿ ಬರುವುದಕ್ಕೆ ಸುಲಭ ಆಗುತ್ತದೆ. ಮಂಜುನಾಥ ನಗರ, ಚಿಕ್ಕ ಬಿದರಕಲ್ಲು, ಮಾದಾವರವರೆಗೆ ಸಂಪರ್ಕ ಕಲ್ಪಿಸಲಿರುವ ಹಸಿರು ಮಾರ್ಗ ಇದಾಗಿದ್ದು, ಸದ್ಯ ಮಾರ್ಗದಲ್ಲಿ ಸಿಗ್ನಲಿಂಗ್ ಟೆಸ್ಟ್ ಕೆಲಸ ಪ್ರಗತಿಯಲ್ಲಿದೆ.

ನಾಗಸಂದ್ರ – ಮಾದವಾರ ಕಾಮಗಾರಿ ವಿಳಂಬಕ್ಕೆ ಕಾರಣಗಳೇನು?

ಮಾರ್ಗದ ವಿಸ್ತರಣೆ ಕಾಮಗಾರಿ ಆರಂಭದಿಂದಲೂ ಅನೇಕ ಸಮಸ್ಯೆಗಳನ್ನು ಎದುರಿಸಿದೆ. ನಾಗಸಂದ್ರ – ಮಾದವಾರ ನಡುವಿನ ಮೂರು ಕಿಮೀ ಮೆಟ್ರೋ ಕಾಮಗಾರಿ 2017 ರಲ್ಲಿ ಪ್ರಾರಂಭವಾಯಿತು. 2019 ರ ಮಧ್ಯದ ವೇಳೆಗೆ ಕಾಮಗಾರಿ ಮುಗಿಸುವ ಗುರಿ ಹೊಂದಿತ್ತಾದರೂ, ಭೂಸ್ವಾಧೀನದಲ್ಲಿ ವಿಳಂಬವಾದ ಕಾರಣ ಕಾಮಗಾರಿ ವಿಳಂಬವಾಗುತ್ತಲೇ ಸಾಗಿತು. ಭೂಸ್ವಾಧೀನ ಸಮಸ್ಯೆಗಳು, ವಿಶೇಷವಾಗಿ ನೈಸ್‌ ರಸ್ತೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿನ ವಿಳಂಬ ಮತ್ತು ಕೋವಿಡ್ ಸಾಂಕ್ರಾಮಿಕ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಕಾರಣಗಳಾಗಿವೆ.

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ 4 ದಿನ ಸಂಚಾರ ಬಂದ್​: ಪರ್ಯಾಯ ಮಾರ್ಗ ಸೂಚಿಸಿದ ಟ್ರಾಫಿಕ್ ​ಪೊಲೀಸ್​

ನಾಗಸಂದ್ರ – ಮಾದವಾರ ಮೆಟ್ರೋ ಮಾರ್ಗ ಲೋಕಾರ್ಪಣೆ ಬಗ್ಗೆ ಸ್ಥಳೀಯ ನಿವಾಸಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಒಟ್ಟಿನಲ್ಲಿ ಸದ್ಯದಲ್ಲೇ ನಮ್ಮ ಮೆಟ್ರೋ ನಾಗಸಂದ್ರ – ಮಾದವಾರ ಸಂಚಾರ ಆರಂಭವಾಗುವ ಸುಳಿವು ದೊರೆತಿದ್ದು, ಇದರಿಂದ ಜನರ 5 ವರ್ಷದ ಕಾಯುವಿಕೆ ಕೊನೆಗೂ ಅಂತ್ಯ ಆಗುವ ಲಕ್ಷಣ ಕಾಣಿಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್