AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಂಗ ಕೊರೆಯುವ ಯಂತ್ರಗಳಿಗೆ ಬಂಡೆಗಳು ಅಡ್ಡಿ; ಮೆಟ್ರೋ ಪಿಂಕ್ ಲೈನ್ ಸುರಂಗ ಕಾಮಗಾರಿ ವಿಳಂಬ

ನಮ್ಮ ಮೆಟ್ರೋ ಪಿಂಕ್ ಲೈನ್ ಕಾಮಗಾರಿಗೆ ಈಗ ಹೊಸದೊಂದು ಅಡ್ಡಿ ಎದುರಾಗಿದೆ. ಪರಿಣಾಮವಾಗಿ ಕಾಮಗಾರಿ ವಿಳಂಬವಾಗುವ ಸಾಧ್ಯತೆ ಇದೆ. ಸುರಂಗ ಕೊರೆಯುವ ಮಷಿನ್​ಗಳಿಗೆ ಎದುರಾದ ಸಮಸ್ಯೆ ಏನು? ಇದರಿಂದ ಕಾಮಗಾರಿ ಎಷ್ಟು ವಿಳಂಬವಾಗಲಿದೆ? ಈ ಬಗ್ಗೆ ಬಿಎಂಆರ್​ಸಿಎಲ್ ಅಧಿಕಾರಿಗಳು ಹೇಳಿದ್ದೇನು? ಎಲ್ಲ ವಿವರಗಳು ಇಲ್ಲಿವೆ.

ಸುರಂಗ ಕೊರೆಯುವ ಯಂತ್ರಗಳಿಗೆ ಬಂಡೆಗಳು ಅಡ್ಡಿ; ಮೆಟ್ರೋ ಪಿಂಕ್ ಲೈನ್ ಸುರಂಗ ಕಾಮಗಾರಿ ವಿಳಂಬ
ಸುರಂಗ ಕೊರೆಯುವ ಯಂತ್ರ
Kiran Surya
| Edited By: |

Updated on: Jun 14, 2024 | 7:32 AM

Share

ಬೆಂಗಳೂರು, ಜೂನ್ 14: ನಮ್ಮ ಮೆಟ್ರೋದ (Namma Metro) ಬಹುನಿರೀಕ್ಷಿತ ಪಿಂಕ್ ಲೈನ್ (Pink LIne) ಕಾಮಗಾರಿ ‌ಮತ್ತಷ್ಟು ವಿಳಂಬವಾಗಲಿದೆ. ಈ ಮಾರ್ಗದ ಅಂಡರ್ ಗ್ರೌಂಡ್ ಕಾಮಗಾರಿಗಾಗಿ ನೆಲದೊಳಕ್ಕೆ ಇಳಿಸಿದ್ದ ಎರಡು ಟಿಬಿಎಂ ಮಷಿನ್​ಗಳಿಗೆ ಬಂಡೆಗಲ್ಲುಗಳು ಅಡ್ಡಿಯಾಗಿವೆ. ಕಾಳೇನ ಅಗ್ರಹಾರದಿಂದ ನಾಗವಾರ ಸಂಪರ್ಕಿಸುವ ಪಿಂಕ್‌ ಲೈನ್​ನ 21 ಕಿಮೀ ಮಾರ್ಗದ 13 ಕಿಮೀ ಸುರಂಗ ಮಾರ್ಗದಲ್ಲಿ ಮೆಟ್ರೋ ಲೈನ್ ಹಾದು ಹೋಗ್ತಿದ್ದು ಇದು ಬೆಂಗಳೂರಿನ ಅತಿ ದೊಡ್ಡ ಮೆಟ್ರೋ ಸುರಂಗ ಕಾಮಗಾರಿಯಾಗಿದೆ. ಈ ಕಾಮಗಾರಿಗೆ ಈಗಾಗಲೇ ಒಂಬತ್ತು ಟಿಬಿಎಂ ಮಷಿನ್​ಗಳ‌ ಮೂಲಕ ಸುರಂಗ ಕಾಮಗಾರಿ ಮಾಡಲಾಗ್ತಿದೆ. ಏಳು ಟಿಬಿಎಂ ಮಷಿನ್​​​ಗಳು ಯಶ್ವಸಿಯಾಗಿ ಸುರಂಗ ಕೊರೆದು ಹೊರಗೆ ಬಂದಿದ್ದು, ಎರಡು ಟಿಬಿಎಂ ಮಷಿನ್​​ಗಳಿಗೆ ಇದೀಗ ಬಂಡೆಕಲ್ಲಿನ ಸವಾಲು ಎದುರಾಗಿದೆ ಇದರಿಂದ ಮೆಟ್ರೋ ಕಾಮಗಾರಿ ವಿಳಂಬವಾಗಲಿದೆ.

ತುಂಗಾ ಮತ್ತು ಭದ್ರಾ ಟಿಬಿಎಂ ಮಷಿನ್​​ಗಳು ಆಗಸ್ಟ್ ಒಳಗೆ ಸುರಂಗ ಕೊರೆದು ಹೊರ ಬರಬೇಕಿತ್ತು. ಆದರೆ ಬಂಡೆ ಕಲ್ಲುಗಳು ಸಿಕ್ಕಿರುವ ‌ಕಾರಣ ಈ ವರ್ಷದ ಕೊನೆಯವರೆಗೂ ಕಾಮಗಾರಿ ನಡೆಯಲಿದೆಯಂತೆ. ಮುಂದೆಯೂ ಬಂಡೆ ಕಲ್ಲುಗಳು ಎದುರಾದರೆ ಮತ್ತಷ್ಟು ವಿಳಂಬ ವಾಗಲಿದೆ. ತುಂಗಾ ಟಿಬಿಎಂ ಶೇ 45 ರಷ್ಟು ಸುರಂಗ ಕೊರೆದಿದ್ದು, ಭದ್ರಾ ಶೇ 22 ರಷ್ಟು ಸುರಂಗ ಕೊರೆದಿದೆ. ಈ ಎರಡು ಟಿಬಿಎಂಗಳು ಪ್ರತಿದಿನ ಐದು ಕಿಮೀ ನಷ್ಟು ಸುರಂಗ ಕೊರೆಯುವ ಸಾಮರ್ಥ್ಯ ಹೊಂದಿದ್ದು ಬಂಡೆಗಲ್ಲು ಸಿಕ್ಕಿರುವ ಕಾರಣ 3 ಕಿಮೀ ನಷ್ಟು ಮಾತ್ರ ಕೊರೆಯಲು ಸಾಧ್ಯವಾಗಲಿದೆ.

ಈ ಮಾರ್ಗದಲ್ಲಿ ಒಟ್ಟು 18 ಸ್ಟೇಷನ್ ಬರಲಿದ್ದು ಅದರಲ್ಲಿ ಆರು ಎಲಿವೇಟೆಡ್ 12 ಅಂಡರ್ ಗ್ರೌಂಡ್ ಸ್ಟೇಷನ್​​ಗಳು ಇರಲಿದೆ. ಈ ಬಗ್ಗೆ ಮಾತಾನಾಡಿದ ಮೆಟ್ರೋ ಅಧಿಕಾರಿಗಳು, ಸುರಂಗ ಕೊರೆಯುವ ಕಾರ್ಯ ಎರಡ್ಮೂರು ತಿಂಗಳು ಸುರಂಗ ತಡವಾಗಬಹುದು ಎಂದಿದ್ದಾರೆ. ಈ ಬಗ್ಗೆ ಬಿಎಂಆರ್​ಸಿಎಲ್​​​ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್ ಕೂಡ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೆಟ್ಟು ನಿಂತ ಮೆಟ್ರೋ: ಡೋರ್ ಓಪನ್ ಆಗದೆ ಒಳಗಿದ್ದ ಪ್ರಯಾಣಿಕರು ಪರದಾಟ

ಒಟ್ಟಿನಲ್ಲಿ ಆಗಸ್ಟ್ ವೇಳೆಗೆ ಎರಡು ಟಿಬಿಎಂ ಮಷಿನ್​ಗಳು ಸುರಂಗ ಕೊರೆದು ಹೊರಗೆ ಬರುತ್ತದೆ ಅಂದುಕೊಂಡಿದ್ದ ಮೆಟ್ರೋ ಅಧಿಕಾರಿಗಳಿಗೆ ಈ ಬಂಡೆಗಲ್ಲು ಅಡ್ಡಲಾಗಿ ಸಿಕ್ಕಿರುವುದು ದೊಡ್ಡ ತಲೆ ನೋವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ