AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಂಗ ಕೊರೆಯುವ ಯಂತ್ರಗಳಿಗೆ ಬಂಡೆಗಳು ಅಡ್ಡಿ; ಮೆಟ್ರೋ ಪಿಂಕ್ ಲೈನ್ ಸುರಂಗ ಕಾಮಗಾರಿ ವಿಳಂಬ

ನಮ್ಮ ಮೆಟ್ರೋ ಪಿಂಕ್ ಲೈನ್ ಕಾಮಗಾರಿಗೆ ಈಗ ಹೊಸದೊಂದು ಅಡ್ಡಿ ಎದುರಾಗಿದೆ. ಪರಿಣಾಮವಾಗಿ ಕಾಮಗಾರಿ ವಿಳಂಬವಾಗುವ ಸಾಧ್ಯತೆ ಇದೆ. ಸುರಂಗ ಕೊರೆಯುವ ಮಷಿನ್​ಗಳಿಗೆ ಎದುರಾದ ಸಮಸ್ಯೆ ಏನು? ಇದರಿಂದ ಕಾಮಗಾರಿ ಎಷ್ಟು ವಿಳಂಬವಾಗಲಿದೆ? ಈ ಬಗ್ಗೆ ಬಿಎಂಆರ್​ಸಿಎಲ್ ಅಧಿಕಾರಿಗಳು ಹೇಳಿದ್ದೇನು? ಎಲ್ಲ ವಿವರಗಳು ಇಲ್ಲಿವೆ.

ಸುರಂಗ ಕೊರೆಯುವ ಯಂತ್ರಗಳಿಗೆ ಬಂಡೆಗಳು ಅಡ್ಡಿ; ಮೆಟ್ರೋ ಪಿಂಕ್ ಲೈನ್ ಸುರಂಗ ಕಾಮಗಾರಿ ವಿಳಂಬ
ಸುರಂಗ ಕೊರೆಯುವ ಯಂತ್ರ
ಕಿರಣ್​ ಸೂರ್ಯ
| Edited By: |

Updated on: Jun 14, 2024 | 7:32 AM

Share

ಬೆಂಗಳೂರು, ಜೂನ್ 14: ನಮ್ಮ ಮೆಟ್ರೋದ (Namma Metro) ಬಹುನಿರೀಕ್ಷಿತ ಪಿಂಕ್ ಲೈನ್ (Pink LIne) ಕಾಮಗಾರಿ ‌ಮತ್ತಷ್ಟು ವಿಳಂಬವಾಗಲಿದೆ. ಈ ಮಾರ್ಗದ ಅಂಡರ್ ಗ್ರೌಂಡ್ ಕಾಮಗಾರಿಗಾಗಿ ನೆಲದೊಳಕ್ಕೆ ಇಳಿಸಿದ್ದ ಎರಡು ಟಿಬಿಎಂ ಮಷಿನ್​ಗಳಿಗೆ ಬಂಡೆಗಲ್ಲುಗಳು ಅಡ್ಡಿಯಾಗಿವೆ. ಕಾಳೇನ ಅಗ್ರಹಾರದಿಂದ ನಾಗವಾರ ಸಂಪರ್ಕಿಸುವ ಪಿಂಕ್‌ ಲೈನ್​ನ 21 ಕಿಮೀ ಮಾರ್ಗದ 13 ಕಿಮೀ ಸುರಂಗ ಮಾರ್ಗದಲ್ಲಿ ಮೆಟ್ರೋ ಲೈನ್ ಹಾದು ಹೋಗ್ತಿದ್ದು ಇದು ಬೆಂಗಳೂರಿನ ಅತಿ ದೊಡ್ಡ ಮೆಟ್ರೋ ಸುರಂಗ ಕಾಮಗಾರಿಯಾಗಿದೆ. ಈ ಕಾಮಗಾರಿಗೆ ಈಗಾಗಲೇ ಒಂಬತ್ತು ಟಿಬಿಎಂ ಮಷಿನ್​ಗಳ‌ ಮೂಲಕ ಸುರಂಗ ಕಾಮಗಾರಿ ಮಾಡಲಾಗ್ತಿದೆ. ಏಳು ಟಿಬಿಎಂ ಮಷಿನ್​​​ಗಳು ಯಶ್ವಸಿಯಾಗಿ ಸುರಂಗ ಕೊರೆದು ಹೊರಗೆ ಬಂದಿದ್ದು, ಎರಡು ಟಿಬಿಎಂ ಮಷಿನ್​​ಗಳಿಗೆ ಇದೀಗ ಬಂಡೆಕಲ್ಲಿನ ಸವಾಲು ಎದುರಾಗಿದೆ ಇದರಿಂದ ಮೆಟ್ರೋ ಕಾಮಗಾರಿ ವಿಳಂಬವಾಗಲಿದೆ.

ತುಂಗಾ ಮತ್ತು ಭದ್ರಾ ಟಿಬಿಎಂ ಮಷಿನ್​​ಗಳು ಆಗಸ್ಟ್ ಒಳಗೆ ಸುರಂಗ ಕೊರೆದು ಹೊರ ಬರಬೇಕಿತ್ತು. ಆದರೆ ಬಂಡೆ ಕಲ್ಲುಗಳು ಸಿಕ್ಕಿರುವ ‌ಕಾರಣ ಈ ವರ್ಷದ ಕೊನೆಯವರೆಗೂ ಕಾಮಗಾರಿ ನಡೆಯಲಿದೆಯಂತೆ. ಮುಂದೆಯೂ ಬಂಡೆ ಕಲ್ಲುಗಳು ಎದುರಾದರೆ ಮತ್ತಷ್ಟು ವಿಳಂಬ ವಾಗಲಿದೆ. ತುಂಗಾ ಟಿಬಿಎಂ ಶೇ 45 ರಷ್ಟು ಸುರಂಗ ಕೊರೆದಿದ್ದು, ಭದ್ರಾ ಶೇ 22 ರಷ್ಟು ಸುರಂಗ ಕೊರೆದಿದೆ. ಈ ಎರಡು ಟಿಬಿಎಂಗಳು ಪ್ರತಿದಿನ ಐದು ಕಿಮೀ ನಷ್ಟು ಸುರಂಗ ಕೊರೆಯುವ ಸಾಮರ್ಥ್ಯ ಹೊಂದಿದ್ದು ಬಂಡೆಗಲ್ಲು ಸಿಕ್ಕಿರುವ ಕಾರಣ 3 ಕಿಮೀ ನಷ್ಟು ಮಾತ್ರ ಕೊರೆಯಲು ಸಾಧ್ಯವಾಗಲಿದೆ.

ಈ ಮಾರ್ಗದಲ್ಲಿ ಒಟ್ಟು 18 ಸ್ಟೇಷನ್ ಬರಲಿದ್ದು ಅದರಲ್ಲಿ ಆರು ಎಲಿವೇಟೆಡ್ 12 ಅಂಡರ್ ಗ್ರೌಂಡ್ ಸ್ಟೇಷನ್​​ಗಳು ಇರಲಿದೆ. ಈ ಬಗ್ಗೆ ಮಾತಾನಾಡಿದ ಮೆಟ್ರೋ ಅಧಿಕಾರಿಗಳು, ಸುರಂಗ ಕೊರೆಯುವ ಕಾರ್ಯ ಎರಡ್ಮೂರು ತಿಂಗಳು ಸುರಂಗ ತಡವಾಗಬಹುದು ಎಂದಿದ್ದಾರೆ. ಈ ಬಗ್ಗೆ ಬಿಎಂಆರ್​ಸಿಎಲ್​​​ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್ ಕೂಡ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೆಟ್ಟು ನಿಂತ ಮೆಟ್ರೋ: ಡೋರ್ ಓಪನ್ ಆಗದೆ ಒಳಗಿದ್ದ ಪ್ರಯಾಣಿಕರು ಪರದಾಟ

ಒಟ್ಟಿನಲ್ಲಿ ಆಗಸ್ಟ್ ವೇಳೆಗೆ ಎರಡು ಟಿಬಿಎಂ ಮಷಿನ್​ಗಳು ಸುರಂಗ ಕೊರೆದು ಹೊರಗೆ ಬರುತ್ತದೆ ಅಂದುಕೊಂಡಿದ್ದ ಮೆಟ್ರೋ ಅಧಿಕಾರಿಗಳಿಗೆ ಈ ಬಂಡೆಗಲ್ಲು ಅಡ್ಡಲಾಗಿ ಸಿಕ್ಕಿರುವುದು ದೊಡ್ಡ ತಲೆ ನೋವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ