AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಂಗ ಕೊರೆಯುವ ಯಂತ್ರಗಳಿಗೆ ಬಂಡೆಗಳು ಅಡ್ಡಿ; ಮೆಟ್ರೋ ಪಿಂಕ್ ಲೈನ್ ಸುರಂಗ ಕಾಮಗಾರಿ ವಿಳಂಬ

ನಮ್ಮ ಮೆಟ್ರೋ ಪಿಂಕ್ ಲೈನ್ ಕಾಮಗಾರಿಗೆ ಈಗ ಹೊಸದೊಂದು ಅಡ್ಡಿ ಎದುರಾಗಿದೆ. ಪರಿಣಾಮವಾಗಿ ಕಾಮಗಾರಿ ವಿಳಂಬವಾಗುವ ಸಾಧ್ಯತೆ ಇದೆ. ಸುರಂಗ ಕೊರೆಯುವ ಮಷಿನ್​ಗಳಿಗೆ ಎದುರಾದ ಸಮಸ್ಯೆ ಏನು? ಇದರಿಂದ ಕಾಮಗಾರಿ ಎಷ್ಟು ವಿಳಂಬವಾಗಲಿದೆ? ಈ ಬಗ್ಗೆ ಬಿಎಂಆರ್​ಸಿಎಲ್ ಅಧಿಕಾರಿಗಳು ಹೇಳಿದ್ದೇನು? ಎಲ್ಲ ವಿವರಗಳು ಇಲ್ಲಿವೆ.

ಸುರಂಗ ಕೊರೆಯುವ ಯಂತ್ರಗಳಿಗೆ ಬಂಡೆಗಳು ಅಡ್ಡಿ; ಮೆಟ್ರೋ ಪಿಂಕ್ ಲೈನ್ ಸುರಂಗ ಕಾಮಗಾರಿ ವಿಳಂಬ
ಸುರಂಗ ಕೊರೆಯುವ ಯಂತ್ರ
Kiran Surya
| Updated By: Ganapathi Sharma|

Updated on: Jun 14, 2024 | 7:32 AM

Share

ಬೆಂಗಳೂರು, ಜೂನ್ 14: ನಮ್ಮ ಮೆಟ್ರೋದ (Namma Metro) ಬಹುನಿರೀಕ್ಷಿತ ಪಿಂಕ್ ಲೈನ್ (Pink LIne) ಕಾಮಗಾರಿ ‌ಮತ್ತಷ್ಟು ವಿಳಂಬವಾಗಲಿದೆ. ಈ ಮಾರ್ಗದ ಅಂಡರ್ ಗ್ರೌಂಡ್ ಕಾಮಗಾರಿಗಾಗಿ ನೆಲದೊಳಕ್ಕೆ ಇಳಿಸಿದ್ದ ಎರಡು ಟಿಬಿಎಂ ಮಷಿನ್​ಗಳಿಗೆ ಬಂಡೆಗಲ್ಲುಗಳು ಅಡ್ಡಿಯಾಗಿವೆ. ಕಾಳೇನ ಅಗ್ರಹಾರದಿಂದ ನಾಗವಾರ ಸಂಪರ್ಕಿಸುವ ಪಿಂಕ್‌ ಲೈನ್​ನ 21 ಕಿಮೀ ಮಾರ್ಗದ 13 ಕಿಮೀ ಸುರಂಗ ಮಾರ್ಗದಲ್ಲಿ ಮೆಟ್ರೋ ಲೈನ್ ಹಾದು ಹೋಗ್ತಿದ್ದು ಇದು ಬೆಂಗಳೂರಿನ ಅತಿ ದೊಡ್ಡ ಮೆಟ್ರೋ ಸುರಂಗ ಕಾಮಗಾರಿಯಾಗಿದೆ. ಈ ಕಾಮಗಾರಿಗೆ ಈಗಾಗಲೇ ಒಂಬತ್ತು ಟಿಬಿಎಂ ಮಷಿನ್​ಗಳ‌ ಮೂಲಕ ಸುರಂಗ ಕಾಮಗಾರಿ ಮಾಡಲಾಗ್ತಿದೆ. ಏಳು ಟಿಬಿಎಂ ಮಷಿನ್​​​ಗಳು ಯಶ್ವಸಿಯಾಗಿ ಸುರಂಗ ಕೊರೆದು ಹೊರಗೆ ಬಂದಿದ್ದು, ಎರಡು ಟಿಬಿಎಂ ಮಷಿನ್​​ಗಳಿಗೆ ಇದೀಗ ಬಂಡೆಕಲ್ಲಿನ ಸವಾಲು ಎದುರಾಗಿದೆ ಇದರಿಂದ ಮೆಟ್ರೋ ಕಾಮಗಾರಿ ವಿಳಂಬವಾಗಲಿದೆ.

ತುಂಗಾ ಮತ್ತು ಭದ್ರಾ ಟಿಬಿಎಂ ಮಷಿನ್​​ಗಳು ಆಗಸ್ಟ್ ಒಳಗೆ ಸುರಂಗ ಕೊರೆದು ಹೊರ ಬರಬೇಕಿತ್ತು. ಆದರೆ ಬಂಡೆ ಕಲ್ಲುಗಳು ಸಿಕ್ಕಿರುವ ‌ಕಾರಣ ಈ ವರ್ಷದ ಕೊನೆಯವರೆಗೂ ಕಾಮಗಾರಿ ನಡೆಯಲಿದೆಯಂತೆ. ಮುಂದೆಯೂ ಬಂಡೆ ಕಲ್ಲುಗಳು ಎದುರಾದರೆ ಮತ್ತಷ್ಟು ವಿಳಂಬ ವಾಗಲಿದೆ. ತುಂಗಾ ಟಿಬಿಎಂ ಶೇ 45 ರಷ್ಟು ಸುರಂಗ ಕೊರೆದಿದ್ದು, ಭದ್ರಾ ಶೇ 22 ರಷ್ಟು ಸುರಂಗ ಕೊರೆದಿದೆ. ಈ ಎರಡು ಟಿಬಿಎಂಗಳು ಪ್ರತಿದಿನ ಐದು ಕಿಮೀ ನಷ್ಟು ಸುರಂಗ ಕೊರೆಯುವ ಸಾಮರ್ಥ್ಯ ಹೊಂದಿದ್ದು ಬಂಡೆಗಲ್ಲು ಸಿಕ್ಕಿರುವ ಕಾರಣ 3 ಕಿಮೀ ನಷ್ಟು ಮಾತ್ರ ಕೊರೆಯಲು ಸಾಧ್ಯವಾಗಲಿದೆ.

ಈ ಮಾರ್ಗದಲ್ಲಿ ಒಟ್ಟು 18 ಸ್ಟೇಷನ್ ಬರಲಿದ್ದು ಅದರಲ್ಲಿ ಆರು ಎಲಿವೇಟೆಡ್ 12 ಅಂಡರ್ ಗ್ರೌಂಡ್ ಸ್ಟೇಷನ್​​ಗಳು ಇರಲಿದೆ. ಈ ಬಗ್ಗೆ ಮಾತಾನಾಡಿದ ಮೆಟ್ರೋ ಅಧಿಕಾರಿಗಳು, ಸುರಂಗ ಕೊರೆಯುವ ಕಾರ್ಯ ಎರಡ್ಮೂರು ತಿಂಗಳು ಸುರಂಗ ತಡವಾಗಬಹುದು ಎಂದಿದ್ದಾರೆ. ಈ ಬಗ್ಗೆ ಬಿಎಂಆರ್​ಸಿಎಲ್​​​ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್ ಕೂಡ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೆಟ್ಟು ನಿಂತ ಮೆಟ್ರೋ: ಡೋರ್ ಓಪನ್ ಆಗದೆ ಒಳಗಿದ್ದ ಪ್ರಯಾಣಿಕರು ಪರದಾಟ

ಒಟ್ಟಿನಲ್ಲಿ ಆಗಸ್ಟ್ ವೇಳೆಗೆ ಎರಡು ಟಿಬಿಎಂ ಮಷಿನ್​ಗಳು ಸುರಂಗ ಕೊರೆದು ಹೊರಗೆ ಬರುತ್ತದೆ ಅಂದುಕೊಂಡಿದ್ದ ಮೆಟ್ರೋ ಅಧಿಕಾರಿಗಳಿಗೆ ಈ ಬಂಡೆಗಲ್ಲು ಅಡ್ಡಲಾಗಿ ಸಿಕ್ಕಿರುವುದು ದೊಡ್ಡ ತಲೆ ನೋವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​