AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಬೈಯಪ್ಪನಹಳ್ಳಿ – ಕೆಆರ್‌ ಪುರ ನಡುವೆ ಪ್ರಾಯೋಗಿಕ ಸಂಚಾರ ಆರಂಭಿಸಿದ ಮೆಟ್ರೋ; ಆಗಸ್ಟ್ ಅಂತ್ಯದ ವೇಳೆ ಸಿದ್ಧ

1 ನೇ ರೈಲು ಸಂಚಾರ ಪರೀಕ್ಷೆಯು ಸಂಜೆ 6.04 ಕ್ಕೆ ಕೆಆರ್​ ಪುರದಿಂದ ಬೈಯಪ್ಪನಹಳ್ಳಿ ನಡುವೆ ನಿಧಾನಗತಿಯಲ್ಲಿ ನಡೆಯಿತು. ರೈಲು ಮರಳಿ ಕೆಆರ್ ಪುರ ನಿಲ್ದಾಣಕ್ಕೆ ಹಿಂತಿರುಗಿತು ಎಂದು ಬಿಎಂಆರ್​​ಸಿಎಲ್ ತಿಳಿಸಿದೆ.

Namma Metro: ಬೈಯಪ್ಪನಹಳ್ಳಿ - ಕೆಆರ್‌ ಪುರ ನಡುವೆ ಪ್ರಾಯೋಗಿಕ ಸಂಚಾರ ಆರಂಭಿಸಿದ ಮೆಟ್ರೋ; ಆಗಸ್ಟ್ ಅಂತ್ಯದ ವೇಳೆ ಸಿದ್ಧ
ಮೆಟ್ರೋImage Credit source: PTI
TV9 Web
| Edited By: |

Updated on: Jul 27, 2023 | 2:57 PM

Share

ಬೆಂಗಳೂರು: ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (BMRCL) ಬೈಯಪ್ಪನಹಳ್ಳಿ – ಕೆಆರ್‌ ಪುರ ಮೆಟ್ರೊ ನಿಲ್ದಾಣಗಳ ನಡುವೆ ಬುಧವಾರ ಪ್ರಾಯೋಗಿಕ ಸಂಚಾರ ಆರಂಭಿಸಿದ್ದು, ಪ್ರತಿನಿತ್ಯ ವೈಟ್‌ಫೀಲ್ಡ್‌ಗೆ ತೆರಳುವ ಮತ್ತು ಅಲ್ಲಿಂದ ಬರುವ ಜನರಿಗೆ ಭರವಸೆ ಮೂಡಿಸಿದೆ. ಪರ್ಪಲ್ ಲೈನ್‌ನ ಪ್ರಮುಖ ವಿಭಾಗದಲ್ಲಿ ಪ್ರಾಯೋಗಿಕ ಸಂಚಾರ ಬುಧವಾರ ಸಂಜೆ 6 ಗಂಟೆಗೆ ಪ್ರಾರಂಭವಾಯಿತು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

1 ನೇ ರೈಲು ಸಂಚಾರ ಪರೀಕ್ಷೆಯು ಸಂಜೆ 6.04 ಕ್ಕೆ ಕೆಆರ್​ ಪುರದಿಂದ ಬೈಯಪ್ಪನಹಳ್ಳಿ ನಡುವೆ ನಿಧಾನಗತಿಯಲ್ಲಿ ನಡೆಯಿತು. ರೈಲು ಮರಳಿ ಕೆಆರ್ ಪುರ ನಿಲ್ದಾಣಕ್ಕೆ ಹಿಂತಿರುಗಿತು ಎಂದು ಬಿಎಂಆರ್​​ಸಿಎಲ್ ಟ್ವೀಟ್ ಮಾಡಿದೆ.

2023 ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವು ವಾರಗಳ ಮೊದಲು, ಮಾರ್ಚ್ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರು 13.71 ಕಿಮೀ ವೈಟ್‌ಫೀಲ್ಡ್ (ಕಾಡುಗೋಡಿ) – ಕೃಷ್ಣರಾಜಪುರ (ಕೆಆರ್ ಪುರ) ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದ್ದರು. ಬೈಯಪ್ಪನಹಳ್ಳಿ-ಕೆಆರ್ ಪುರ ನಡುವಣ ಸಂಪರ್ಕ ಇಲ್ಲದ ಕಾರಣ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಫೀಡರ್ ಬಸ್ ಸೇವೆಗಳನ್ನು ಪ್ರಾರಂಭಿಸಿತ್ತು.

ಇದನ್ನೂ ಓದಿ: BMRCL: ನಮ್ಮ ಮೆಟ್ರೋದಲ್ಲಿ ಹೃದಯಘಾತದಿಂದ ವ್ಯಕ್ತಿ ಸಾವು; ಬಿಎಂಆರ್​ಸಿಎಲ್ ವಿರುದ್ಧ ಎಫ್​ಐಆರ್ ದಾಖಲು

ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಆಗಸ್ಟ್ ಅಂತ್ಯದ ವೇಳೆಗೆ ಬೈಯಪ್ಪನಹಳ್ಳಿ – ಕೆಆರ್ ಪುರ ಮಾರ್ಗದಲ್ಲಿ ಮೆಟ್ರೋ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಬಿಎಂಆರ್​ಸಿಎಲ್ ಉದ್ದೇಶಿಸಿದೆ. ಸಂಚಾರ ಆರಂಭಗೊಂಡರೆ ಪ್ರಯಾಣಿಕರ ಸಂಖ್ಯೆಯಲ್ಲಿ ಗಮನಾರ್ಹ ಹೆಚ್ಚಳವಾಗಬಹುದು ಎಂದು ಬಿಎಂಆರ್​ಸಿಎಲ್ ನಿರೀಕ್ಷಿಸುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ