AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಬೈಯಪ್ಪನಹಳ್ಳಿ – ಕೆಆರ್‌ ಪುರ ನಡುವೆ ಪ್ರಾಯೋಗಿಕ ಸಂಚಾರ ಆರಂಭಿಸಿದ ಮೆಟ್ರೋ; ಆಗಸ್ಟ್ ಅಂತ್ಯದ ವೇಳೆ ಸಿದ್ಧ

1 ನೇ ರೈಲು ಸಂಚಾರ ಪರೀಕ್ಷೆಯು ಸಂಜೆ 6.04 ಕ್ಕೆ ಕೆಆರ್​ ಪುರದಿಂದ ಬೈಯಪ್ಪನಹಳ್ಳಿ ನಡುವೆ ನಿಧಾನಗತಿಯಲ್ಲಿ ನಡೆಯಿತು. ರೈಲು ಮರಳಿ ಕೆಆರ್ ಪುರ ನಿಲ್ದಾಣಕ್ಕೆ ಹಿಂತಿರುಗಿತು ಎಂದು ಬಿಎಂಆರ್​​ಸಿಎಲ್ ತಿಳಿಸಿದೆ.

Namma Metro: ಬೈಯಪ್ಪನಹಳ್ಳಿ - ಕೆಆರ್‌ ಪುರ ನಡುವೆ ಪ್ರಾಯೋಗಿಕ ಸಂಚಾರ ಆರಂಭಿಸಿದ ಮೆಟ್ರೋ; ಆಗಸ್ಟ್ ಅಂತ್ಯದ ವೇಳೆ ಸಿದ್ಧ
ಮೆಟ್ರೋImage Credit source: PTI
TV9 Web
| Edited By: |

Updated on: Jul 27, 2023 | 2:57 PM

Share

ಬೆಂಗಳೂರು: ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (BMRCL) ಬೈಯಪ್ಪನಹಳ್ಳಿ – ಕೆಆರ್‌ ಪುರ ಮೆಟ್ರೊ ನಿಲ್ದಾಣಗಳ ನಡುವೆ ಬುಧವಾರ ಪ್ರಾಯೋಗಿಕ ಸಂಚಾರ ಆರಂಭಿಸಿದ್ದು, ಪ್ರತಿನಿತ್ಯ ವೈಟ್‌ಫೀಲ್ಡ್‌ಗೆ ತೆರಳುವ ಮತ್ತು ಅಲ್ಲಿಂದ ಬರುವ ಜನರಿಗೆ ಭರವಸೆ ಮೂಡಿಸಿದೆ. ಪರ್ಪಲ್ ಲೈನ್‌ನ ಪ್ರಮುಖ ವಿಭಾಗದಲ್ಲಿ ಪ್ರಾಯೋಗಿಕ ಸಂಚಾರ ಬುಧವಾರ ಸಂಜೆ 6 ಗಂಟೆಗೆ ಪ್ರಾರಂಭವಾಯಿತು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

1 ನೇ ರೈಲು ಸಂಚಾರ ಪರೀಕ್ಷೆಯು ಸಂಜೆ 6.04 ಕ್ಕೆ ಕೆಆರ್​ ಪುರದಿಂದ ಬೈಯಪ್ಪನಹಳ್ಳಿ ನಡುವೆ ನಿಧಾನಗತಿಯಲ್ಲಿ ನಡೆಯಿತು. ರೈಲು ಮರಳಿ ಕೆಆರ್ ಪುರ ನಿಲ್ದಾಣಕ್ಕೆ ಹಿಂತಿರುಗಿತು ಎಂದು ಬಿಎಂಆರ್​​ಸಿಎಲ್ ಟ್ವೀಟ್ ಮಾಡಿದೆ.

2023 ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವು ವಾರಗಳ ಮೊದಲು, ಮಾರ್ಚ್ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರು 13.71 ಕಿಮೀ ವೈಟ್‌ಫೀಲ್ಡ್ (ಕಾಡುಗೋಡಿ) – ಕೃಷ್ಣರಾಜಪುರ (ಕೆಆರ್ ಪುರ) ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದ್ದರು. ಬೈಯಪ್ಪನಹಳ್ಳಿ-ಕೆಆರ್ ಪುರ ನಡುವಣ ಸಂಪರ್ಕ ಇಲ್ಲದ ಕಾರಣ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಫೀಡರ್ ಬಸ್ ಸೇವೆಗಳನ್ನು ಪ್ರಾರಂಭಿಸಿತ್ತು.

ಇದನ್ನೂ ಓದಿ: BMRCL: ನಮ್ಮ ಮೆಟ್ರೋದಲ್ಲಿ ಹೃದಯಘಾತದಿಂದ ವ್ಯಕ್ತಿ ಸಾವು; ಬಿಎಂಆರ್​ಸಿಎಲ್ ವಿರುದ್ಧ ಎಫ್​ಐಆರ್ ದಾಖಲು

ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಆಗಸ್ಟ್ ಅಂತ್ಯದ ವೇಳೆಗೆ ಬೈಯಪ್ಪನಹಳ್ಳಿ – ಕೆಆರ್ ಪುರ ಮಾರ್ಗದಲ್ಲಿ ಮೆಟ್ರೋ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಬಿಎಂಆರ್​ಸಿಎಲ್ ಉದ್ದೇಶಿಸಿದೆ. ಸಂಚಾರ ಆರಂಭಗೊಂಡರೆ ಪ್ರಯಾಣಿಕರ ಸಂಖ್ಯೆಯಲ್ಲಿ ಗಮನಾರ್ಹ ಹೆಚ್ಚಳವಾಗಬಹುದು ಎಂದು ಬಿಎಂಆರ್​ಸಿಎಲ್ ನಿರೀಕ್ಷಿಸುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ