AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಬೈಯಪ್ಪನಹಳ್ಳಿ – ಕೆಆರ್‌ ಪುರ ನಡುವೆ ಪ್ರಾಯೋಗಿಕ ಸಂಚಾರ ಆರಂಭಿಸಿದ ಮೆಟ್ರೋ; ಆಗಸ್ಟ್ ಅಂತ್ಯದ ವೇಳೆ ಸಿದ್ಧ

1 ನೇ ರೈಲು ಸಂಚಾರ ಪರೀಕ್ಷೆಯು ಸಂಜೆ 6.04 ಕ್ಕೆ ಕೆಆರ್​ ಪುರದಿಂದ ಬೈಯಪ್ಪನಹಳ್ಳಿ ನಡುವೆ ನಿಧಾನಗತಿಯಲ್ಲಿ ನಡೆಯಿತು. ರೈಲು ಮರಳಿ ಕೆಆರ್ ಪುರ ನಿಲ್ದಾಣಕ್ಕೆ ಹಿಂತಿರುಗಿತು ಎಂದು ಬಿಎಂಆರ್​​ಸಿಎಲ್ ತಿಳಿಸಿದೆ.

Namma Metro: ಬೈಯಪ್ಪನಹಳ್ಳಿ - ಕೆಆರ್‌ ಪುರ ನಡುವೆ ಪ್ರಾಯೋಗಿಕ ಸಂಚಾರ ಆರಂಭಿಸಿದ ಮೆಟ್ರೋ; ಆಗಸ್ಟ್ ಅಂತ್ಯದ ವೇಳೆ ಸಿದ್ಧ
ಮೆಟ್ರೋImage Credit source: PTI
TV9 Web
| Edited By: |

Updated on: Jul 27, 2023 | 2:57 PM

Share

ಬೆಂಗಳೂರು: ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (BMRCL) ಬೈಯಪ್ಪನಹಳ್ಳಿ – ಕೆಆರ್‌ ಪುರ ಮೆಟ್ರೊ ನಿಲ್ದಾಣಗಳ ನಡುವೆ ಬುಧವಾರ ಪ್ರಾಯೋಗಿಕ ಸಂಚಾರ ಆರಂಭಿಸಿದ್ದು, ಪ್ರತಿನಿತ್ಯ ವೈಟ್‌ಫೀಲ್ಡ್‌ಗೆ ತೆರಳುವ ಮತ್ತು ಅಲ್ಲಿಂದ ಬರುವ ಜನರಿಗೆ ಭರವಸೆ ಮೂಡಿಸಿದೆ. ಪರ್ಪಲ್ ಲೈನ್‌ನ ಪ್ರಮುಖ ವಿಭಾಗದಲ್ಲಿ ಪ್ರಾಯೋಗಿಕ ಸಂಚಾರ ಬುಧವಾರ ಸಂಜೆ 6 ಗಂಟೆಗೆ ಪ್ರಾರಂಭವಾಯಿತು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

1 ನೇ ರೈಲು ಸಂಚಾರ ಪರೀಕ್ಷೆಯು ಸಂಜೆ 6.04 ಕ್ಕೆ ಕೆಆರ್​ ಪುರದಿಂದ ಬೈಯಪ್ಪನಹಳ್ಳಿ ನಡುವೆ ನಿಧಾನಗತಿಯಲ್ಲಿ ನಡೆಯಿತು. ರೈಲು ಮರಳಿ ಕೆಆರ್ ಪುರ ನಿಲ್ದಾಣಕ್ಕೆ ಹಿಂತಿರುಗಿತು ಎಂದು ಬಿಎಂಆರ್​​ಸಿಎಲ್ ಟ್ವೀಟ್ ಮಾಡಿದೆ.

2023 ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವು ವಾರಗಳ ಮೊದಲು, ಮಾರ್ಚ್ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರು 13.71 ಕಿಮೀ ವೈಟ್‌ಫೀಲ್ಡ್ (ಕಾಡುಗೋಡಿ) – ಕೃಷ್ಣರಾಜಪುರ (ಕೆಆರ್ ಪುರ) ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದ್ದರು. ಬೈಯಪ್ಪನಹಳ್ಳಿ-ಕೆಆರ್ ಪುರ ನಡುವಣ ಸಂಪರ್ಕ ಇಲ್ಲದ ಕಾರಣ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಫೀಡರ್ ಬಸ್ ಸೇವೆಗಳನ್ನು ಪ್ರಾರಂಭಿಸಿತ್ತು.

ಇದನ್ನೂ ಓದಿ: BMRCL: ನಮ್ಮ ಮೆಟ್ರೋದಲ್ಲಿ ಹೃದಯಘಾತದಿಂದ ವ್ಯಕ್ತಿ ಸಾವು; ಬಿಎಂಆರ್​ಸಿಎಲ್ ವಿರುದ್ಧ ಎಫ್​ಐಆರ್ ದಾಖಲು

ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಆಗಸ್ಟ್ ಅಂತ್ಯದ ವೇಳೆಗೆ ಬೈಯಪ್ಪನಹಳ್ಳಿ – ಕೆಆರ್ ಪುರ ಮಾರ್ಗದಲ್ಲಿ ಮೆಟ್ರೋ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಬಿಎಂಆರ್​ಸಿಎಲ್ ಉದ್ದೇಶಿಸಿದೆ. ಸಂಚಾರ ಆರಂಭಗೊಂಡರೆ ಪ್ರಯಾಣಿಕರ ಸಂಖ್ಯೆಯಲ್ಲಿ ಗಮನಾರ್ಹ ಹೆಚ್ಚಳವಾಗಬಹುದು ಎಂದು ಬಿಎಂಆರ್​ಸಿಎಲ್ ನಿರೀಕ್ಷಿಸುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​