AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಬೈಯಪ್ಪನಹಳ್ಳಿ – ಕೆಆರ್‌ ಪುರ ನಡುವೆ ಪ್ರಾಯೋಗಿಕ ಸಂಚಾರ ಆರಂಭಿಸಿದ ಮೆಟ್ರೋ; ಆಗಸ್ಟ್ ಅಂತ್ಯದ ವೇಳೆ ಸಿದ್ಧ

1 ನೇ ರೈಲು ಸಂಚಾರ ಪರೀಕ್ಷೆಯು ಸಂಜೆ 6.04 ಕ್ಕೆ ಕೆಆರ್​ ಪುರದಿಂದ ಬೈಯಪ್ಪನಹಳ್ಳಿ ನಡುವೆ ನಿಧಾನಗತಿಯಲ್ಲಿ ನಡೆಯಿತು. ರೈಲು ಮರಳಿ ಕೆಆರ್ ಪುರ ನಿಲ್ದಾಣಕ್ಕೆ ಹಿಂತಿರುಗಿತು ಎಂದು ಬಿಎಂಆರ್​​ಸಿಎಲ್ ತಿಳಿಸಿದೆ.

Namma Metro: ಬೈಯಪ್ಪನಹಳ್ಳಿ - ಕೆಆರ್‌ ಪುರ ನಡುವೆ ಪ್ರಾಯೋಗಿಕ ಸಂಚಾರ ಆರಂಭಿಸಿದ ಮೆಟ್ರೋ; ಆಗಸ್ಟ್ ಅಂತ್ಯದ ವೇಳೆ ಸಿದ್ಧ
ಮೆಟ್ರೋImage Credit source: PTI
TV9 Web
| Edited By: |

Updated on: Jul 27, 2023 | 2:57 PM

Share

ಬೆಂಗಳೂರು: ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (BMRCL) ಬೈಯಪ್ಪನಹಳ್ಳಿ – ಕೆಆರ್‌ ಪುರ ಮೆಟ್ರೊ ನಿಲ್ದಾಣಗಳ ನಡುವೆ ಬುಧವಾರ ಪ್ರಾಯೋಗಿಕ ಸಂಚಾರ ಆರಂಭಿಸಿದ್ದು, ಪ್ರತಿನಿತ್ಯ ವೈಟ್‌ಫೀಲ್ಡ್‌ಗೆ ತೆರಳುವ ಮತ್ತು ಅಲ್ಲಿಂದ ಬರುವ ಜನರಿಗೆ ಭರವಸೆ ಮೂಡಿಸಿದೆ. ಪರ್ಪಲ್ ಲೈನ್‌ನ ಪ್ರಮುಖ ವಿಭಾಗದಲ್ಲಿ ಪ್ರಾಯೋಗಿಕ ಸಂಚಾರ ಬುಧವಾರ ಸಂಜೆ 6 ಗಂಟೆಗೆ ಪ್ರಾರಂಭವಾಯಿತು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

1 ನೇ ರೈಲು ಸಂಚಾರ ಪರೀಕ್ಷೆಯು ಸಂಜೆ 6.04 ಕ್ಕೆ ಕೆಆರ್​ ಪುರದಿಂದ ಬೈಯಪ್ಪನಹಳ್ಳಿ ನಡುವೆ ನಿಧಾನಗತಿಯಲ್ಲಿ ನಡೆಯಿತು. ರೈಲು ಮರಳಿ ಕೆಆರ್ ಪುರ ನಿಲ್ದಾಣಕ್ಕೆ ಹಿಂತಿರುಗಿತು ಎಂದು ಬಿಎಂಆರ್​​ಸಿಎಲ್ ಟ್ವೀಟ್ ಮಾಡಿದೆ.

2023 ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವು ವಾರಗಳ ಮೊದಲು, ಮಾರ್ಚ್ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರು 13.71 ಕಿಮೀ ವೈಟ್‌ಫೀಲ್ಡ್ (ಕಾಡುಗೋಡಿ) – ಕೃಷ್ಣರಾಜಪುರ (ಕೆಆರ್ ಪುರ) ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದ್ದರು. ಬೈಯಪ್ಪನಹಳ್ಳಿ-ಕೆಆರ್ ಪುರ ನಡುವಣ ಸಂಪರ್ಕ ಇಲ್ಲದ ಕಾರಣ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಫೀಡರ್ ಬಸ್ ಸೇವೆಗಳನ್ನು ಪ್ರಾರಂಭಿಸಿತ್ತು.

ಇದನ್ನೂ ಓದಿ: BMRCL: ನಮ್ಮ ಮೆಟ್ರೋದಲ್ಲಿ ಹೃದಯಘಾತದಿಂದ ವ್ಯಕ್ತಿ ಸಾವು; ಬಿಎಂಆರ್​ಸಿಎಲ್ ವಿರುದ್ಧ ಎಫ್​ಐಆರ್ ದಾಖಲು

ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಆಗಸ್ಟ್ ಅಂತ್ಯದ ವೇಳೆಗೆ ಬೈಯಪ್ಪನಹಳ್ಳಿ – ಕೆಆರ್ ಪುರ ಮಾರ್ಗದಲ್ಲಿ ಮೆಟ್ರೋ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಬಿಎಂಆರ್​ಸಿಎಲ್ ಉದ್ದೇಶಿಸಿದೆ. ಸಂಚಾರ ಆರಂಭಗೊಂಡರೆ ಪ್ರಯಾಣಿಕರ ಸಂಖ್ಯೆಯಲ್ಲಿ ಗಮನಾರ್ಹ ಹೆಚ್ಚಳವಾಗಬಹುದು ಎಂದು ಬಿಎಂಆರ್​ಸಿಎಲ್ ನಿರೀಕ್ಷಿಸುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?